ಸಿಂದಗಿ: ಬಸವಣ್ಣನವರ ವಚನ ತತ್ವಗಳನ್ನು ಅಳವಡಿಸಿಕೊಂಡರೆ ಜಗತ್ತಿನಲ್ಲಿ ಅಸಾದ್ಯ ಎನ್ನುವುದು ಯಾವದು ಇಲ್ಲಾ ಎಂದು ನಿವೃತ್ತ ಪ್ರಾಚಾರ್ಯ ಬಿ.ಪಿಕರ್ಜಗಿ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಜ್ಯ ಸರಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ನಿಮಿತ್ಯ ಜಾಗತಿಕ ಬಸವ ಶಾಂತಿ ಸಂಸ್ಥೆ, ಕತಾರ್ ವತಿಯಿಂದ ಸಚಿವ ಸಂಪುಟದ ಸಚಿವರಿಗೆ, ಶ್ರಮಿಸಿದ ಮಠಾಧೀಶರಿಗೆ, ಬಸವ ಅನುಯಾಯಿಗಳಿಗೆ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಜಗತ್ತಿಗೆ ಸರಳ ವಚನಗಳ ಮೂಲಕ ಅಂಧಕಾರ ಕಳೆಯುವ ಗುರುವಾಗಿದ್ದಾರೆ ಎಂದರು.
ಈ ವೇಳೆ ಹಿಕ್ಕಣಗುತ್ತಿ ಲಿಂಗಾಯತ ಮಹಾಮಠದ ಪ್ರಭುಲಿಂಗದೇವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ಶಶಿಕಾಂತಗೌಡ ಪಾಟೀಲ, ರವಿ ರಾಥೋಡ್, ಎಂ.ಆರ್.ಡೋಣಿ, ಶಶಿಧರ್ ಹೆಬ್ಬಾಳ, ಶಿವಾನಂದ ಕಲಬುರ್ಗಿ, ಗುರು ತಾರಾಪೂರ, ಆರ್,ಆರ್.ಪಾಟೀಲ, ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಆನಂದ ಶಾಬಾದಿ, ಚಂದ್ರಶೇಖರ ನಾಗರಬೆಟ್ಟ, ಎಂ.ಎಂ,ಹಂಗರಗಿ, ಶ್ರೀಶೈಲ ಯಳಮೇಲಿ ಸೇರಿದಂತೆ ಬಸವ ದಳದ ಸದಸ್ಯರು, ಬಸವಣ್ಣನವರ ಅನುಯಾಯಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು
Subscribe to Updates
Get the latest creative news from FooBar about art, design and business.
Related Posts
Add A Comment

