Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ

ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ

ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆ ಮಕ್ಕಳ ಸಾಹಿತ್ಯದ ಖಣಜ :ಡಾ.ಪಡಶೆಟ್ಟಿ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆ ಮಕ್ಕಳ ಸಾಹಿತ್ಯದ ಖಣಜ :ಡಾ.ಪಡಶೆಟ್ಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ತಾಯ್ತನವುಳ್ಳವರಿಂದ ಮಾತ್ರ ಮಕ್ಕಳ ಸಾಹಿತ್ಯ ರಚನೆ ಸಾಧ್ಯ. ವಿಜಯಪುರ ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯ ಗಟ್ಟಿಯಾಗಿದೆ. ಜಿಲ್ಲೆ ಮಕ್ಕಳ ಸಾಹಿತ್ಯದ ಖಣಜವಾಗಿದೆ ಎಂದು ಜಾನಪದ ವಿದ್ವಾಂಸ ಡಾ.ಎಂ.ಎಂ. ಪಡಶೆಟ್ಟಿ ಅಭಿಪ್ರಾಯಪಟ್ಟರು.
ಪಟ್ಟಣದ ಸಾರಂಗಮಠದ ಆವರಣದಲ್ಲಿ ವಿದ್ಯಾಚೇತನ ಪ್ರಕಾಶನ ಹಮ್ಮಿಕೊಂಡಿದ್ದ ಐದು ಕೃತಿಗಳ ಲೋಕಾರ್ಪಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಪ.ಗು.ಸಿದ್ದಾಪೂರ ಗಟ್ಟಿಯಾಗಿ ನೆಲೆ ನಿಂತಿದ್ದಾರೆ. ಮಕ್ಕಳ ಸಾಹಿತ್ಯವನ್ನು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕುವ ಜನಾಂದೋಲನ ಪ್ರಾರಂಭಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮಕ್ಕಳ ಸಾಹಿತಿ ಪ.ಗು. ಸಿದ್ದಾಪೂರ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಕ್ಕಳ ಸಾಹಿತಿ ಹ.ಮ. ಪೂಜಾರ ರಚಿತ ಚತುರ ಚಿಣ್ಣರು ಕಥಾ ಸಂಕಲನ, ಕೆಮ್ಮಿನ ಔಷಧಿ ಉಚಿತ ನಗೆ ಹನಿ ಪುಸ್ತಕ, ಮುಳವಾಡದ ಮಕ್ಕಳ ಸಾಹಿತಿ ಪ.ಗು. ಸಿದ್ದಾಪೂರ ರಚಿತ ಅಕ್ಕರೆ ಅಜ್ಜ ನಾವು ಮತ್ತು ಗಾಂಧಿ ತಾತ ಕವನ ಸಂಕಲನ, ಶಿಕ್ಷಕ ಸಾಹಿತಿ ಎಸ್.ಎಸ್.ಸಾತಿಹಾಳ ರಚಿತ ಏನು ಚಂದವೋ ಮಕ್ಕಳ ಕವನ ಸಂಕಲನವನ್ನು ಸಾರಂಗಮಠ-ಗಚ್ಚಿನಮಠದ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಲೋಕಾರ್ಪಣೆ ಮಾಡಿದರು.
ಸ್ಥಳಿಯ ಎಚ್.ಜಿ. ಪಿಯು ಕಾಲೇಜಿನ ಪ್ರಾಚಾರ್ಯ ಎ.ಆರ್. ಹೆಗ್ಗನದೊಡ್ಡಿ ಅವರು, ಮಕ್ಕಳ ಸಾಹಿತಿ ಹ.ಮ. ಪೂಜಾರ ರಚಿತ ಚತುರ ಚಿಣ್ಣರು ಕಥಾ ಸಂಕಲನ, ಕೆಮ್ಮಿನ ಔಷಧಿ ಉಚಿತ ನಗೆ ಹನಿ, ಪರಿಚಯಿಸಿದರು. ಬಬಲೇಶ್ವರದ ಶ್ರೀ ಶಾಂತವೀರ ಪದವಿಪೂರ್ವ ಮಹಾವಿದ್ಯಾಲಯದ ರಾಜ್ಯಪ್ರಶಸ್ತಿ ಪುರಸ್ಕೃತ ಉಪನ್ಯಾಸಕ ಮಹಾದೇವ ರೆಬಿನಾಳ ಮುಳವಾಡದ ಮಕ್ಕಳ ಸಾಹಿತಿ ಪ.ಗು. ಸಿದ್ದಾಪೂರ ರಚಿತ ಅಕ್ಕರೆ ಅಜ್ಜ ನಾವು ಮತ್ತು ಗಾಂಧಿ ತಾತ ಕವನ ಸಂಕಲನಗಳನ್ನು ಮತ್ತು ಶಿಕ್ಷಕ ಸಾಹಿತಿ ಎಸ್.ಎಸ್. ಸಾತಿಹಾಳ ರಚಿತ ಏನು ಚಂದವೋ ಮಕ್ಕಳ ಕವನ ಸಂಕಲನವನ್ನು ಪರಿಚಯ ಮಾಡಿದರು.
ಕಾರ್ಯಕ್ರಮದಲ್ಲಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ವಿದ್ಯಾಚೇತನ ಪ್ರಕಾಶನದ ಹ.ಮ. ಪೂಜಾರ ಮಾತನಾಡಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ವಿಜಯಪುರ ವೈದ್ಯ ಎಸ್.ಬಿ. ಮಿರಜಕರ, ರೇಖಾ, ಚುಕ್ಕಿ ಚಿತ್ರಕಲೆಯಲ್ಲಿ ರಾಜ್ಯಮಟ್ಟದಲ್ಲಿ ಹೆಸರು ಮಾಡಿದ ಚಿತ್ರಕಲಾವಿದ ರಮೇಶ ಸಾಸನೂರ, ಮಕ್ಕಳ ಸಾಹಿತಿ ರಾ.ಶಿ. ವಾಡೇದ ಅವರನ್ನು ಶ್ರೀಗಳು ಗೌರವಿಸಿದರು.
ಮಕ್ಕಳ ಸಾಹಿತಿ ಎಸ್.ಎಸ್. ಸಾತಿಹಾಳ ಸ್ವಾಗತಿಸಿದರು. ಎಸ್.ಕೆ. ಗುಗ್ಗರಿ ನಿರೂಪಿಸಿದರು. ರಾಚು ಕೊಪ್ಪಾ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ

ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ

ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು

೪೭ ಸಾವಿರ ಜಾನುವಾರುಗಳಿಗೆ ಲಸಿಕೆ ಗುರಿ :ಡಾ.ರಾಜಕುಮಾರ ಅಡಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು
    In (ರಾಜ್ಯ ) ಜಿಲ್ಲೆ
  • ೪೭ ಸಾವಿರ ಜಾನುವಾರುಗಳಿಗೆ ಲಸಿಕೆ ಗುರಿ :ಡಾ.ರಾಜಕುಮಾರ ಅಡಕಿ
    In (ರಾಜ್ಯ ) ಜಿಲ್ಲೆ
  • ಹಳ್ಳಿಗಳು ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಡಿವೈಎಫ್‌ಐ ಸಂಘಟನೆ ಮುಖಂಡರ ಬಂಧನಕ್ಕೆ ತೀವ್ರ ಖಂಡನೆ
    In (ರಾಜ್ಯ ) ಜಿಲ್ಲೆ
  • ಪೀಸ್ ಇಂಟರ್‌ನ್ಯಾಶನಲ್ ಪ್ರೌಢಶಾಲೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಗುರುದೇವ ಅಂತರಾಷ್ಟ್ರೀಯ ವಸತಿ ಶಾಲೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಬಹುಮುಖ ವ್ಯಕ್ತಿತ್ವದ ಸೃಜನಶೀಲ ಸಾಹಿತಿ ಡಾ.ಚನ್ನಪ್ಪ ಕಟ್ಟಿ
    In ವಿಶೇಷ ಲೇಖನ
  • ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.