Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ

ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ

ನ.೨೯ ರಂದು ಡಾ.ಅಂಬೇಡ್ಕರ್ ವಿಚಾರಗಳ ಅನಾವರಣ, ಹೊಸ ಬೆಳಕು ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾನ್ ವ್ಯಕ್ತಿಗಳನ್ನು ರಾಷ್ಟ್ರೀಯ ನಾಯಕರೆಂದು ಘೋಷಿಸಿ :ಉದಯ
(ರಾಜ್ಯ ) ಜಿಲ್ಲೆ

ಮಹಾನ್ ವ್ಯಕ್ತಿಗಳನ್ನು ರಾಷ್ಟ್ರೀಯ ನಾಯಕರೆಂದು ಘೋಷಿಸಿ :ಉದಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಸಧ್ಯದ ಪರಿಸ್ಥಿಯಲ್ಲಿ ಮಹಾನ್ ವ್ಯಕ್ತಿಗಳ ಜಯಂತಿಗಳು ಒಂದು ಸಮಾಜಕ್ಕೆಮಾತ್ರ ಸೀಮಿತವಾಗುತ್ತಿವೆ. ಸರ್ಕಾರ ಕೂಡಲೇ ಮಹಾನ್ ವ್ಯಕ್ತಿಗಳನ್ನು ರಾಷ್ಟ್ರೀಯ ನಾಯಕರು ಅಂತಾ ಘೋಷಿಸಬೇಕು ಎಂದು ಹಿಂದೂ ಪರ ಸಂಘಟನೆಗಳ ಮುಖಂಡ ಉದಯ ರಾಯಚೂರ ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.
ಜಯಂತ್ಯೋತ್ಸವಗಳು ನೆಪಮಾತ್ರಕ್ಕೆ ಒಂದು ದಿನದ ಸಂಭ್ರಮಕ್ಕೆ ಸೀಮಿತಗೊಳಿಸದೇ ರಾಷ್ಟ್ರೀಯ ಪರಿಕಲ್ಪನೆಯನ್ನು ಕೊಟ್ಟಲ್ಲಿ ಜಯಂತಿಗಳ ಆಚರಣೆಗಳಿಗೆ ನಿಜವಾದ ಮೌಲ್ಯ ಬರುತ್ತದೆ ಎಂದರು.
ಕ್ಷತ್ರೀಯ ಸಮಾಜದ ಮುಖಂಡ ನೇತಾಜಿ ನಲವಡೆ ಮಾತನಾಡಿ, ಕರ್ನಾಟಕದಲ್ಲಿ ನಮ್ಮ ಸಮಾಜದ ಒಳಪಂಗಡಗಳ ಬಾಂಧವರು ೬೦ ಲಕ್ಷದಷ್ಟು ಇದ್ದು, ಸರ್ಕಾರದ ಸೌಲಭ್ಯಗಳನ್ನು ಪಡೆಯುವಲ್ಲಿ ೧೩ನೇ ಸ್ಥಾನದಲ್ಲಿದೆ. ಇದಕ್ಕೆ ಕಾರಣ ಸಮಾಜದಲ್ಲಿರದ ಒಗ್ಗಟ್ಟು. ನಮ್ಮಲ್ಲಿಯ ಅಸಮಾಧನಗಳನ್ನು ಹೊರತರದೇ ಎಲ್ಲ ಬಾಂಧವರೂ ಒಂದಾಗಿ ಸಂಘಟನೆಯನ್ನು ಮುಂದುವರೆಸುವಂತಾಗಬೇಕು ಎಂದರು.
ಪ್ರೊ.ಪ್ರಕಾಶ ನರಗುಂದ ವಿಶೇಷ ಉಪನ್ಯಾಸ ನೀಡಿದರು.
ಸಮಾಜದ ಮುಖಂಡ ರಾಜೇಂದ್ರ ನಲವಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿರಸ್ತೇದಾರರಾದ ಎಂ.ಎ.ಬಾಗೇವಾಡಿ, ಎಸ್.ಎಂ.ಸಜ್ಜನ, ಭರತ ಭೋಸಲೆ, ನಿಂಗರಾಜ ಮಹೇಂದ್ರಕರ, ರವಿ ಭೋಸಲೆ, ಅಜಯ ಭೋಸಲೆ, ಮಾರುತಿ ನಲವಡೆ, ಗಜಾನನ ನಲವಡೆ, ಚಂದ್ರು ಕಲಾಲ, ಯಶವಂತ ಕಲಾಲ, ರಾಜ ನಾರಾಯಣ ನಲವಡೆ, ಸಂತೋಷ ಚೌವ್ಹಾಣ, ಕಿರಣ ದುದಾನೆ, ಹಣಮಂತ ನಾಲವಡೆ, ವಿಶ್ವನಾಥ ಸಿಂಧೆ, ರಾಜು ಜಾಧವ, ಹರೀಶ ಬೆವೂರ, ವಿಠ್ಠಲ ಜಾಧವ, ಅನಿಲ ಜಾಧವ, ಸಚೀನ ಸಾಳುಂಕೆ, ಶಂಕರ ಪವಾರ, ಬಸವರಾಜ ಸೂರ್ಯವಂಶಿ, ರಾಹುಲ ಕನಸೆ ಸೇರಿದಂತೆ ಮತ್ತೀತರರು ಇದ್ದರು.
ಕಾರ್ಯಕ್ರಮಕ್ಕೂ ಮೊದಲು ಶಿವಾಜಿ ಮಹಾರಾಜರ ಭಾವಚಿತ್ರವನ್ನು ಪಟ್ಟಣದ ಬಜಾರ ಹನುಮಾನ ದೇವಸ್ಥಾನದಿಂದ ಗ್ರಾಮದೇವತೆ ದೇವಸ್ಥಾನ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ತಹಶೀಲ್ದಾರ ಕಚೇರಿಯ ವರೆಗೆ ಡಿ.ಜೆ ಮೂಲಕ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಗೆ ಸಮಾಜ ಸೇವಕ ಮಲ್ಲಿಕಾರ್ಜುನ ಮದರಿ ಚಾಲನೆ ನೀಡಿದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಬಿ.ನಾವದಗಿ, ಎಂ.ಎಸ್.ನಾವದಗಿ ವಕೀಲರು, ಗಣ್ಯ ಉದ್ಯಮಿ ಸಂಗಣ್ಣ ಬಿರಾದಾರ (ಜಿಟಿಸಿ) ಸೇರಿದಂತೆ ಹಿಂದೂ ಪರ ಸಂಘಟನೆಗಳ ಮುಖಂಡರು ಭಾಗಿಯಾಗಿ ಮೆರಗು ಹೆಚ್ಚಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ

ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ

ನ.೨೯ ರಂದು ಡಾ.ಅಂಬೇಡ್ಕರ್ ವಿಚಾರಗಳ ಅನಾವರಣ, ಹೊಸ ಬೆಳಕು ಕಾರ್ಯಕ್ರಮ

ಮನಗೂಳಿ ಮನೆತನದಿಂದ ಶಿಕ್ಷಣ ಕ್ಷೇತ್ರಕ್ಕೆ ಅಗಾಧ ಕೊಡುಗೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
  • ನ.೨೯ ರಂದು ಡಾ.ಅಂಬೇಡ್ಕರ್ ವಿಚಾರಗಳ ಅನಾವರಣ, ಹೊಸ ಬೆಳಕು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮನಗೂಳಿ ಮನೆತನದಿಂದ ಶಿಕ್ಷಣ ಕ್ಷೇತ್ರಕ್ಕೆ ಅಗಾಧ ಕೊಡುಗೆ
    In (ರಾಜ್ಯ ) ಜಿಲ್ಲೆ
  • ದಿ:೨೯ ರಂದು ಕೋರವಾರೇಶನ ಕಾರ್ತಿಕೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ “ಸಂವಿಧಾನ ದಿವಸ್” ಆಚರಣೆ
    In (ರಾಜ್ಯ ) ಜಿಲ್ಲೆ
  • ಬೋಧನೆ ಜತೆಗೆ ಚಟುವಟಿಕೆ ಆಧಾರಿತ ಕಲಿಕೆ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಸಿದರೆ ನಿಮಗೇ ಅಪಾಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.