ವಿಜಯಪುರ: ಇತಿಹಾಸವನ್ನು ಮರೆತವರು ಎಂದಿಗೂ ಇತಿಹಾಸ ನಿರ್ಮಿಸಲಾರರು ಅದರಂತೆ ಐತಿಹಾಸಿಕ ಪಾರಂಪರಿಕ ತಾಣಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಅದಕ್ಕೆ ಇತಿಹಾಸದ ಅಧ್ಯಯನ ಮಾಡಬೇಕು. ಅದರ ಆಳ-ಅಗಲ ಅರಿವಾಗುತ್ತದೆ ಎಂದು ನಗರದ ಜಿ ಎಫ್ ಜಿ ಸಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಜಿ.ಪತ್ತಾರ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ಹೆರಿಟೇಜ್ ಕ್ಲಬ್ ಸಂಯೋಜನೆಯಡಿಯಲ್ಲಿ ಐತಿಹಾಸಿಕ ಪಾರಂಪರಿಕ ತಾಣಗಳ ಮಹತ್ವ ಮತ್ತು ಅವುಗಳ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ದೇಶವು ಅತ್ಯಂತ ಭವ್ಯವದಾದ ಸಂಸ್ಕೃತಿಕ, ಐತಿಹಾಸಿಕ ಪಾರಂಪರಿಕ ನೆಲೆ ಬೀಡಾಗಿದೆ. ಹಲವಾರು ಇತಿಹಾಸದ ಕುರುಹುಗಳನ್ನು ಹೊಂದಿದೆ. ಅದರ ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆ ಮೇಲಿದೆ. ವಿದ್ಯಾರ್ಥಿಗಳು ಇಂತಹ ಪಾರಂಪರಿಕ ತಾಣಗಳ ಬಗ್ಗೆ ಆದ್ಯಯನ ಮಾಡಬೇಕು ಎಂದರು.
ಈ ವೇಳೆಯಲ್ಲಿ ಐಕ್ಯುಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಐತಿಹಾಸಿಕ ಪಾರಂಪರಿಕ ತಾಣಗಳು ಅಧ್ಯಯನ ಮತ್ತು ಅದರ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಇತಿಹಾಸಕ್ಕೆ ಸಂಬಂಧಿಸಿದ ಉತ್ತಮ ಪುಸ್ತಕಗಳನ್ನು ಸ್ನೇಹಿತರನ್ನಾಗಿಸಿಕೊಂಡು ವಿಷಯದ ಆಳದಲ್ಲಿ ಹೆಕ್ಕಿ ಸಂಶೋಧನೆ ಮುಂದಾಗಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯ ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ, ಹೆರಿಟೇಜ್ ಕ್ಲಬ್ ಮುಖ್ಯಸ್ಥೆ ಡಾ.ಎಂ.ಬಿ.ಪಾಟೀಲ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಐ.ಎಸ್.ಹೂಗಾರ ಪರಿಚಯ ಮತ್ತು ಸ್ವಾಗತಿಸಿದರು, ಪ್ರೊ.ಶ್ವೇತಾ ಸವನೂರ ನಿರೂಪಿಸಿದರು, ಪ್ರೊ.ರಾಜೇಶ್ವರಿ ಪುರಾಣಿಕ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

