ವಿಜಯಪುರ: ಸರ್ವಜ್ಞ ಜನರ ಮಧ್ಯೆ ಬದುಕಿದ ಜನಸಾಮಾನ್ಯರ ಕವಿ. ಅವರು ತಮ್ಮ ತ್ರಿಪದಿಗಳ ಮೂಲಕ ಅತ್ಯಂತ ಸರಳವಾಗಿ ತತ್ವಾದರ್ಶಗಳನ್ನು ನೀಡಿದ್ದಾರೆ. ಅವರ ವಚನಗಳ ಸಾರವನ್ನು ಅರಿತುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಡುಮುಟ್ಟದ ಸೊಪ್ಪಿಲ್ಲ, ಸರ್ವಜ್ಞ ಹೇಳದ ವಿಷಯಗಳಿಲ್ಲ. ಕೃಷಿ, ಸಂಸಾರ, ಅನಿಷ್ಠ ಪದ್ಧತಿ, ಸಮಾಜದ ಪರಿಕಲ್ಪನೆ ಹೀಗೆ ಅನೇಕ ವಿಷಯಗಳ ಮೇಲೆ ತ್ರಿಪದಿಗಳನ್ನು ರಚಿಸಿದ್ದಾರೆ. ಮೂರೇ ಸಾಲಿನಲ್ಲಿ ಅಗಾಧವಾದ ಸಂದೇಶ ಕೊಡುವ ವಚನಗಳನ್ನು ರಚಿಸಿ ಈ ನಾಡಿಗೆ ಮಹತ್ವಪೂರ್ಣ ಕೊಡುಗೆ ನೀಡಿದ್ದಾರೆ.ತ್ರಿಪದಿಗಳು ತಮ್ಮ ಸರಳತೆ ಮತ್ತು ಪ್ರಾಸಬದ್ಧತೆಯಿಂದ ಜನಪ್ರಿಯವಾಗಿವೆ ಎಂದು ಹೇಳಿದರು.
ಹೊನ್ನುಟಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಬಸವರಾಜ ಕುಂಬಾರ ಅವರು ವಿಶೇಷ ಉಪನ್ಯಾಸ ನೀಡಿ, ಸರ್ವರೊಳಗೊಂದು ನುಡಿಯ ಕಲಿತು ವಿದ್ಯೆಯ ಪರ್ವತವೇ ಆದವರು ಸರ್ವಜ್ಞ. ಅವರು ಜನರ ಮಧ್ಯೆ ಬೆರೆತ ಕವಿ. ಇಂದಿಗೂ ಜನ ಸಾಮಾನ್ಯರ ನಾಲಿಗೆಯ ಮೇಲೆ ಅವರ ವಚನಗಳು ಜನಜನಿತವಾಗಿವೆ. ಅನೇಕ ವಿಷಯಗಳ ಮೇಲೆ ತ್ರಿಪದಿಗಳನ್ನು ರಚಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಎಸ್.ಎಸ್ ಕುಂಬಾರ ಉಪಸ್ಥಿತರಿದ್ದರು.
ಸಂಗೀತಾ ಮಠಪತಿ ಕಾರ್ಯಕ್ರಮ ನಿರ್ವಹಿಸಿದರು.
ಸಂತಕವಿ ಸರ್ವಜ್ಞ ಭಾವಚಿತ್ರ
Subscribe to Updates
Get the latest creative news from FooBar about art, design and business.
Related Posts
Add A Comment

