ಬಸವನಬಾಗೇವಾಡಿ: ಪಟ್ಟಣದ ನೂತನ ಪುರಸಭೆಯ ಕಾರ್ಯಾಲಯದ ಸಭಾಂಗಣದಲ್ಲಿ ಫೆ. ೧ ರಂದು ಬೆಳಗ್ಗೆ ೧೧ ಗಂಟೆಗೆ ಫೆ.೧೦ ರಿಂದ ೧೪ ರವರೆಗೆ ಬಸವನಬಾಗೇವಾಡಿ ತಾಲೂಕಿನಲ್ಲಿ ಜರುಗಲಿರುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧ ಚಿತ್ರ ಮೆರವಣಿಗೆಗೆ ಸಂಬಂಧಿಸಿದಂತೆ ತಯಾರಿ ಕುರಿತು ಚರ್ಚೆ ಮಾಡಲು ಪೂರ್ವಭಾವಿ ಸಭೆ ಕರೆಯಲಾಗಿದೆ. ಈ ಸಭೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಎಲ್ಲ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪ್ರಮುಖರು ಹಾಜರಾಗಿ ಸಲಹೆ-ಸೂಚನೆ ನೀಡಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
