Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸದನದಲ್ಲಿ ಶಾಸಕರು ರೈತರ ಪರ ಧ್ವನಿ ಎತ್ತಲು ಸಗರ ಆಗ್ರಹ
(ರಾಜ್ಯ ) ಜಿಲ್ಲೆ

ಸದನದಲ್ಲಿ ಶಾಸಕರು ರೈತರ ಪರ ಧ್ವನಿ ಎತ್ತಲು ಸಗರ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಹಿಂದೆಂದೂ ಕಂಡು ಕಾಣದಂತಹ ಬೀಕರ ಬರಗಾಲ ನಮ್ಮ ರಾಜ್ಯಕ್ಕೆ ಒಕ್ಕರಿಸಿದೆ. ಕಳೆದ ೭-೮ ತಿಂಗಳಿನಿಂದ ಮಳೆ ಕಾಣದೇ ಕಂಗಾಲಾಗಿರುವ ರೈತ ಸಮುದಾಯವನ್ನು ಗಣನೆಗೆ ತೆಗೆದುಕೊಂಡು ನಾಳೆ ನಡೆಯಲಿರುವ ಬಜೆಟ್ ಪೂರ್ವ ಅಧಿವೇಶನದಲ್ಲಿ ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ೮ ಶಾಸಕರುಗಳು ರೈತರ ಪರವಾಗಿ ಧ್ವನಿ ಎತ್ತಿ ರೈತರ ಮತದಿಂದ ಆರಿಸಿ ಬಂದಿರುವ ತಾವುಗಳು ಅವರ ಋಣ ತೀರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಪತ್ರಿಕೆ ಮೂಲಕ ಆಗ್ರಹಿಸಿದ್ದಾರೆ.
ಅಧಿವೇಶನವೆಂದರೆ ಕೇವಲ ಜಗಳವಾಡುವುದು ಆಗಬಾರದು, ಜಿಲ್ಲೆಗೆ ಹಾಗೂ ಜಿಲ್ಲೆಯ ರೈತರಿಗೆ ಅವಶ್ಯವಾಗಿ ಬೇಕಾಗಿರುವ ಹೊಸ ಯೋಜನೆಗಳ ಕುರಿತು, ಹಾಗೆಯೇ ಹಿಂದೆ ನೆನಗುದಿಗೆ ಬಿದ್ದಿರುವ ಕಾಮಗಾರಿಗಳ ಹಣವನ್ನು ಮಂಜೂರು ಮಾಡುವಂತೆ ಜಿಲ್ಲೆಯ ೮ ಶಾಸಕರು ಸದನದಲ್ಲಿ ಧ್ವನಿ ಎತ್ತಬೇಕೆಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಅನೇಕ ರೈತರು ಆತ್ಮಹತ್ಯ ಮಾಡಿಕೊಂಡಿದ್ದಾರೆ, ರೈತರ ಬಗ್ಗೆ ಕೇವಲ ಬಾಯಿ ಮಾತಿನಲ್ಲಿ ಕನಿಕರ ತೊರದೇ ಬರಗಾಲದಿಂದ ತತ್ತರಿಸಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಬೆಳೆದಿರುವ ಎಲ್ಲಾ ಬೆಳೆಗಳಿಗೆ ವರ್ಷಪೂರ್ತಿ ಬೆಂಬಲ ಬೆಲೆ ನೀಡಿ ಖರೀದಿಸಬೇಕು. ಕೃಷಿಗೆ ಬಡ್ಡಿ ರಹಿತ ಬೇಷರತ್ತ ಸಾಲ ಸಿಗುವಂತಾಗಬೇಕು, ಕೃಷಿ ಚಟುವಟಿಕೆ ನಡೆಯದೇ ರೈತ ಕಾರ್ಮಿಕರು ಗುಳೆ ಹೋಗುತ್ತಿರುವುದನ್ನು ತಪ್ಪಿಸಲು ಉದ್ಯೋಗ ಸೃಷ್ಠಿಸಬೇಕು, ರೈತರಿಗೆ ಸಂಬಂಧಿಸಿದ ಕೃಷಿ, ಅರಣ್ಯ, ತೋಟಗಾರಿಕೆ, ಮೀನು, ಪಶುಸಂಗೋಪನೆ, ಇಲಾಖೆಯಲ್ಲಿ ಅವಶ್ಯವಿರುವ ಎಲ್ಲಾ ಸಾಧನ ಸಲಕರಣೆಗಳು, ಬೀಜ, ಗೊಬ್ಬರ, ಸ್ಪಿಂಕಲರ್ ಪೈಪ ಸೇರಿದಂತೆ ಎಲ್ಲ ಉಪಕರಣಗಳು ದೊರೆಯಬೇಕು ಜೊತೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಬೇಕು ಎಂದರು.
ಆಲಮಟ್ಟಿ ಆಣೆಕಟ್ಟು ೫೧೯.೬ ರಿಂದ ೫೨೪.೨೫೬ಕ್ಕೆ ಎತ್ತರಿಸಿ, ಪರಿಹಾರ ಹಾಗೂ ಪುರ್ನವಸತಿ ಕಲ್ಪಿಸಬೇಕು, ಜೊತೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಏತ ನೀರಾವರಿ ಯೋಜನೆಗಳನ್ನು ಗುಣಮಟ್ಟದಿಂದ ನಿರ್ಮಿಸಿ, ಜಿಲ್ಲೆಯ ಕಡೆಯ ಹಳ್ಳಿಯ ಕಟ್ಟಕಡೆಯ ರೈತರ ಜಮೀನಿಗೂ ನೀರು ಹರಿಯಬೇಕು.
ರೈತರಿಗೆ ಮರಣ ಶಾಸನವಾಗಿರುವ ಭೂ ಸುಧಾರಣಾ ಕಾಯ್ದೆ, ಕೃಷಿ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆ, ಜಾನುವಾರ ಹತ್ಯೆ, ತಂದಿರುವ ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ಸರಕಾರ ತಂದಿರುವುದನ್ನು ದೇಶದ ಎಲ್ಲಾ ರೈತರು ವಿರೋಧಿಸಿರುವ ಪ್ರತಿಫಲವಾಗಿ ಕೇಂದ್ರದಲ್ಲಿ ಮರಳಿ ಪಡೆದಿದ್ದರೂ ರಾಜ್ಯ ಸರಕಾರಗಳು ಇನ್ನು ಮರಳಿ ಪಡೆದಿಲ್ಲ, ಅಧಿಕಾರಕ್ಕೆ ಬರುವ ಮುಂಚೆ ರೈತರಿಗೆ ನೀಡಿರುವ ಆಶ್ವಾಸನೆಯಂತೆ ಕೂಡಲೆ ಈ ಅಧಿವೇಶನದಲ್ಲಿ ಈ ಎಲ್ಲಾ ಕಾಯ್ದೆಗಳನ್ನು ವಾಪಸು ಪಡೆಯಬೇಕು.
ಸರಿಸುಮಾರು ೭೫% ರೈತರು ಕೃಷಿಯನ್ನೆ ಅವಲಂಭಿಸಿರುವ ಈ ರಾಜ್ಯದಲ್ಲಿ ರೈತಪರ ಚಿಂತನೆಗಳನ್ನು ಮಾಡಿ ತಜ್ಞರಿಂದ, ಹಿರಿಯ ರೈತ ಹೋರಾಟಗಾರರಿಂದ ಮಾರ್ಗದರ್ಶನ ಪಡೆದು ರೈತಪರ ಬಜೆಟ್ ಮಂಡನೆ ಮಾಡಬೇಕೆಂದು ರಾಜ್ಯದ ಮುಖ್ಯಮಂತ್ರಿಗಳಲ್ಲಿ ಸಮಸ್ತ ರೈತ ಬಾಂಧವರ ಪರವಾಗಿ ಸಗರ ಅವರು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ
    In (ರಾಜ್ಯ ) ಜಿಲ್ಲೆ
  • ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
    In (ರಾಜ್ಯ ) ಜಿಲ್ಲೆ
  • ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ
    In (ರಾಜ್ಯ ) ಜಿಲ್ಲೆ
  • ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು!
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಬದಲಾವಣೆಗೆ ಶಿಕ್ಷಣವೇ ಪ್ರಬಲ ಅಸ್ತ್ರ :ಎಸ್‌ಪಿ ಗಡಾದೆ
    In (ರಾಜ್ಯ ) ಜಿಲ್ಲೆ
  • ಹುಬನೂರ ಸರ್ಕಾರಿ ಪ್ರೌಢ ಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.