ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದ ಮುಖಂಡ ರಾಜಶೇಖರ ಹುಲ್ಲೂರ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವಿಜಯಪುರ ಜಿಲ್ಲಾ ಉಸ್ತುವಾರಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ.ಕೃಷ್ಣೆಗೌಡ ನೇಮಕ ಮಾಡಿ ಆದೇಶ ಹೊರಡಿಸಿ ಸಂಘಟನೆಯನ್ನು ಬಲಪಡಿಸಲು ಇವರಿಗೆ ಸಂಪೂರ್ಣ ಅಧಿಕಾರವನ್ನು ನೀಡಲಾಗಿದೆ. ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಮಾಹಿತಿಗಳನ್ನು ಕೇಂದ್ರ ಕಚೇರಿಗೆ ನೀಡಬೇಕು. ಅವರ ಆದೇಶದ ಮೂಲಕವೇ ಕಾರ್ಯನಿರ್ವಹಿಸಬೇಕು. ಇವರಿಗೆ ನೀಡಿರುವ ಅಧಿಕಾರವನ್ನು ಅಧ್ಯಕ್ಷರು ಯಾವುದೇ ಸಮಯದಲ್ಲಿ ಹಿಂತೆಗೆದುಕೊಳ್ಳಬಹುದು. ಸಂಘಟನೆಯನ್ನು ಬಲಿಷ್ಠಗೊಳಿಸಲು ಶ್ರಮಿಸಬೇಕೆಂದು ಕರವೇ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ.ಕೃಷ್ಣೆಗೌಡ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment