Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವುದಾಗಿ ಶಾಸಕ ಯತ್ನಾಳ ಅಭಯ

ಸ್ಪರ್ಧಾ ಪರೀಕ್ಷೆಗಳ ಯಶಸ್ವಿಗೆ ಶ್ರೀಮಂತಿಕೆಯೊಂದೇ ನೆಲೆಗಟ್ಟಲ್ಲ

ಸಿಂದಗಿ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊರಗುತ್ತಿಗೆ ಟೆಂಡರ್ ರದ್ದುಗೊಳಿಸಲು ದಿನಗೂಲಿ ನೌಕರರಆಗ್ರಹ
(ರಾಜ್ಯ ) ಜಿಲ್ಲೆ

ಹೊರಗುತ್ತಿಗೆ ಟೆಂಡರ್ ರದ್ದುಗೊಳಿಸಲು ದಿನಗೂಲಿ ನೌಕರರಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಆಲಮಟ್ಟಿಯ ವಿವಿಧ ಉದ್ಯಾನಗಳನ್ನು ನಿರ್ವಹಣೆಯನ್ನು ಹೊರಗುತ್ತಿಗೆ ಟೆಂಡರ್ ಕರೆಯಲಾಗಿದ್ದು, ಅದನ್ನು ತಕ್ಷಣವೇ ರದ್ದುಗೊಳಿಸಿ ಈಗಿದ್ದ ಸ್ಥಿತಿಯನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ದಿನಗೂಲಿ ನೌಕರರ ಸಂಘ ಆಗ್ರಹಿಸಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಿ ಮಾದರ, ಕಳೆದ 25 ವರ್ಷಕ್ಕೂ ಹೆಚ್ಚಿನ ಕಾಲದಿಂದ 370 ಕ್ಕೂ ಅಧಿಕ ಅರಣ್ಯ ದಿನಗೂಲಿ ಕಾರ್ಮಿಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಲಮಟ್ಟಿಯ ವಿವಿಧ ಉದ್ಯಾನಗಳ ನಿರ್ಮಾಣ ಹಾಗೂ ನಿರ್ವಹಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
ಅವರಿಗೆಲ್ಲಾ ಅರಣ್ಯ ಇಲಾಖೆಯ ನಿಗದಿಪಡಿಸಿರುವ ದಿನಗೂಲಿಗಳ ಆಧಾರದ ಮೇಲೆ ಕೃಷ್ಣಾ ಭಾಗ್ಯ ಜಲ ನಿಗಮದ ಅರಣ್ಯ ವಿಭಾಗವೂ ವೇತನ ಪಾವತಿ ಮಾಡುತ್ತಿದೆ.
ಅತ್ಯಂತ ಕಡಿಮೆ ಸಂಬಳದಲ್ಲಿ ಇಲ್ಲಿ ದುಡಿಯುತ್ತಿದ್ದಾರೆ. ಆದರೆ ಈಗ ಈ ಉದ್ಯಾನದ ನಿರ್ವಹಣೆಯ ಹೊಣೆಯನ್ನು ಹೊರಗುತ್ತಿಗೆ ನೀಡಲು ಟೆಂಡರ್ ಕರೆಯಲಾಗಿದೆ. ಇದರಿಂದ ಕಳೆದ 25 ವರ್ಷಗಳಿಂದಲೂ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ನೌಕರಿ ಕಳೆದುಕೊಳ್ಳುವ ಭೀತಿ ಆವರಿಸಿದೆ. ಇದೇ ಸಂಬಳದಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿರುವ ಕಾರ್ಮಿಕರಿಗೆ ಹೊರಗುತ್ತಿಗೆ ಟೆಂಡರ್ ದಿಗಿಲು ಬಡಿಸಿದೆ ಎಂದು ಅವರು ಹೇಳಿದರು.
ತಕ್ಷಣವೇ ಈ ಟೆಂಡರ್ ರದ್ದುಗೊಳಿಸಬೇಕು ಎಂದು ನಾವು ಮನವಿ ಮಾಡುತ್ತೇವೆ, ಅಷ್ಟಕ್ಕೂ ಟೆಂಡರ್ ರದ್ದುಗೊಳಿಸದಿದ್ದರೇ ಹೋರಾಟ ಅನಿವಾರ್ಯ ಎಂದರು.
ನಮ್ಮ ಸಮಸ್ಯೆಯನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಬೇಕು, ಇಲ್ಲಿ ಕಾರ್ಯನಿರ್ವಹಿಸುವ ಬಹುತೇಕ ಕಾರ್ಮಿಕರು ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾದ ಸಂತ್ರಸ್ತರಿದ್ದಾರೆ. ಒಂದೆಡೆ ಮನೆ, ಜಮೀನು ಕಳೆದುಕೊಂಡು ಕೂಲಿ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅದಕ್ಕೂ ಹೊಡೆತ ಬೀಳುವ ಭಯ ಆವರಿಸಿದೆ ಎಂದರು.
ಕಲ್ಲು, ಗುಂಡು, ತಗ್ಗು, ಕುರುಚಲು, ಕಂಟಿಗಳಿಂದ ಕೂಡಿದ ಪ್ರದೇಶವನ್ನು ಹಗಲೂ ರಾತ್ರಿ ದುಡಿದು, ಹುಲ್ಲು ಹಾಸು, ಅಲಂಕಾರಿಕ ಗಿಡ ಮರಗಳನ್ನು ನೆಟ್ಟು ಸಾವಿರಾರು ಪ್ರವಾಸಿಗರು ವೀಕಷಿಸುವ ಮನರಂಜನೆ ತಾಣವನ್ನಾಗಿ ಮಾಡಿದ್ದೇವೆ, ಕೂಲಿ ಕಾರ್ಮಿಕರಿಗೆ ಬ್ಯಾಂಕ್ ಖಾತೆಗಳ ಮೂಲಕ ವೇತನ ಪಾವತಿಸುತ್ತಿದ್ದಾರೆ, ಕೂಲಿಕಾರರಿಗೆ ಸಮವಸ್ತ್ರ ವಿತರಿಸಿದ್ದಾರೆ, ಪ್ರತಿ ತಿಂಗಳಿಗೆ ನಾಲ್ಕು ದಿನ ರಜೆ ನೀಡುತ್ತಾರೆ, ಆದರೆ ಸರ್ಕಾರದಿಂದ ಕನಿಷ್ಠ ಸೇವಾ ಭದ್ರತೆ ಸೌಲಭ್ಯ ನೀಡಿಲ್ಲ ಎಂದರು. ಕನಿಷ್ಠ ಸರ್ಕಾರಿ ಸೇವಾ ಬದ್ಧತೆ ನೀಡಲು ಹಾಗೂ ಸರ್ಕಾರದ ಮಟ್ಟದಲ್ಲಿ ಇತ್ಯರ್ಥವಾಗುವವರೆಗೂ ಇಲಾಖಾ ವತಿಯಿಂದ ಉದ್ಯಾನಗಳ ನಿರ್ವಹಣೆ ನೀಡಬೇಕು ಎಂದು ವಿರೂಪಾಕ್ಷಿ ಹೇಳಿದರು. ಮೂರ್ನಾಲ್ಕು ಬಾರಿ ಹೊರಗುತ್ತಿಗೆ ಟೆಂಡರ್ ಕರೆದರೂ ಸಂಘದ ಹೋರಾಟದ ಫಲವಾಗಿ ಅದನ್ನು ಹಿಂದಕ್ಕೆ ಪಡೆಯಲಾಗಿದೆ. ಈ ಕಾಮಗಾರಿ ಪೆರನಿಯಲ್ ನೇಚರ್ ಇದ್ದು ಹೊರಗುತ್ತಿಗೆ ನೀಡಲು ಬರುವುದಿಲ್ಲ, ಹೀಗಾಗಿ ಟೆಂಡರ್ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಬಸಪ್ಪ ಗುಡಿಮನಿ, ಅಪ್ಪಣ್ಣ ವಾಲೀಕಾರ, ಮಹೇಶ ತೆಲಗಿ, ಕಾಶೀನಾಥ ಬಿಂಗಿ, ಮರಿಯಪ್ಪ ವಾಲಿಕಾರ, ಬಸಪ್ಪ ತುಂಬರಮಟ್ಟಿ, ರಮೇಶ ಪವಾರ, ಪ್ರಕಾಶ ಮಾಲಗತ್ತಿ, ಭೀಮಶಿ ಮಾದರ, ಶೇಖಪ್ಪ ಹಡಪದ, ಗೋಪಾಲ ಚಲವಾದಿ, ಅಲ್ಲಾಸಾಬ್ ಮೆಟಗುಡ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವುದಾಗಿ ಶಾಸಕ ಯತ್ನಾಳ ಅಭಯ

ಸ್ಪರ್ಧಾ ಪರೀಕ್ಷೆಗಳ ಯಶಸ್ವಿಗೆ ಶ್ರೀಮಂತಿಕೆಯೊಂದೇ ನೆಲೆಗಟ್ಟಲ್ಲ

ಸಿಂದಗಿ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ

ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವುದಾಗಿ ಶಾಸಕ ಯತ್ನಾಳ ಅಭಯ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾ ಪರೀಕ್ಷೆಗಳ ಯಶಸ್ವಿಗೆ ಶ್ರೀಮಂತಿಕೆಯೊಂದೇ ನೆಲೆಗಟ್ಟಲ್ಲ
    In (ರಾಜ್ಯ ) ಜಿಲ್ಲೆ
  • ಸಿಂದಗಿ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನೂತನ ಜಿಲ್ಲಾಧಿಕಾರಿ ಡಾ.ಆನಂದ ಕೆ ರಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ವಿಮಾನ ಅಪಘಾತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ!!
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕಾರ್ಯಪ್ರವೃತ್ತರಾಗಿ :ಮಂಗಲಾ
    In (ರಾಜ್ಯ ) ಜಿಲ್ಲೆ
  • ಪ್ರೀತಿಯ ರೂಪ
    In ಕಾವ್ಯರಶ್ಮಿ
  • ದ್ವಂದ್ವ ಮನಸ್ಥಿತಿ
    In ಭಾವರಶ್ಮಿ
  • ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ :ದೈವಾಡಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.