ಚಡಚಣ: ನಗರದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಶ್ರೀ ಗುರು ಮಲ್ಲಿಕಾರ್ಜುನ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಂದ ಸ್ವಾಗತ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಪ್ರೊ. ಎಸ್. ಎಸ್ ಚವ್ಹಾಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾವಿ ಶಿಕ್ಷಕರಾದ ನೀವು ನಿರಂತರ ಕಲಿಕೆ, ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಂಡು ಮುಂದಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಉತ್ತಮ ಸಮಾಜದ, ಉತ್ತಮ ಭವಿಷ್ಯ ನಿರ್ಮಾಣ ಮಾಡುವಂತಹ ಶಿಕ್ಷಕರಾಗಿ ಹೊರಹೊಮ್ಮಿ ಎಂದು ಶುಭ ಹಾರೈಸಿದರು.
ಈ ವೇಳೆಯಲ್ಲಿ ಮಹಾವಿದ್ಯಾಲಯ ಬೋಧಕ,ಬೋಧಕೇತರ ಹಾಗೂ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಈ ವೇಳೆ ಸೃಷ್ಟಿ ಛಟ್ಟಿ ಕಾರ್ಯಕ್ರಮ ನಿರೂಪಿಸಿದರು, ದಾನಮ್ಮ ಚಕೋತೆ ಸ್ವಾಗತಿಸಿದರು, ರೂಪಾ ಅಗಸರ ಕಾಲೇಜಿನ ನಿಯಮಗಳನ್ನು ತಿಳಿಸಿದರು, ಅರುಣ್ ತೇಲಿ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

