Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಬಡತನ ನಿರ್ಮೂಲನೆ ಯೋಜನೆ ತಯಾರಿಕೆ
(ರಾಜ್ಯ ) ಜಿಲ್ಲೆ

ಗ್ರಾಮೀಣ ಬಡತನ ನಿರ್ಮೂಲನೆ ಯೋಜನೆ ತಯಾರಿಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎರಡು ದಿನಗಳ ತರಬೇತಿ ಕಾರ್ಯಾಗಾರ | ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಕರ್ತವ್ಯ ಪಾಲನೆಗೆ ಸಿಇಓ ಕರೆ

ವಿಜಯಪುರ: ಸಂವಿಧಾನ ನೀಡಿದ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸಬೇಕು. ಪ್ರತಿಯೊಬ್ಬರು ಮತದಾನ ಮಾಡುವುದಲ್ಲದೇ ಮತದಾನ ಮಾಡಲು ಕುಟುಂಬ ಸದಸ್ಯರು, ನೆರೆಹೊರೆಯವನ್ನು ಪ್ರೇರೆಪಿಸುವುದ ನಮ್ಮ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಹೇಳಿದರು.
ಮಂಗಳವಾರ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರದಲ್ಲಿ ನಡೆಯುತ್ತಿರುವ ಆಹಾರ ಭದ್ರತಾ ಕಾಯ್ದೆ ೨೦೧೩ರ ಜಾರಿಯಲ್ಲಿ ಬಾಲ ವಿಕಾಸ ಸಮಿತಿ ಸದಸ್ಯರ ಕರ್ತವ್ಯ ಮತ್ತು ಜವಾಬ್ದಾರಿ ಸಾಮರ್ಥ್ಯಾಭಿವೃದ್ಧಿ ತರಬೇತಿ ಹಾಗೂ ಜಿಲ್ಲಾ ಪಂಚಾಯಿಯ ಎನ್‌ಆರ್‌ಎಲ್‌ಎಂ ಯೋಜನೆಯಡಿ ಚಡಚಣ ತಾಲೂಕಿನ ೧೩ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಗ್ರಾಮೀಣ ಬಡತನ ನಿರ್ಮೂಲನೆ ಯೋಜನೆ” ತಯಾರಿಕೆ ಕುರಿತಂತೆ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ರಾಜ್ಯ ಚುನಾವಣಾ ಆಯೋಗದಿಂದ ಮತದಾರರ ಜಾಗೃತಿ ಕುರಿತು ಇರುವ ವಿಡಿಯೋವನ್ನು ಉದ್ಘಾಟಿಸಿ, ಶಿಬಿರಾರ್ಥಿಗಳೊಂದಿಗೆ ವೀಕ್ಷಿಸಿದ ಅವರು, ತರಬೇತಿಯಲ್ಲಿ ಭಾಗವಹಿಸಿದ ಎಲ್ಲ ಶಿಬಿರಾರ್ಥಿಗಳಿಗೆ ಮತದಾನದ ಮಹತ್ವದ ಕುರಿತು ಅವರು ಮಾತನಾಡಿದರು.
ಮತದಾನವು ನಮ್ಮೆಲ್ಲರ ಹಕ್ಕು, ನಮ್ಮ ಹಕ್ಕನ್ನು ನಾವು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ನಮ್ಮ ಕರ್ತವ್ಯವನ್ನು ನಿಭಾಯಿಸೋಣ. ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-೨೦೨೪ ನ್ನು ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇ.೧೦೦ರಷ್ಟು ಮತದಾನವಾಗುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಗ್ರಾಮೀಣ ಮಟ್ಟದಲ್ಲಿ ಅನೇಕ ಜನರು ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ವಲಸೆ ಹೋಗಿರುತ್ತಾರೆ ಅಂತಹವರನ್ನು ಕರೆ ಮಾಡುವ ಮೂಲಕ ಸಂಪರ್ಕಿಸಿ ಅವರಿಗೂ ಸಹ ಮತದಾನದ ಕುರಿತು ಮಾಹಿತಿ ನೀಡಿ ಮತದಾನ ಮಾಡಲು ಪ್ರೇರೇಪಣೆ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಚುನಾವಣಾ ಆಯೋಗವು ಮತದಾರರಿಗೆ ಚುನಾವಣೆ ಕುರಿತು ಎಲ್ಲ ಮಾಹಿತಿಗಳು ಲಭ್ಯವಾಗುವಂತೆ ವೋಟರ್ ಹೆಲ್ಪಲೈನ್ (ವಿಎಚ್‌ಎ) ಆಪ್ ನ್ನು ಜಾರಿಗೆ ತಂದಿದ್ದು, ಈ ಆಪ್ ನ್ನು ತಮ್ಮ ಮೊಬೈಲ್ ಗಳಲ್ಲಿ ಡೌನ್ಲೋಡ ಮಾಡಿಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಲು, ಹೊಸದಾಗಿ ಹೆಸರನ್ನು ನೊಂದಾಯಿಸಿಕೊಳ್ಳಲು ನಮೂನೆಗಳ ಬಗ್ಗೆ ತಿಳಿದುಕೊಳ್ಳಿ ಹಾಗೂ ಚುನಾವಣಾ ಸಹಾಯವಾಣಿ ಸಂಖ್ಯೆ ೧೯೫೦ ಗೆ ಕರೆ ಮಾಡಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಸಿ. ಬಿ ದೇವರಮನಿ, ಮಹಾನಗರ ಪಾಲಿಕೆ ಆಯುಕ್ತರಾದ ಬದ್ರೂದ್ದೀನ ಸೌದಾಗರ, ಉಪ ಆಯುಕ್ತರು ಮಹಾವೀರ ಬೋರಣ್ಣವರ ಸೇರಿದಂತೆ ಜಿಲ್ಲಾ ಪಂಚಾಯತಿಯ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ

ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ
    In (ರಾಜ್ಯ ) ಜಿಲ್ಲೆ
  • ಶಾಲೆಗಳಲ್ಲಿ ಪತ್ರಿಕೆಗಳ ಓದು ಕಡ್ಡಾಯ: ಸರ್ಕಾರದ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಪದ್ಮಶ್ರೀ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
    In (ರಾಜ್ಯ ) ಜಿಲ್ಲೆ
  • ಏ.೩೦ ರಂದು ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ಮುಧೋಳ ಶಾಖೆ ಆರಂಭ
    In (ರಾಜ್ಯ ) ಜಿಲ್ಲೆ
  • ದಿ.ಮಹಾದೇವಪ್ಪ ಮುಳವಾಡ ಮೃತದೇಹ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು!
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಬದಲಾವಣೆಗೆ ಶಿಕ್ಷಣವೇ ಪ್ರಬಲ ಅಸ್ತ್ರ :ಎಸ್‌ಪಿ ಗಡಾದೆ
    In (ರಾಜ್ಯ ) ಜಿಲ್ಲೆ
  • ಹುಬನೂರ ಸರ್ಕಾರಿ ಪ್ರೌಢ ಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕ್ರೈಸ್ತ್ ವಸತಿ ಕಾಲೇಜುಗಳಿಗೆ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆ ಅವಧಿ ಮೇ ೨ ರವರೆಗೆ ವಿಸ್ತರಣೆ :ಪರಿಶೀಲನಾ ಅದಾಲತ್ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.