ವಿಜಯಪುರ: ವಸತಿ ನಿಲಯಗಳ ಅವ್ಯವಸ್ಥೆ ಹಾಗೂ ವಸತಿ ನಿಲಯಗಳ ನಿರ್ವಹಣೆಯ ಅನುದಾನ ದುರುಪಯೋಗ ಪಡಿಸಿಕೊಂಡವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಲಿತ ರಕ್ಷಣಾ ವೇದಿಕೆ (ರಿ) ಶೋಷಿತ ಜನಾಂಗಗಳ ಒಕ್ಕೂಟ ಜಿಲ್ಲಾ ಸಮತಿ ವತಿಯಿಂದ ವಿಜಯಪುರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ ಮಾನವರ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ರಕ್ಷಣಾ ವೇದಿಕೆ ಶೋಷಿತ ಜನಾಂಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಧರ್ಮರಾಜ ಎಸ್. ಸಾಲೋಟಗಿ ಮಾತನಾಡಿ, ಇಂಡಿ ಹಾಗೂ ಚಡಚಣ ತಾಲೂಕಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಮೇಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಇಲ್ಲದೆ, ಅವ್ಯವಸ್ಥೆಯ ಕುರಿತು ಹಾಗೂ ವಸತಿ ನಿಲಯಗಳ ನಿರ್ವಹಣೆಗಾಗಿ, ಯಂತ್ರೋಪಕರಣ, ಪೀಠೋಪಕರಗಳ ಖರೀದಿಗಾಗಿ ಬಂದಿರುವ ಅನುದಾನ ದುರುಪಯೋಗವಾಗಿರುವ ಬಗ್ಗೆ ಹಾಗೂ ವಸತಿ ನಿಲಯಗಳಿಗೆ ಜನತಾ ಬಜಾರದಿಂದ ಆಹಾರ ಧಾನ್ಯಪಡೆದುಕೊಳ್ಳದೆ ಅಂಗಡಿಯಿಂದ ಖರೀದಿಸುತ್ತಿರುವ ಬಗ್ಗೆ ತನಿಖೆ ನಡಿಸಿ ಕ್ರಮ ಕೈಗೊಳ್ಳುವ ಕುರಿತು ಈಗಾಗಲೇ ಇಂಡಿಯಲ್ಲಿ ಪ್ರತಿಭಟನೆ ಮಾಡಲಾಗಿದ್ದು ಹಾಗೂ ಈ ಕುರಿತು ಪತ್ರಿಕೆಗಳಲ್ಲಿ ಸರಣಿ ವರದಿಗಳು ಪ್ರಕಟಗೊಂಡರೂ, ಇಲ್ಲಿಯವರೆಗೂ ಯಾವುದೇ ವಾರ್ಡ್ನ್ ಹಾಗೂ ತಾಲೂಕು ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.ಫೆ.೨೦ ರೊಳಗಾಗಿ ಕ್ರಮ ಕೈಗೊಳ್ಳದೆ ಇದ್ದರೆ, ಫೆ.೨೮ ರಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಛೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಸುನೀಲ ಗಾಯಕವಾಡ, ತಾಲೂಕಾ ಅಧ್ಯಕ್ಷ ಶೆಟ್ಟಪ್ಪ ಶಿವೂರಪುರ, ಇಂಡಿ ಸಂಘಟನೆ ಪ್ರಧಾನ ಕಾರ್ಯದರ್ಶಿ ಸತೀಶ ಹರಿಜನ, ವಿದ್ಯಾರ್ಥಿ ಘಟಕದ ಅಧ್ಯಕ್ಷ ರಾಜಶೇಖರ ಶಿಂದೆ, ತಾಲೂಕ ಸಂಘಟನೆ ಕಾರ್ಯದರ್ಶಿ ವಿಕಾಸ ಬನಸೋಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

