ದೇವರಹಿಪ್ಪರಗಿ: ಪಟ್ಟಣದ ೧೫ನೇ ವಾರ್ಡಿನಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗೆ ಚಾಲನೆ ನೀಡಿ, ಪೂರ್ಣಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ೧೫ನೇ ವಾರ್ಡಿನ ನಿವಾಸಿಗಳು ಬುಧವಾರ ತಹಶೀಲ್ದಾರ ಕಚೇರಿಗೆ ಆಗಮಿಸಿ ೨೦೨೨-೨೩ನೇ ಸಾಲಿನಲ್ಲಿ ಸೋಮನಗೌಡ ಪಾಟೀಲ(ಸಾಸನೂರ) ಶಾಸಕರಾದ ಸಂದರ್ಭದಲ್ಲಿ ನಗರೋತ್ಥಾನ ವಿಶೇಷ ಅನುದಾನದಡಿ ಮಂಜೂರಾದ ಕಾಮಗಾರಿಯನ್ನು ಆರಂಭಿಸಿ ನಂತರ ನಿಲ್ಲಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಕೇಳಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಜೆಸಿಬಿ ಯಂತ್ರದಿಂದ ಅಗೆದ ರಸ್ತೆ ಈವರೆಗೆ ದುರಸ್ತಿ ಕಾಣದೇ ಇರುವುದರಿಂದ ಸಾರ್ವಜನಿಕರ ತಿರುಗಾಟಕ್ಕೆ ತೊಂದರೆಯಾಗಿದೆ. ರಸ್ತೆ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲು ಕಾರಣವಾದರೂ ಏನು? ಯಾಕೆ ಪೂರ್ಣಗೊಳ್ಳಲಿಲ್ಲ ಎಂಬುದರ ಕುರಿತು ಆಡಳಿತಾಧಿಕಾರಿಗಳಾದ ತಹಶೀಲ್ದಾರ ಕೂಡಲೇ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಬರುವ ದಿನಗಳಲ್ಲಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸದೇ ಇದ್ದಲ್ಲಿ ವಾರ್ಡಿನ ನಿವಾಸಿಗಳು ಹೋರಾಟದ ಹಾದಿ ಆಯ್ದುಕೊಳ್ಳಬೇಕಾಗುತ್ತದೆ ಎಂದು ಆಗ್ರಹಿಸಿ, ಮನವಿ ಸಲ್ಲಿಸಿದರು.
ಕಾಶೀನಾಥ ವಡ್ಡೋಡಗಿ, ಜ್ಞಾನೇಶ್ವರ ಸುಗತೇಕರ, ಈರಣ್ಣ ಒಂಟೆತ್ತಿನ ರಮೇಶ ವಡ್ಡೋಡಗಿ, ಶಿವಾನಂದ ಉಪ್ಪಾರ, ಶರಣಪ್ಪ ಭೈರೋಡಗಿ, ಮುತ್ತು ಹೂಗಾರ, ಶಂಕರ ಗೋಂಧಳಿ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

