ವಿಜಯಪುರ: ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ ಕೊಡುವ ಪ್ರಸಕ್ತ ಸಾಲಿನ “ರಾಷ್ಟ್ರಮಟ್ಟದ ಶಿಕ್ಷಣ ರತ್ನ” ಪ್ರಶಸ್ತಿಯನ್ನು ವಿಜಯಪುರದ ಪ್ರೊ. ಸಿದ್ದು ಸಾವಳಸಂಗ ಉಪನ್ಯಾಸಕರಿಗೆ ರವಿವಾರ ಫೆಬ್ರುವರಿ 18 ರಂದು ರಾಯಚೂರಿನ ಪಂ. ಸಿದ್ದರಾಮ ಜಂಬಲದಿನ್ನಿ ರಂಗಮಂದಿರದ “ಅಂತರ್ ರಾಜ್ಯ ಸಮ್ಮೇಳನ” ದಲ್ಲಿ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡರ ಹಾಗೂ ಸಮ್ಮೇಳನದ ಅಧ್ಯಕ್ಷ ಡಾ. ದೇವೇಂದ್ರಮ್ಮ ಇವರು ಪ್ರದಾನ ಮಾಡಿದರು. ಬಾಲಿಕೆಯರ
ಸರಕಾರಿ ಪದವಿ ಪೂರ್ವ ಕಾಲೇಜು, ವಿಜಯಪುರದಲ್ಲಿ ಹಿರಿಯ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸದರಿಯವರು ಶಿಕ್ಷಣಕ್ಕಾಗಿ ಸಲ್ಲಿಸಿದ ಅಮೋಘ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

