ವಿಜಯಪುರ: “ಸಿಎಂ ಸಿದ್ದರಾಮಯ್ಯ 15ನೇ ಬಾರಿ ರೂ.3,71,383 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಮೀನುಗಾರರಿಗೆ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗಾಗಿ 3೦೦೦ ಕೋಟಿ ರೂಪಾಯಿಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. ಹೊನ್ನಾವರ ತಾಲೂಕಿನ ಮಂಕಿ ಕಾಸರ್ಕೋಡಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ , ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ, ಆಕ್ವಾ ಪಾರ್ಕ್ ಸ್ಥಾಪನೆ , ಮುರುಡೇಶ್ವರದಲ್ಲಿ ಸುಸಜ್ಜಿತ ಹೊರಬಂದರು ನಿರ್ಮಾಣ, ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿಯ ಮೀನುಗಾರಿಕೆಯ ಪರಿಹಾರ 1500 ರೂ ಗಳಿಂದ 3000 ರೂಪಾಯಿಗಳಿಗೆ ಏರಿಕೆ ಮಾಡಿದ್ದಾರೆ. ಅಪಘಾತ ಅಥವಾ ಅವಘಡಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿರುವುದು ನಿಜಕ್ಕೂ ಮೆಚ್ಚವಂತದ್ದು. ವಿವಿಧ ವಸತಿ ಯೋಜನೆಯಡಿಯಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ. ಘೊಷಣೆಯಾಗಿರುವ ಈ ಯೋಜನೆಗಳು ಕೇವಲ ಬಜೆಟ್ ಪುಸ್ತಕಕ್ಕೆ ಸೀಮಿತವಾಗದೇ ಅನುಷ್ಠಾನಕ್ಕೆ ಬಂದು ನಿಜವಾದ ಫಲಾನುಭವಿಗಳಿಗೆ ತಲುಪಬೇಕು. ಆದರೆ ಮತ್ತೊಮ್ಮೆ ಮೀನುಗಾರರಿಗೆ ಜೀವ ವಿಮೆ ಮತ್ತು ಆರೋಗ್ಯ ವಿಮೆಗಳ ಬಗ್ಗೆ ಪ್ರಸ್ತಾಪ ಮಾಡದೇ ಇರುವದು ಬೇಸರ ತಂದಿದೆ.”
– ಡಾ. ಗೌತಮ್ ಆರ್ ಚೌಧರಿ
ರಾಷ್ಟ್ರೀಯ ಉಪಾಧ್ಯಕ್ಷರು, ರಾಷ್ಟ್ರೀಯ ಮೀನುಗಾರರ ಸಂಘ

