Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆಗಳಿಗೆ ನೀರು ಹರಿಸಲು ರೈತ ಸಮುದಾಯ ಆಗ್ರಹ
(ರಾಜ್ಯ ) ಜಿಲ್ಲೆ

ಕಾಲುವೆಗಳಿಗೆ ನೀರು ಹರಿಸಲು ರೈತ ಸಮುದಾಯ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಚಿಮ್ಮಲಗಿ ಹಾಗೂ ಮುಳವಾಡ ಏತ ನೀರಾವರಿ ಕಾಲುವೆಗಳ ನೀರು ಪೂರೈಕೆಯಲ್ಲಿ ತಾರತಮ್ಯ ನೀತಿ ಅನುಸರಿಸದೇ ಕೂಡಲೇ ನೀರು ಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕಿನ ರೈತ ಸಮುದಾಯ ಪೂರ್ವಭಾವಿ ಸಭೆಯ ಮೂಲಕ ಆಗ್ರಹಿಸಿತು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸೇರಿದ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ಸರ್ಕಾರದ ನೀರು ಹಂಚಿಕೆಯ ತಾರತಮ್ಯ ನೀತಿಯನ್ನು ಚರ್ಚಿಸಿ ಖಂಡಿಸಿದರು. ಈ ಸಂದರ್ಭದಲ್ಲಿ ರೈತಸಂಘದ ನಾಯಕರಾದ ಶಂಕರಗೌಡ ಹಿರೇಗೌಡರ, ಅಜೀಜ್ ಯಲಗಾರ, ಬಸವರಾಜ ಕಲ್ಲೂರ ಮಾತನಾಡಿ, ಪ್ರತಿ ಬಾರಿ ಕಾಲುವೆ ಮೂಲಕ ನೀರು ಪಡೆಯಲು ರೈತರು ಹೋರಾಟ ಮಾಡಬೇಕಾದ ಅನಿವಾರ್ಯತೆಯನ್ನು ಸರ್ಕಾರ ಸೃಷ್ಟಿಸಿದೆ.
ನಮ್ಮ ಭಾಗದ ಚಿಮ್ಮಲಗಿ ಏತ ನೀರಾವರಿ ಕಾಲುವೆಗಳು ಹೆಸರಿಗಷ್ಟೇ ಕಾಲುವೆಗಳೇನಿಸಿವೆ. ಇಲ್ಲಿ ವರ್ಷಕ್ಕೆ ಒಂದು ಬಾರಿ ಮಾತ್ರ ನೀರು ಹರಿಯುತ್ತದೆ. ಅದು ಅರ್ಧ ಹಂತದವರೆಗೆ ಮಾತ್ರ ಪೂರ್ಣವಾಗಿ ಮುಟ್ಟುವ ಸಂದರ್ಭದಲ್ಲಿ ನೀರು ನಿಲ್ಲಿಸಲಾಗುತ್ತದೆ. ಹೀಗಾಗಿ ಈ ಭಾಗದ ಕೆರೆಗಳು ಬೇಸಿಗೆಯ ಆರಂಭದಲ್ಲಿಯೇ ಖಾಲಿಯಾಗಿವೆ. ಹೀಗಾದರೇ ಬೇಸಿಗೆ ಕಳೆಯುವುದಾದರೂ ಹೇಗೆ? ತೋಟಗಳಲ್ಲಿ ಇರುವ ರೈತಕುಟುಂಬಗಳು, ದನಕರು ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಈಗಲೇ ಆರಂಭಗೊಂಡಿವೆ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಗಂಭೀರವಾಗುವುದರಲ್ಲಿ ಸಂದೇಹವಿಲ್ಲ. ಸರ್ಕಾರ ಮಾತ್ರ ರೈತರನ್ನು ನಿರ್ಲಕ್ಷಿಸಿ ಗ್ಯಾರಂಟಿಗಳ ಪ್ರಚಾರದಲ್ಲಿದೆ ಎಂದು ಆರೋಪಿಸಿದರು. ಒಂದು ವೇಳೆ ಇದೇ ದಿ:೨೦ರ ಒಳಗಾಗಿ ಎರಡು ಕಾಲುವೆಗಳಿಗೆ ನೀರು ಹರಿಸಬೇಕು ಇಲ್ಲವಾದರೇ ರೈತರ ಬೃಹತ್ ಪ್ರತಿಭಟನೆ ಎದುರಿಸಲು ಮುಂದಾಗಬೇಕು ಎಂದು ಎಚ್ಚರಿಸಿದರು.
ಸಭೆಯಲ್ಲಿ ಶಂಕರಗೌಡ ಕೋಟಿಖಾನಿ(ಹರನಾಳ), ಸಂಗನಗೌಡ ಬಿರಾದಾರ(ಮುಳಸಾವಳಗಿ) ಶ್ರೀಮಂತ ತಳವಾರ, ಚನ್ನಪ್ಪ ಕಾರಜೋಳ(ನಿವಾಳಖೇಡ),ರಾಮು ದೇಸಾಯಿ, ಚಂದು ಏಳಕೋಟಿ, ಬಂದೇನವಾಜ್ ಹಳ್ಳಿ, ಬಸನಗೌಡ ಭೈರೋಡಗಿ, ಸಂತೋಷ ಬಿರಾದಾರ(ಇಂಗಳಗಿ), ಸಾಹೇಬಗೌಡ ಬಿರಾದಾರ, ಮುಕ್ಕಣ್ಣ ಬಿರಾದಾರ, ಯಶವಂತ ನಾಯ್ಕೋಡಿ, ಭೀಮಗೊಂಡ ಭಂಟನೂರ, ಚನ್ನಪ್ಪ ಕಣಮುಚನಾಳ, ಸುಭಾಸ ಭಂಟನೂರ, ರಮೇಶ ದೇಸಾಯಿ ಸೇರಿದಂತೆ ಹಲವರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ
    In (ರಾಜ್ಯ ) ಜಿಲ್ಲೆ
  • ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
    In (ರಾಜ್ಯ ) ಜಿಲ್ಲೆ
  • ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ
    In (ರಾಜ್ಯ ) ಜಿಲ್ಲೆ
  • ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು!
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಬದಲಾವಣೆಗೆ ಶಿಕ್ಷಣವೇ ಪ್ರಬಲ ಅಸ್ತ್ರ :ಎಸ್‌ಪಿ ಗಡಾದೆ
    In (ರಾಜ್ಯ ) ಜಿಲ್ಲೆ
  • ಹುಬನೂರ ಸರ್ಕಾರಿ ಪ್ರೌಢ ಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.