ಬಸವನಬಾಗೇವಾಡಿ: ಸತತ ಪ್ರಯತ್ನ, ಓದಿನಲ್ಲಿ ಶ್ರದ್ಧೆ, ಆತ್ಮವಿಶ್ವಾಸ ಇದ್ದರೆ ವಿದ್ಯಾರ್ಥಿಗಳಿಗೆ ಯಾವುದು ಅಸಾಧ್ಯವಲ್ಲ ಎಂದು ವಿಜಯಪುರದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶಿವಾನಂದ ಕೆಲೂರ ಹೇಳಿದರು.
ಸ್ಥಳೀಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಹಾಗೂ ಸ್ನೇಹಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡತನ, ಕನ್ನಡ ಮಾಧ್ಯಮ, ಹಳ್ಳಿ ಬದುಕಿನ ಹಿನ್ನೆಲೆ ಇದ್ದರೂ ಗುರಿ ಮುಟ್ಟಿದ ನೂರಾರು ಸಾಧಕರು ನಮ್ಮ ಕಣ್ಣಮುಂದಿದ್ದಾರೆ. ಸಾಧಿಸುವ ಛಲದೊಂದಿಗೆ ಸತತ ಪ್ರಯತ್ನದಲ್ಲಿದ್ದವರು ಯಶಸ್ಸು ಕಾಣುತ್ತಾರೆ ಎಂದು ಹೇಳಿದ ಅವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದರೆ ರೂ.25,000 ಹಾಗೂ ಗಣಿತ ವಿಷಯದಲ್ಲಿ 100 ಅಂಕ ಪಡೆದರೆ ರೂ. 5,000 ಬಹುಮಾನ ನೀಡುವುದಾಗಿ ಭರವಸೆ ನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಪಿ.ಯು.ರಾಠೋಡ ಮಾತನಾಡಿ, ಅಂಕ ಗಳಿಕೆ ಜೊತೆಗೆ ಸಂಸ್ಕಾರಯುತ ಶಿಕ್ಷಣ ಇಂದಿನ ಅವಶ್ಯಕತೆಯಾಗಿದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಮುಖಂಡ ಅನಿಲ ಅಗರವಾಲ ಮಾತನಾಡಿದರು.
ಪುರಸಭೆ ಸದಸ್ಯ ದೇವೇಂದ್ರ ರಾಠೋಡ, ಎಸ್.ಎ.ದೇಗಿನಾಳ, ಮುರಗೇಶ ನಾಯ್ಕೋಡಿ, ಶರಣಗೌಡ ಬಿರಾದಾರ, ಬಾಬು ಕೆಂಭಾವಿ, ಶಾರದಾ ಮ್ಯಾಗೇರಿ, ಪ್ರಕಾಶ ಬೆಣ್ಣೂರ, ಶಿವಲಿಂಗ ಕಿಣಗಿ ಇದ್ದರು.
ಶಿಕ್ಷಕ ಶಿವಕುಮಾರ ಹುಲಸೂರ ಸ್ವಾಗತಿಸಿದರು. ಅಶೋಕ ಹಂಚಲಿ, ಜಿ.ಎಂ.ಗಂಜಾಳ ನಿರೂಪಿಸಿದರು. ಸ್ನೇಹಾ ಪೂಜಾರ ವಂದಿಸಿದರು. ಇದೇ ಸಂದರ್ಭದಲ್ಲಿ ಮೇ ತಿಂಗಳಲ್ಲಿ ನಿವೃತ್ತಿ ಹೊಂದಲಿರುವ ಪ್ರಭಾಕರ ಢವಳಗಿ, ಆರ್.ಐ. ಗಬ್ಬೂರ ಹಾಗೂ ಆದರ್ಶ ವಿದ್ಯಾರ್ಥಿನಿ ಶ್ರೀರಕ್ಷಾ ಬಿರಾದಾರ ಅವರನ್ನು ಸನ್ಮಾನಿಸಲಾಯಿತು. ಸಂಜೆ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ ಚಾಲನೆ ನೀಡಿದರು.
Subscribe to Updates
Get the latest creative news from FooBar about art, design and business.
Related Posts
Add A Comment

