Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹೋದರತ್ವದ ಮಧುರ ನಂಟು ರಕ್ಷಾ ಬಂಧನ :ಮಂಜುನಾಥ

ಪ್ರಕೃತಿಯಲ್ಲಿ ಸಿದ್ದೇಶ್ವರ ಶ್ರೀಗಳನ್ನು ಕಾಣೋಣ

ಅಣ್ಣ-ತಂಗಿಯರ ರಕ್ಷಾ ಬಂಧನ ಹಬ್ಬದ ಬಂಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೧೦ರಂದು ಕಾಯಕ ಶರಣರ ಜಯಂತಿ
(ರಾಜ್ಯ ) ಜಿಲ್ಲೆ

ಫೆ.೧೦ರಂದು ಕಾಯಕ ಶರಣರ ಜಯಂತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಫೆ.೧೫ರಂದು ಶ್ರೀ ಸಂತ ಸೇವಾಲಾಲ್ & ಫೆ.೧೬ರಂದು ಸವಿತಾ ಮಹರ್ಷಿ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಫೆಬ್ರವರಿ೧೦ರಂದು ಕಾಯಕ ಶರಣರ ಜಯಂತಿ, ಫೆಬ್ರವರಿ೧೫ರಂದು ಶ್ರೀ ಸಂತ ಸೇವಾಲಾಲ್ ಜಯಂತಿ, ಫೆಬ್ರವರಿ ೧೬ರಂದು ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ, ಫೆಬ್ರವರಿ೧೦ರಂದು ಕಾಯಕ ಶರಣರ ಜಯಂತಿ ಆಚರಣೆಯನ್ನು ಬೆಳಿಗ್ಗೆ ೯:೩೦ಕ್ಕೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಭಾವಚಿತ್ರದ ಮೆರವಣಿಗೆ ಬೆಳಿಗ್ಗೆ ೧೧ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ಏರ್ಪಡಿಸಿ, ಓರ್ವ ಉಪನ್ಯಾಸಕರನ್ನು ಆಹ್ವಾನಿಸಿ, ಮಹನೀಯರ ಕುರಿತ ಉಪನ್ಯಾಸ ನೀಡಲು ತೀರ್ಮಾನಿಸಲಾಯಿತು.
ಫೆಬ್ರವರಿ೧೫ರಂದು ಶ್ರೀ ಸಂತ ಸೇವಾಲಾಲ್ ಜಯಂತಿ : ಜಯಂತಿ ಕಾರ್ಯಕ್ರಮದ ಅಂಗವಾಗಿ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ವಿವಿಧ ಕಲಾ ತಂಡಗಳೊಂದಿಗೆ ೧೧ ಗಂಟೆಗೆ ಭಾವಚಿತ್ರದ ಮೆರವಣಿಗೆ ಹಾಗೂ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ, ಉಪನ್ಯಾಸಕರ ಗೊತ್ತುಪಡಿಸಿ ಉಪನ್ಯಾಸ ನೀಡಲು ಹಾಗೂ ಬಹು ಅರ್ಥಪೂರ್ಣವಾಗಿ ಆಚರಿಸಲು ಸಭೆ ನಿರ್ಧರಿಸಿತು.
ಫೆಬ್ರವರಿ ೧೬ರಂದು ಸವಿತಾ ಮಹರ್ಷಿ ಜಯಂತಿ :ಕಾರ್ಯಕ್ರಮದ ಅಂಗವಾಗಿ ಫೆ.೧೬ರಂದು ಬೆಳಿಗ್ಗೆ ೯:೩೦ ಗಂಟೆಗೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆ ಹಾಗೂ ಸವಿತಾ ಮಹರ್ಷಿ ಜಯಂತಿ ಹಿನ್ನೆಲೆಯಲ್ಲಿ ರಂಗಮಂದಿರದಲ್ಲಿ ಉಪನ್ಯಾಸ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಅಚ್ಚುಕಟ್ಟಾಗಿ ಜಯಂತಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು. ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು.
ಶಿಷ್ಠಾಚಾರದಂತೆ ಅತಿಥಿ,ಗಣ್ಯರಿಗೆ ಆಹ್ವಾನ, ಕಾರ್ಯಕ್ರಮ ಸ್ಥಳಗಳಲ್ಲಿ ಸ್ವಚ್ಛತೆ, ದೀಪಾಲಂಕಾರ, ವೇದಿಕೆ ಅಲಂಕಾರ, ಕಾರ್ಯಕ್ರಮದಲ್ಲಿ ಭಾಗವಹಿಸುವರಿಗೆ ಕುಡಿಯುವ ನೀರಿನ ವ್ಯವಸ್ಥೆ, ಸಮರ್ಪಕ ವಿದ್ಯುತ್ ವ್ಯವಸ್ಥೆ, ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಈರಣ್ಣ ಆಶಾಪೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರಣಕುಮಾರ ಸೇರಿದಂತೆ ಅಡಿವೆಪ್ಪ ಸಾಲಗಲ್,ಭೀಮರಾಯ ಜಿಗಜಿಣಗಿ,ರಾಜ ಪಾಲ ಚವ್ಹಾಣ,ಸೋಮನಗೌಡ ಕಲ್ಲೂರ, ಮಲ್ಲು ನಾಯಕ,ಸುರೇಶ ಬಿಜಾಪೂರ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹೋದರತ್ವದ ಮಧುರ ನಂಟು ರಕ್ಷಾ ಬಂಧನ :ಮಂಜುನಾಥ

ಪ್ರಕೃತಿಯಲ್ಲಿ ಸಿದ್ದೇಶ್ವರ ಶ್ರೀಗಳನ್ನು ಕಾಣೋಣ

ಅಣ್ಣ-ತಂಗಿಯರ ರಕ್ಷಾ ಬಂಧನ ಹಬ್ಬದ ಬಂಧ

ಸಚಿವ ಎಂ.ಬಿ.ಪಾಟೀಲ ಗೆ ರಾಖಿ ಕಟ್ಟಿ ಶುಭ ಕೋರಿದ ಸಹೋದರಿಯರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹೋದರತ್ವದ ಮಧುರ ನಂಟು ರಕ್ಷಾ ಬಂಧನ :ಮಂಜುನಾಥ
    In (ರಾಜ್ಯ ) ಜಿಲ್ಲೆ
  • ಪ್ರಕೃತಿಯಲ್ಲಿ ಸಿದ್ದೇಶ್ವರ ಶ್ರೀಗಳನ್ನು ಕಾಣೋಣ
    In (ರಾಜ್ಯ ) ಜಿಲ್ಲೆ
  • ಅಣ್ಣ-ತಂಗಿಯರ ರಕ್ಷಾ ಬಂಧನ ಹಬ್ಬದ ಬಂಧ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಗೆ ರಾಖಿ ಕಟ್ಟಿ ಶುಭ ಕೋರಿದ ಸಹೋದರಿಯರು
    In (ರಾಜ್ಯ ) ಜಿಲ್ಲೆ
  • ಈ ರಾಜ್ಯ ಹೆದ್ದಾರಿಯಲ್ಲಿ ತಗ್ಗು-ದಿನ್ನೆ ಹೊಂಡಗಳದೇ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
  • ಕರವೇ ಸಂ.ಕಾರ್ಯದರ್ಶಿಯಾಗಿ ವಿಶ್ವನಾಥ ನೇಮಕ
    In (ರಾಜ್ಯ ) ಜಿಲ್ಲೆ
  • ಸನಾತನ ಧರ್ಮ ಸಾರುವ ರಕ್ಷಾಬಂಧನ
    In (ರಾಜ್ಯ ) ಜಿಲ್ಲೆ
  • ಸಹೋದರತ್ವ ಬೆಸೆಯುವ ರಕ್ಷಾಬಂಧನ ಹಬ್ಬ
    In (ರಾಜ್ಯ ) ಜಿಲ್ಲೆ
  • ಶಾಲೆಗೆ ಮೂಲ ಸೌಲಭ್ಯ ಒದಗಿಸಲು ಬದ್ಧ :ಶಾಸಕ ಗುಡಗುಂಟಿ
    In (ರಾಜ್ಯ ) ಜಿಲ್ಲೆ
  • ಸಹೋದರತ್ವ ಭಾವನೆ ಮೂಡಿಸಿದ ರಕ್ಷಾ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.