ಮುದ್ದೇಬಿಹಾಳ: ಇಲ್ಲಿನ ಬಸ್ ನಿಲ್ದಾಣದಲ್ಲಿ ಸಂಜೆಯಾದರೆ ಸಾಕು ಕತ್ತಲೆ ಆವರಿಸಿ ಪ್ರಯಾಣಿಕರು ಭಯಪಡುವಂತಾಗಿದೆ. ಕಳೆದ ಕೆಲವು ತಿಂಗಳುಗಳಿದ ಈ ಸಮಸ್ಯೆ ಅನುಭವಿಸುತ್ತಿದ್ದು ಈ ಸಮಸ್ಯೆ ಬಗೆಹರಿಸಲು ಯಾರೊಬ್ಬರು ಮುಂದಾಗುತ್ತಿಲ್ಲ. ಈ ಕೂಡಲೇ ಬಂದ್ ಆದ ಲೈಟ್ ಗಳನ್ನು ದುರಸ್ತಿಗೊಳಿಸಬೇಕು ಎಂದು ಹೆಸರು ಹೇಳಲು ಇಚ್ಛಿಸದ ನಿಲ್ದಾಣದ ಮಳಿಗೆಯ ಬಾಡಿದಾರರೊಬ್ಬರು ವಿನಂತಿಸಿದ್ದಾರೆ.
ಈ ಕುರಿತು ’ಉದಯ ರಶ್ಮಿ’ ಯೊಂದಿಗೆ ಮಾತನಾಡಿದ ಅವರು, ಮುಖ್ಯ ಪ್ರವೇಶ ದ್ವಾರದ ಬಳಿಯೇ ಇಂಥಹ ಸಮಸ್ಯೆ ತಲೆದೋರಿದ್ದು ಸೂರ್ಯ ಮುಳುಗುತ್ತಿದ್ದಂತೆಯೇ ಪುಂಡ ಪೋಕರಿಗಳ ಹಾವಳಿ ಹೆಚ್ಚಾಗಿದೆ. ಪ್ರಯಾಣಿಕರು ಭಯ ಪಡುತ್ತಲೇ ತಿರುಗಾಡುವಂತಾಗಿದೆ. ಈ ಸಮಸ್ಯೆ ಬಗ್ಗೆ ಹಲವಾರು ಬಾರಿ ಸಂಬಂಧಿಸಿದವರಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾರಣ ಅನಿವಾರ್ಯವಾಗಿ ಮಾಧ್ಯಮದ ಮೂಲಕ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡುತ್ತಿರುವದಾಗಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

