Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಥಳೀಯ ಪತ್ರಿಕೆಗಳ ಜಾಹೀರಾತು ದರ ಹೆಚ್ಚಳಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

ಸ್ಥಳೀಯ ಪತ್ರಿಕೆಗಳ ಜಾಹೀರಾತು ದರ ಹೆಚ್ಚಳಕ್ಕೆ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಒತ್ತಾಯ

ಚಿತ್ರದುರ್ಗ: ಸ್ಥಳೀಯ ಮತ್ತು ಪ್ರಾದೇಶಿಕ ಪತ್ರಿಕೆಗಳ ಜಾಹೀರಾತು ದರವನ್ನು ಕೂಡಲೇ ಹೆಚ್ಚಿಸಬೇಕೆಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ ಸರ್ಕಾರಕ್ಕೆ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು, 2023 ರ ಏಪ್ರಿಲ್ 1 ರಿಂದ ಜಾಹೀರಾತು ದರ ಹೆಚ್ಚಿಸಬೇಕಾಗಿತ್ತು. ಆದರೆ ಸರ್ಕಾರ ಜಾಹೀರಾತು ದರ ಹೆಚ್ಚಿಸಿಲ್ಲ. ಹೊಸ ಜಾಹೀರಾತು ನೀತಿ ಸಹ ಜಾರಿಯಾಗಿಲ್ಲ.ಹಾಗಾಗಿ ಈ ಕೂಡಲೇ ಸರ್ಕಾರ ಶೇಕಡ 12 ರಷ್ಟು ಜಾಹೀರಾತು ದರವನ್ನು ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಜಾಹೀರಾತುಗಳನ್ನು ಐ.ಎನ್.ಎಸ್ ಖಾಸಗಿ ಜಾಹೀರಾತು ಏಜೆನ್ಸಿಗಳ ಮೂಲಕ ಬಿಡುಗಡೆ ಮಾಡುವುದನ್ನು ದಿನಾಂಕ: 01-04-2024 ರಿಂದ ನಿಲ್ಲಿಸಬೇಕು ಎಂದು ಆಯುಕ್ತರಲ್ಲಿ ಮನವಿ ಮಾಡಲಾಗಿದೆ. ಆಯುಕ್ತರು ಅದಕ್ಕೆ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರಿ ಜಾಹೀರಾತುಗಳನ್ನು ಪತ್ರಿಕೆಗಳಿಗೆ ನೇರವಾಗಿ ಇಲಾಖೆಯೇ ನೀಡುವಂತಾಗಬೇಕು. ಏಜೆನ್ಸಿಯವರು ಜಾಹೀರಾತು ಪ್ರಕಟಿಸಿ ಹತ್ತಾರು ತಿಂಗಳಾದರು ಹಣ ಪಾವತಿಸುವುದಿಲ್ಲ. ಹಾಗಾಗಿ ಖಾಸಗಿ ಏಜೆನ್ಸಿಗಳಿಂದ ಜಾಹೀರಾತುಗಳನ್ನು ನೀಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಅವರು ಹೇಳಿದರು.
ರಾಜ್ಯಮಟ್ಟದ ಪತ್ರಿಕೆಗಳಿಗೆ ನೀಡುವ ಜಾಹೀರಾತುಗಳನ್ನ ಜಿಲ್ಲಾ ಮಟ್ಟದ ಪತ್ರಿಕೆಗಳಿಗೆ ನೀಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಸಂಘದಿಂದ ರೂಪಿಸಬೇಕಾಗಿದೆ. ಸರ್ಕಾರದ ಜಾಹೀರಾತು ನೀತಿಯಲ್ಲಿ ತಿಳಿಸಿರುವಂತೆ ರಾಜ್ಯದ ಎಲ್ಲಾ ಜಿಲ್ಲೆಯ ವಾರ್ತಾ ಅಧಿಕಾರಿಗಳು ಸ್ಥಳೀಯ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಟೆಂಡರ್ ಜಾಹೀರಾತುಗಳನ್ನು ಟೆಂಡರ್ ಮೌಲ್ಯಕ್ಕೆ ಅನುಗುಣವಾಗಿ ಬಿಡುಗಡೆ ಮಾಡಬೇಕು. ಇಲಾಖೆಯವರು ಹತ್ತಾರು ಕಾಮಗಾರಿಗಳ ಮೊತ್ತವನ್ನು ತಿಳಿಸದೆ ನೀಡು ಟೆಂಡರ್ ಜಾಹೀರಾತುಗಳನ್ನು ವಾರ್ತಾ ಅಧಿಕಾರಿಗಳು ಪರಿಶೀಲಿಸಬೇಕು. ಜಾಹೀರಾತಿನ ಮೊತ್ತವನ್ನು ಪರಿಗಣಿಸಿ ಜಾಹೀರಾತುಗಳನ್ನು ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಬಿಡುಗಡೆ ಮಾಡಬೇಕೆಂದು ತಿಳಿಸಿದರು.
ಸಂಪಾದಕರು ಜೇನು ನೊಣದಂತಿರಬೇಕು, ಒಗ್ಗಟ್ಟಿನಿಂದ ಏನನ್ನಾದರು ಸಾಧಿಸಬಹುದು, ಹಾಗಾಗಿ ಎಲ್ಲರೂ ಒಂದಾಗಿ ಸಂಘವನ್ನು ಬಲಪಡಿಸಬೇಕು. ಸಂಪಾದಕರು ಗುರುತಿಸಿಕೊಳ್ಳುವ ಅಗತ್ಯತೆ ತುಂಬಾ ಇದೆ.ಆ ಕೆಲಸವನ್ನು ಎಲ್ಲಾ ಸಂಪಾದಕರು ಮಾಡುತ್ತಲೇ ತಮ್ಮ ಸಂಸ್ಥೆಗಳನ್ನ ಉತ್ತಮ ಅಭಿವೃದ್ಧಿ ಮಟ್ಟಕ್ಕೆ ಕೊಂಡೊಯ್ಯಬೇಕೆಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿನೇಶ್‌ಗೌಡಗೆರೆ, ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಉಪಾಧ್ಯಕ್ಷ ಗೌನಹಳ್ಳಿ ಗೋವಿಂದಪ್ಪ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.