ಮುದ್ದೇಬಿಹಾಳ: ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸ ಬೇಕಾದರೆ ನಿರಂತರ ಅಧ್ಯಯನದ ಜೊತೆಗೆ ಆಸಕ್ತಿ ಇದ್ದಲ್ಲಿ ಅದು ಸಾಧನೆಯ ಗುರಿಮುಟ್ಟುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ಆರ್.ವಿಭೂತಿ ಹೇಳಿದರು.
ಪಟ್ಟಣದ ಇಂದಿರಾ ನಗರದಲ್ಲಿರುವ ಎಸ್ಎಸ್ಎಂ ಪ್ರೌಢ ಶಾಲೆಯಲ್ಲಿ ನಡೆದ ತಾಲೂಕಾ ಮಟ್ಟದ ಸಮಾಜ ವಿಜ್ಞಾನ ವಿಷಯ ಶಿಕ್ಷಕರ ವೇದಿಕೆ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜವನ್ನು ಕಟ್ಟುವ ಜವಾಬ್ದಾರಿ ಸಮಾಜ ವಿಜ್ಞಾನ ಶಿಕ್ಷಕರ ಮೇಲೆ ಹೆಚ್ಚಿಗೆ ಇರುತ್ತದೆ. ಸಮಾಜದ ಒಳಿತಿಗಾಗಿಯೆ ಶಿಕ್ಷಕರ ಚಿಂತನೆ ಇರಬೇಕು ಎಂದರು.
ನಿವೃತ್ತ ಪ್ರೌಢ ಶಾಲಾ ಮುಖ್ಯಗುರು ಎಸ್.ಎಸ್.ಗೌಡರ್ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಆರ್.ಜಿ.ಗುಣಕಿ ಮಾದರಿ ಪಾಠ ನೀಡಿ, ನೀಲನಕ್ಷೆಯ ಪ್ರಶ್ನೋತ್ತರದ ಮೇಲೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಎಸ್.ಜಿ.ಗೌಡರ್ ಸೇರಿದಂತೆ ತಾಲೂಕಿನ ವಿವಿಧ ಪ್ರೌಢ ಶಾಲೆಗಳ ಸಮಾಜ ವಿಜ್ಞಾನ ವಿಷಯ ಬೋಧಕ ಶಿಕ್ಷಕರು ಹಾಜರಿದ್ದರು. ಜ್ಞಾನ ಭಾರತಿ ಪ್ರೌಢ ಶಾಲೆಯ ಮುಖ್ಯ ಗುರು ರಾಮಚಂದ್ರ ಹೆಗಡೆ ಸ್ವಾಗತಿಸಿದರು. ಶಿಕ್ಷಕರುಗಳಾದ ಜೆ.ಡಿ.ಮುಲ್ಲಾ ಪ್ರಾಸ್ತವಿಕ ಮಾತುಗಳನ್ನಾಡಿದರು. ರವಿ ಚವ್ಹಾಣ್ ನಿರೂಪಿಸಿದರು. ಬಿ.ಎಸ್.ಶಾಂತಪ್ಪನವರ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

