Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಛಾಯಾಗ್ರಾಹಕರು ನಿಜ ದಾಖಲುದಾರರು :ಹರ್ಷಗೌಡ
(ರಾಜ್ಯ ) ಜಿಲ್ಲೆ

ಛಾಯಾಗ್ರಾಹಕರು ನಿಜ ದಾಖಲುದಾರರು :ಹರ್ಷಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಿಕಾನ್ ಛಾಯಾಗ್ರಹಣ ಕಾರ್ಯಗಾರ ಉದ್ಘಾಟನೆ

ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಮತ್ತು ಕರ್ನಾಟಕ ಛಾಯಾಗ್ರಾಹಕರ ಸಂಘದ ಸಹಯೋಗದಲ್ಲಿ ನಗರದ ಶುಭಶ್ರೀ ಹೋಟೆಲ್ ಸಭಾಂಗಣದಲ್ಲಿ ನಿಕಾನ್ ಛಾಯಾಗ್ರಹಣ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು
ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕ ಹರ್ಷಗೌಡ ಪಾಟೀಲ್, ಜಗತ್ತಿನ ಎಲ್ಲಾ ನೋವು-ನಲಿವುಗಳ ಜೊತೆಯಲ್ಲಿ ಐತಿಹಾಸಿಕ ದಾಖಲೀಕರಣ ಮಾಡುವವರು ಛಾಯಾಗ್ರಾಹಕರು. ಛಾಯಾಗ್ರಾಹಕರಿಗೆ ನಿಜವಾದ ದಾಖಲುದಾರರು ಎಂದರೆ ತಪ್ಪಾಗಲಾರದು. ಇವರ ವೃತ್ತಿ ಗೌರವಕ್ಕೆ ಎಲ್ಲರು ಸಹಕರಿಸೋಣ. ಛಾಯಾಗ್ರಾಹಕರು ತಮ್ಮಲ್ಲಿ ನೋವಿದ್ದರೂ ಎದುರು ಇರುವವರಿಗೆ ಸ್ಮಾಯಿಲ್ ಪ್ಲೀಸ್ ಎಂದು ಅವರ ನಗುವನ್ನು ಸೆರೆಹಿಡಿಯುತ್ತಾರೆ. ಇಂತಹ ಛಾಯಾಗ್ರಾಹಕ ಕಲಾವಿದರಿಗೆ ನಾವು ಗೌರವಿಸಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಕೆಪಿಎ ನಿರ್ದೇಶಕ ನಾಗರಾಜ್ ಟಿ. ಸಿ. ಮಾತನಾಡಿ, ರಾಜ್ಯದಲ್ಲಿ ಛಾಯಾಗ್ರಾಹಕರ ಸಂಘಟನೆ ಮಾಡುತ್ತಿದ್ದು, ವಿಜಯಪುರ ಜಿಲ್ಲೆಯ ಛಾಯಾಗ್ರಾಹಕರು ಒಗ್ಗಟ್ಟಾಗಲು ವಿಜಯಪುರ ಜಿಲ್ಲಾ ನೂತನ ಛಾಯಾಗ್ರಹಕರ ಸಂಘಕ್ಕೆ ಆಜೀವ ಸದಸ್ಯರಾಗಿ ರಾಜ್ಯ ಕೆಪಿಎದಿಂದ ಸಿಗುವ ಎಲ್ಲ ಸೌಲಭ್ಯಗಳಿಗೆ ಪಾಲುದಾರರಾಗಬೇಕೆಂದು ವಿನಂತಿಸಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಕೆಪಿಎ ನಿಕಟಪೂರ್ವ ಅಧ್ಯಕ್ಷ ಪರಮೇಶ್ ಎಸ್ ಮಾತನಾಡಿ, ರಾಜ್ಯ ಛಾಯಾಗ್ರಹಕರ ಸಂಘದ ಸಹಯೋಗದಲ್ಲಿ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಸಂಘಟನಾತ್ಮಕ ಮತ್ತು ಕಲಿಕೆಯ ದೃಷ್ಟಿಯಿಂದ ಇಂತಹ ಕಾರ್ಯಾಗಾರಗಳನ್ನು ಏರ್ಪಡಿಸುತ್ತಿರುವುದು ಮಹತ್ವದ ಮತ್ತು ಸಂತೋಷದಾಯಕ ಕೆಲಸ ಎಂದರು.
ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಮೇಶ ಚವ್ಹಾಣ ಎಲ್ಲಾ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆರ್ಯನ್ ಕಲರ್ ಲ್ಯಾಬಿನ ಉಮೇಶ್ ಹಿರೆದೇಸಾಯಿ, ಸ್ಕೇರ್ ಕಲರ್ ಲ್ಯಾಬನ ಪಿಂಟು ಕರ್ವಾ, ನಿಕಾನ್ ಕಂಪನಿಯ ಹಿರಿಯ ಮಾರಾಟ ವ್ಯವಸ್ಥಾಪಕ ಸುರಜ ಪ್ರಭು ಇದ್ದರು.
ಉದ್ಘಾಟನೆ ಕಾರ್ಯಕ್ರಮದ ನಂತರ ನಿಕಾನ್ ಕಂಪನಿಯ ಮೆಂಟರಾದ ಸ್ಟೇರಿನ್ ಇವರಿಂದ ನೂತನ ಕ್ಯಾಮರಾ ಮಾಡೆಲ್‌ಗಳು ಮತ್ತು ಕ್ಯಾಮೆರಾ ಟೆಕ್ನಿಕ್‌ಗಳ ಬಗ್ಗೆ ಕಾರ್ಯಗಾರ ನಡೆಯಿತು. ಬಳಿಕ ರೂಪದರ್ಶಿಗಳ ಸಹಯೋಗದಲ್ಲಿ ವಿವಾಹದ ಛಾಯಾಗ್ರಹಣದ ಕ್ಷೇತ್ರಕ್ಕೆ ಸಂಬಂಧಿಸಿದ ಛಾಯಾಗ್ರಹಣದ ಕುರಿತು ಉಪಯುಕ್ತ ಮಾಹಿತಿಗಳ ವಿವರಣೆಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಹಕರ ಸಂಘದ ಪದಾಧಿಕಾರಿಗಳಾದ ಸತೀಶ್ ಕಲಾಲ, ಪ್ರಶಾಂತ್ ಪಟ್ಟಣಶೆಟ್ಟಿ, ಸುರೇಶ್ ರಾಥೋಡ್, ರಾಜುಸಿಂಗ್ ರಜಪೂತ್, ಗುರುಬಾಳಪ್ಪ ಗಲಗಲಿ, ಮಲ್ಲಿಕಾರ್ಜುನ್ ಪಾರ್ವತಿ, ಪವನ ಅಂಗಡಿ, ಮಹೇಶ್ ಕುಂಬಾರ್, ನಾಗಯ್ಯಾ ಗಣಾಚಾರಿ, ಗೌಡಪ್ಪಗೌಡ ಬೀರಾದಾರ, ಸಹಿತ ೭೦ ಜನ ಛಾಯಾಗ್ರಾಹಕರು ಭಾಗವಹಿಸಿ ಕಾರ್ಯಾಗಾರ ಯಶಸ್ವಿಗೊಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.