ಛತ್ರಪತಿ ಶಿವಾಜಿ ಜಯಂತಿ ಆಚರಣೆ | ಅಪರ ಜಿಲ್ಲಾದಿಕಾರಿ ಮಹಾದೇವ ಮುರಗಿ ಅಭಿಮತ
ವಿಜಯಪುರ: ಛತ್ರಪತಿ ಶಿವಾಜಿಯ ಶೌರ್ಯ, ಸಾಹಸ, ರಾಷ್ಟçಭಕ್ತಿ ಹಾಗೂ ಅವರ ಆದರ್ಶ ಅರಿತುಕೊಳ್ಳುವುದರ ಜೊತೆಗೆ, ಅವರ ಜೀವನ ಮೌಲ್ಯಗಳು ಮುಂದಿನ ಜನಾಂಗಕ್ಕೆ ತಿಳಿಸಬೇಕು. ಅವರ ಜೀವನಾದರ್ಶ ಇಂದಿನ ಯುವಕರು ಮಾದರಿಯಾಗಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಛತ್ರಪತಿ ಶಿವಾಜಿಯ ದೈರ್ಯ, ಸಾಹಸದ ಚರಿತ್ರೆ, ಕತೆಗಳನ್ನು ಇಂದಿನ ಮಕ್ಕಳಿಗೆ ತಿಳಿಹೇಳಬೇಕು. ಈ ಮೂಲಕ ಮಕ್ಕಳಲ್ಲಿ ದೇಶಾಭಿಮಾನವನ್ನು ಬೆಳಸಬೇಕು. ಅವರ ಅಪಾರ ಸ್ವಾಭಿಮಾನ, ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡ ಶಿವಾಜಿಯವರ ಆದರ್ಶವನ್ನು ನಾವು ಯಾವತ್ತೂ ಪಾಲಿಸಬೇಕು. ವಿಜಯಪುರಕ್ಕೂ ಶಿವಾಜಿ ಅವರಿಗೂ ಅವಿನಾಭಾವ ಸಂಬಂಧ ಇದೆ ಎಂದು ಹೇಳಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ವಿಷ್ಣು ಶಿಂಧೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಹೊರ್ತಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಬಿ ಎಸ್ ಮೂಗನೂರಮಠ, ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ್ ಜಾಧವ, ವಿಜಯ ಚವ್ಹಾಣ, ಡಾ.ಸದಾಶಿವ ಪವಾರ ಮತ್ತಿತರರು ಉಪಸ್ಥಿತರಿದ್ದರು.

