ವಿಜಯಪುರ: ವಿದ್ಯುತ್ ತಂತಿಗಳ ಘರ್ಷಣೆಯಿಂದ ಬೆಂಕಿ ಅವಘಡ ಸಂಭವಿಸಿ ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ
ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಬುಧವಾರ ನಡೆದಿದೆ.
ನಿಂಗಪ್ಪ ಮಸಳಿ ಹಾಗೂ ಮಲ್ಲಪ್ಪ ಮಸಳಿ ಎಂಬ ರೈತರಿಗೆ ಸೇರಿದ 15 ಎಕರೆ ಜಮೀನಿನಲ್ಲಿ ಬೆಳೆದ ಕಟಾವಿಗೆ ಬಂದಿದ್ದ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಕಬ್ಬು ಸುಟ್ಟು ಕರಕಲಾಗಿತ್ತು.
ಈ ದುರ್ಘಟನೆಗೆ ಹೆಸ್ಕಾ ಅಧಿಕಾರಿಗಳ ಹಾಗೂ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment