Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಘೋಷಣೆ
(ರಾಜ್ಯ ) ಜಿಲ್ಲೆ

ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಘೋಷಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಚಿವ ಶಿವಾನಂದ ಪಾಟೀಲರ ಮನವಿಗೆ ಸಿಎಂ ಸ್ಪಂದನೆ | ಹಲವು ಯೋಜನೆ ಪ್ರಕಟ

ಬೆಂಗಳೂರು: ಬಸವಣ್ಣನ ಜನ್ಮಸ್ಥಳ ಬಸವನಬಾಗೇವಾಡಿಯ ಅಭಿವೃದ್ಧಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಸೇರಿದಂತೆ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲ ಅವರ ಮನವಿಗೆ ಸ್ಪಂದಿಸಿ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.
ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ, ಬಸವನ ಬಾಗೇವಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶೀತಲಗೃಹ ಘೋಷಿಸಲಾಗಿದೆ. ಮುಳವಾಡ ಏತ ನೀರಾವರಿಯ ಮೂರನೇ ಹಂತದ ಯೋಜನೆಗಳಿಗೂ ಅನುದಾನ ಒದಗಿಸಲಾಗಿದೆ. ಎಪಿಎಂಸಿಗಳ ಎಲ್ಲ ಕಾರ್ಯಚಟುವಟಿಕೆಗಳನ್ನು ೧೦ ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೈಜ್ ಮಾಡಲು, ಹಲವು ಎಪಿಎಂಸಿಗಳಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್ ಸ್ಥಾಪನೆ ಮಾಡಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕ ಸಹಭಾಗಿತ್ವದಲ್ಲಿ ಎಲ್ಲ ಎಪಿಎಂಸಿಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರ, ಪೆಟ್ರೋಲ್ ಬಂಕ್‌ಗಳ ನಿರ್ಮಾಣ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.
ಎಪಿಎಂಸಿಗಳನ್ನು ಬಲಪಡಿಸುವ ಮೂಲಕ ರೈತರು ತಮ್ಮ ಕೃಷಿ ಉತ್ಪನ್ನಗಳಿಗೆ ಉತ್ತಮ ಆದಾಯ ಗಳಿಸಲು ನೆರವಾಗುವಂತೆ ಹಲವು ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಆರ್ಥಿಕವಾಗಿ ದುರ್ಬಲವಾಗಿರುವ ಎಪಿಎಂಸಿಗಳೀಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಗೆ ಪಡೆಯುವ ಮೂಲಕ ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪಿಸಲು ಕಾನೂನು ರಚನೆ ಮಾಡಲಾಗುವುದು. ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಕಬ್ಬು ಬೆಳೆಗಾರರ ಹಿತರಕ್ಷಣೆ ಮತ್ತು ತೂಕದಲ್ಲಿನ ಮೋಸ ತಡೆಗೆ ಎಲ್ಲ ಸಕ್ಕರೆ ಕಾರ್ಖಾನೆಗಳ ಬಳಿ ಎಪಿಎಂಸಿಗಳ ಮೂಲಕವೇ ಬ್ರಿಡ್ಜ್ ಸ್ಥಾಪನೆ ಘೋಷಿಸಲಾಗಿದೆ. ರಾಜ್ಯ ಉಗ್ರಾಣ ನಿಗಮದಲ್ಲಿ ಬಳಕೆಯಾಗದೇ ಇರುವ ಉಗ್ರಾಣಗಳ ಸಾಮರ್ಥ್ಯ ಬಳಸಿ ಸಾರ್ವಜನಿಕ ಸಹಭಾಗತ್ವದಲ್ಲಿ ಶೀತಲಗೃಹಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ರಾಜ್ಯದಲ್ಲಿ ಜವಳಿ ಹಾಗೂ ನೇಕಾರಿಕೆ ಅಭಿವೃದ್ಧಿ, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ೨೦೨೪-೨೯ರ ಅವಧಿಗೆ ಹತ್ತು ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ ೨ ಲಕ್ಷ ಉದ್ಯೋಗ ಸೃಷ್ಟಿ ಗುರಿಯೊಂದಿಗೆ ಹೊಸ ಜವಳಿ ನೀತಿ ರಚನೆಗೆ ನಿರ್ಧರಿಸಲಾಗಿದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ಜಿಲ್ಲೆಯ ಸಾವಿರ ಎಕರೆ ಪ್ರದೇಶದಲ್ಲಿ ಪಿಪಿಪಿ ಮಾದರಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲು ಉದ್ದೇಶಿಸಿದ್ದು, ಇದರಿಂದ ಒಂದು ಲಕ್ಷ ಜನರಿಗೆ ನೇರ ಹಾಗೂ ೨ ಲಕ್ಷ ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ ೫೦ ಕೋಟಿ ರೂ. ಅನುದಾನ ಒದಗಿಸಲಾಗಿದೆ. ಬಳ್ಳಾರಿಯಲ್ಲಿ ಅಸಂಘಟಿತವಾಗಿರುವ ಜೀನ್ಸ್ ಉದ್ದಿಮೆ ಸಂಘಟಿಸಿ ವಿಶ್ವದರ್ಜೆಗೆ ಉನ್ನತೀಕರಿಸಲು ಮೂಲ ಸೌಕರ್ಯ ಒಳಗೊಂಡಂತೆ ಜೀನ್ಸ್ ಅಪರೆಲ್ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರ ಘೋಷಣೆ ಮಾಡಲಾಗಿದೆ. ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದ ನಂಜನಗೂಡು ತಾಲೂಕು ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಿಕೆ ಪ್ರೋತ್ಸಾಹಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.