ವಿಜಯಪುರ: ನಗರದ ಕೇಂದ್ರ ಕಾರಾಗೃಹಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಭೆ ಅವರು ಭೇಟಿ ನೀಡಿ, ಕಾರಾಗ್ರಹ ಬಂದಿಗಳ ಆರೋಗ್ಯ, ಆಹಾರ, ಮೂಲ ಸೌಕರ್ಯದ ಜೊತೆಗೆ ಅವರ ಮಕ್ಕಳ ಕುರಿತು ಮಾಹಿತಿ ಪಡೆದರು.
ಕಾರಾಗೃಹ ಬಂದಿಗಳ ಅವರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಸ್ಥಿತಿಗತಿಗಳ ಕುರಿತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಕಾರಾಗೃಹದ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಾರಾಗೃಹದ ಪ್ರಭಾರ ಅಧೀಕ್ಷಕರಾದ ಮಂಜುನಾಥ ಎಚ್. ಜಿ,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ದೀಪಾಕ್ಷಿ ಜಾನಕಿ ಸೇರಿದಂತೆ ಕಾರಾಗೃಹದ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

