Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಸ್ಯೆ ಇರುವಲ್ಲಿ ತುರ್ತು ನೀರು ಒದಗಿಸಲು ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ಸಮಸ್ಯೆ ಇರುವಲ್ಲಿ ತುರ್ತು ನೀರು ಒದಗಿಸಲು ಕ್ರಮ ವಹಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಮಟ್ಟದ ಕುಡಿವ ನೀರಿನ ಪರಿಸ್ಥಿತಿ ನಿರ್ವಹಣಾ ಸಭೆಯಲ್ಲಿ ಸಚಿವ ಡಾ. ಎಂ.ಬಿ.ಪಾಟೀಲ ಸೂಚನೆ

ವಿಜಯಪುರ: ಜಿಲ್ಲೆ ಸೇರಿದಂತೆ ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ತುರ್ತಾಗಿ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಸೂಚನೆ ನೀಡಿದರು.
ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ನಿರ್ವಹಣೆ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದಾದ್ಯಂತ ಬರಗಾಲವಿರುವುದರಿಂದ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆ ಬಂದ ಕಡೆಗಳಲ್ಲಿ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಒದಗಿಸಲು ಕ್ರಮ ವಹಿಸಬೇಕು. ಬೊರವೆಲ್ ಕೊರೆಸುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳುವುದರಿಂದ ಪರ್ಯಾಯವಾಗಿ ಇದ್ದ ಮೂಲಗಳಿಂದಲೇ ಟ್ಯಾಂಕರ್ ಮೂಲಕ ತುರ್ತಾಗಿ ನೀರು ಒದಗಿಸಲು ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಜಯಪುರ ನಗರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನಿಡಗುಂದಿ ಅಕ್ವಾಡೆಕ್ಟ್ ಮೂಲಕ ಭೂತನಾಳ ಕೆರೆಯನ್ನು ತುಂಬಿಸಲು ತಾತ್ಕಾಲಿಕವಾಗಿ ಸ್ಟೋರೇಜ್ ನಿರ್ಮಿಸಿಕೊಂಡು ಕೆರೆ ತುಂಬಿಸಿ ಕುಡಿಯುವ ನೀರಿನ ಪೂರೈಕೆಗೆ ಕ್ರಮ ವಹಿಸಬೇಕು. ವಿಜಯಪುರ ನಗರದಲ್ಲಿ ಜಲಮಂಡಳಿಯಿಂದ ಕೊರೆಯಿಸಲಾದ ೨೦ ಬೊರವೆಲ್‌ಗಳಿಗೆ ಮಾಸಾಂತ್ಯದೊಳಗೆ ತುರ್ತಾಗಿ ಮೋಟರ್ ಅಳವಡಿಸಿ ನೀರು ಪೂರೈಕೆಗೆ ಕ್ರಮ ವಹಿಸಬೇಕು. ಸಣ್ಣ ಪುಟ್ಟ ದುರಸ್ತಿಗಳಿರುವ ಬೊರವೆಲ್‌ಗಳ ದುರಸ್ತಿಗೆ ಕ್ರಮ ವಹಿಸಿ ನೀರು ಒದಗಿಸಲು ಮುಂದಾಗಬೇಕು. ಈಗಾಗಲೇ ೮ ಖಾಸಗಿ ಬೊರವೆಲ್‌ಗಳು ನೀಡಲು ಮುಂದಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ನಗರದ ಆಯಾ ವಾರ್ಡಗಳಲ್ಲಿ ಖಾಸಗಿ ಬೊರವೆಲ್‌ಗಳನ್ನು ಬಾಡಿಗೆ ಮೇಲೆ ಪಡೆದು ನೀರು ಒದಗಿಸಲು ಕ್ರಮ ವಹಿಸಬೇಕು. ಈಗಾಗಲೇ ಗುರುತಿಸಲಾದ ೨೮ ಸರ್ಕಾರಿ ಹಾಗೂ ಖಾಸಗಿ ಭಾವಿಗಳ ನೀರಿನ ಬಳಕೆ ಮಾಡುವ ನಿಟ್ಟಿನಲ್ಲಿ ಅಗತ್ಯವಿರುವ ಮೋಟರ್-ಪಂಪ್ ಅಳವಡಿಸಿ ಕುಡಿಯಲು ನೀರು ಯೋಗ್ಯವಿಲ್ಲದಿದ್ದಲ್ಲಿ ಭಾವಿಯ ನೀರು ಗೃಹಬಳಕೆ ಉಪಯೋಗ ಮಾಡಲು ಕ್ರಮ ವಹಿಸಬೇಕು. ಇದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ನಗರದಲ್ಲಿರುವ ಸರ್ಕಾರಿ ಭಾವಿ ಹಾಗೂ ಬೊರವೆಲ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ದುರಸ್ತಿ ಇರುವ ಬೊರವೆಲ್‌ಗಳನ್ನು ದುರಸ್ತಿಗೊಳಿಸಬೇಕು. ಭಾವಿಗಳನ್ನು ಸ್ವಚ್ಛಗೊಳಿಸಿ ನೀರಿನ ಸದ್ಭಳಕೆಗೆ ಮುಂದಾಗಬೇಕು. ಆಯಾ ವಾರ್ಡಗಳಲ್ಲಿರುವ ಬೊರವೆಲ್, ಭಾವಿಗಳನ್ನು ಸ್ವಚ್ಛಗೊಳಿಸಿದ್ದಲ್ಲಿ ವಾರ್ಡಿನ ನೀರಿನ ಸಮಸ್ಯೆಗೆ ಪರಿಹಾರ ಸಿಗುವುದರಿಂದ ಈ ತಿಂಗಳ ೨೮ರೊಳಗೆ ಲಭ್ಯವಿರುವ ಎಲ್ಲ ಕೊಳವೆಭಾವಿ- ಭಾವಿಗಳ ನೀರಿನ ಬಳಕೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.
ಕುಡಿಯುವ ನೀರು ಒದಗಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ವಿಪತ್ತು ಪರಿಹಾರ ನಿಧಿಯಲ್ಲಿ ೧೮ ಕೋಟಿ ರೂ. ಇದೆ. ಟ್ಯಾಂಕರ್ ಮೂಲಕ ನೀರು ಪೂರೈಕೆ, ಪೈಪಲೈನ್, ಬಾಡಿಗೆ ಪಾವತಿ ಸೇರಿದಂತೆ ಈ ಹಣವನ್ನು ಬಳಕೆ ಮಾಡಿಕೊಂಡು ತುರ್ತಾಗಿ ನೀರು ಒದಗಿಸಲು ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಮಹಾನಗರ ಪಾಲಿಕೆ ಮಹಾಪೌರ ಶ್ರೀಮತಿ ಮಾಹೆಜಬಿನ್ ಹೊರ್ತಿ, ಉಪಮಹಾಪೌರ ದಿನೇಶ್ ಹಳ್ಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಸೇರಿದಂತೆ ಮಹಾನಗರ ಪಾಲಿಕೆ ವಿವಿಧ ಸದಸ್ಯರು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.