ಆಲಮಟ್ಟಿ: ಸಮೀಪದ ಬೇನಾಳ ಆರ್.ಎಸ್. ಗ್ರಾಮದಲ್ಲಿ ಬೀರಲಿಂಗೇಶ್ವರ ಜಾತ್ರೆಯ ಅದ್ಧೂರಿಯಾಗಿ ಭಾನುವಾರ ಜರುಗಿತು.
ಭಾನುವಾರ ಬೆಳಿಗ್ಗೆ ಅರಷಣಗಿ, ವಂದಾಲ, ಮಟ್ಟಿಹಾಳ, ಬೀರಲದಿನ್ನಿ ಯಿಂದ ಬಂದ ಗದ್ದೆಮ್ಮದೇವಿ ಹಾಗೂ ಬೀರಲಿಂಗೇಶ್ವರ ಪಂಚ ಪಲ್ಲಕ್ಕಿ ಮೆರವಣಿಗೆ ಗ್ರಾಮದ ಬೀದಿಯಲ್ಲಿ ಅದ್ಧೂರಿಯಾಗಿ ಜರುಗಿತು. ಪಲ್ಲಕ್ಕಿ ಮೆರವಣಿಗೆಯಲ್ಲಿ ಜನತೆ ಭಂಡಾರದಲ್ಲಿ ಮಿಂದೆದ್ದರು.
ಬೀರಲಿಂಗೇಶ್ವರ ದೇವರ ಮೂರ್ತಿಗೆ ಅಭಿಷೇಕ, ಪುಷ್ಪಾರ್ಚನೆ, ಅಲಂಕಾರ, ಗಂಗಾಸ್ಥಳಕ್ಕೆ ಪೂಜೆ ನಡೆಯಿತು. ಡೊಳ್ಳು ಮೇಳ, ಭಜನೆ ಮೇಳೆ, ಕಳಸ ಹಿಡಿದ ಮಹಿಳೆಯರು ಭಾಗವಹಿಸಿದ್ದರು.
ಮಧ್ಯಾಹ್ನ ೫ ಜತೆ ಸಾಮೂಹಿಕ ವಿವಾಹ ಜರುಗಿತು. ಅತಿಥಿಗಳಾಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಮೇಶ ವಂದಾಲ, ಜಿ.ಸಿ. ಮುತ್ತಲದಿನ್ನಿ, ಬಂದೇನವಾಜ್ ಡೋಲಚಿ, ಜಬ್ಬಾರ್ ಕೊಟ್ಯಾಳ, ಬಿ.ಎಚ್. ಗಣಿ, ಮಹೇಶ ಗಾಳಪ್ಪಗೋಳ, ಬುಡ್ಡೇಸಾಬ್ ಬಾಗವಾನ್, ಟಿ.ಎಸ್. ಬಿರಾದಾರ, ಗ್ಯಾನಪ್ಪಗೌಡ ಬಿರಾದಾರ, ಅಮರಪ್ಪಗೌಡ ಪಾಟೀಲ ಮೊದಲಾದವರು ಪಾಲ್ಗೊಂಡಿದ್ದರು.
ರಾತ್ರಿ ರಾಜ್ಯ ಮಟ್ಟದ ಟಗರಿನ ಕಾಳಗ ಜರುಗಿತು.
Subscribe to Updates
Get the latest creative news from FooBar about art, design and business.
Related Posts
Add A Comment