ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಸಂಸ್ಥಾನ ಹಿರೇಮಠದಲ್ಲಿ ಹಮ್ಮಿಕೊಂಡಿರುವ ಕಲಬುರಗಿ ಶರಣಬಸವೇಶ್ವರ ಪುರಾಣದಲ್ಲಿ ಸೋಮವಾರ ಸಂಜೆ ಹಂತಿ ಹೊಡೆಯವ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಇಂದಿನ ಯುವಜನಾಂಗಕ್ಕೆ ಹಂತಿ ಹೊಡೆಯುವದನ್ನು ಮಾದರಿಯಾಗಿ ತೋರಿಸಿದ್ದು ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನಮ್ಮ ಭಾರತೀಯ ಪರಂಪರೆ ಜಗತ್ತಿಗೆ ಮಾದರಿಯಾಗಿದೆ. ಇಡೀ ಜಗತ್ತಿಗೆ ಅನ್ನ ನೀಡುವ, ದೇಶದ ಬೆನ್ನೆಲುಬಾಗಿರುವ ರೈತ ಬಾಂಧವರನ್ನು ಪ್ರತಿಯೊಬ್ಬರೂ ಮರೆಯದೇ ಸ್ಮರಿಸಬೇಕು. ಇಂದು ಗೋವುಗಳನ್ನು, ಎತ್ತುಗಳನ್ನು ಸಾಕುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಷಾದಕರ ಸಂಗತಿ. ಯಾವ ಮನೆಯಲ್ಲಿ ಗೋವುಗಳು, ಎತ್ತುಗಳು ಇರುತ್ತವೆ ಆ ಮನೆ ಸುಂದರವಾಗಿ ಕಾಣುತ್ತದೆ. ಇಂದಿನ ಯುವಜನಾಂಗಕ್ಕೆ ಹಂತಿ ಪದ, ಹಂತಿ ಹೊಡೆಯುವದು ಎಂಬುವದು ಗೊತ್ತಿಲ್ಲ. ಯುವಜನಾಂಗ ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಅರಿತುಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಚಂದ್ರಶೇಖರಗೌಡ ಪಾಟೀಲ, ಮಹಾಂತಪ್ಪಗೌಡ ಗುಜಗೊಂಡ, ನಿಂಗನಗೌಡ ಪಾಟೀಲ, ರೇವಣಸಿದ್ದಪ್ಪ ತಪಶೆಟ್ಟಿ, ಬಸು ಹಿಟ್ನಳ್ಲಿ, ರಮೇಶ ಔರಸಂಗ, ಮುದುಕಪ್ಪ ಮಣ್ಣೂರ, ಬಾಬು ಘೋರ್ಪಡೆ, ಬಾಬು ಹುಲಗಬಾಳ, ರಾಮು ಬಿರಾದಾರ, ಮಲ್ಲಿಕಾರ್ಜುನ ಕಬ್ಬಿನ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

