ಇಂಡಿ: ಮರಗೂರದ ಗ್ರಾಮದ ಭೀಮಾಶಂಕರ ಕಾರ್ಖಾನೆ ಚುನಾವಣೆಗೆ ಒಟ್ಟು ೪೬ ಜನ ನಾಮಪತ್ರ ಸಲ್ಲಿಸಿರುವುದಾಗಿ ಚುನಾವಣೆ ಅಧಿಕಾರಿ ಮತ್ತು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ.
ನಾಮ ಪತ್ರ ಸಲ್ಲಿಸಲು ಫೆ.೩ ಕೊನೆಯ ದಿನವಾಗಿತ್ತು. ಇಂದು ಕಬ್ಬು ಬೆಳೆಗಾರ ಸದಸ್ಯರ ಮತಕ್ಷೇತ್ರಕ್ಕೆ ೯ ಅಭ್ಯರ್ಥಿಗಳು, ಸಹಕಾರ ಸಂಘಗಳ ಮತಕ್ಷೇತ್ರಕ್ಕೆ ಮೂವರು ಮತ್ತು ಕಬ್ಬು ಬೆಳೆಗಾರರಲ್ಲದ ಮತ ಕ್ಷೇತ್ರಕ್ಕೆ ಒಬ್ಬರು ನಾಮ ಪತ್ರ ಸಲ್ಲಿಸಿದ್ದಾರೆ.
ಚುನಾವಣೆ ಕಣದಲ್ಲಿ ಇಂಡಿ ಮತಕ್ಷೇತ್ರದ ಶಾಸಕರು ಮತ್ತು ಭೀಮಾ ಶಂಕರ ಸಕ್ಕರೆ ಅಧ್ಯಕ್ಷರಾದ ಯಶವಂತಗೌಡ ಪಾಟೀಲ, ಮಾಜಿ ಶಾಸಕ ರವಿಕಾಂತ ಪಾಟೀಲ, ಮಾಜಿ ಶಾಸಕ ಡಾ|| ಸಾರ್ವಭೌಮ ಬಗಲಿ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರು.
Subscribe to Updates
Get the latest creative news from FooBar about art, design and business.
Related Posts
Add A Comment
