ವಿಜಯಪುರ: ನಗರದಲ್ಲಿರುವ ಐತಿಹಾಸಿಕ ಬಾವಿಯಾದ ತಾಜಬಾವಡಿ ಸ್ಮಾರಕವನ್ನು ಟಿ.ಭೂಬಾಲನ್ ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಮಂಗಳವಾರ ಸ್ಥಳ ಪರಿಶೀಲನೆ ಮಾಡಿದರು. ರಾಜ್ಯದ ಸ್ಮಾರಕ ಸಂರಕ್ಷಣೆ ಮತ್ತು ಮೂಲಭೂತ ಸೌಕರ್ಯಗಳ/ನ್ನು ಒದಗಿಸಿ ಸ್ಮಾರಕಗಳನ್ನು ಅಭಿವೃದ್ಧಿ ಪಡಿಸಿ ಕಾರ್ಫರೇಟ್ ಸಾಮಾಜಿಕ ಹೊಣೆಗಾರಿಕೆ (ಅSಖ) ಅಡಿಯಲ್ಲಿ ಸ್ಮಾರಕಗಳ ದತ್ತು ಪಡೆಯಲು ಅವಕಾಶವನ್ನು ಕಲ್ಪಿಸಿ ದತ್ತು ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ.
ಸದರಿ Adopt A monument ಯೋಜನೆಯಡಿ ತಾಜಬಾವಡಿ ಸ್ಮಾರಕವನ್ನು World Monument Fund India Associations Mumbai ಸಂಸ್ಥೆಯು ದತ್ತು ಪಡೆದಿದ್ದು, ಈ ಸ್ಮಾರಕದಲ್ಲಿ ಸಂರಕ್ಷಣೆ ಮತ್ತು ಪ್ರವಾಸಿ ಮೂಲಭೂತ ಸೌಕರ್ಯಗಳು, ಸೌಂದರೀಕರಣ, ಸುಧಾರಿತ ಪ್ರವಾಸಿ ಸೌಕರ್ಯಗಳನ್ನು ಒದಗಿಸಿ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸಿಲು ವಿವಿಧ ಯೋಜನೆ ಹಮ್ಮಿಕೊಂಡಿರುತ್ತಾರೆ. ಸದರಿ ವಿಷಯವಾಗಿ ಮಾನ್ಯ ಜಿಲ್ಲಾಧಿಕಾರಿಗಳು ತಾಜಬಾವಡಿ ಸ್ಮಾರಕದ ಸುತ್ತ-ಮುತ್ತಲಿರುವ ಪ್ರದೇಶಗಳಿಗೆ ಭೇಟಿ ನೀಡಿ ನಿವಾಸಿಗಳ ಜೊತೆ ಸಮಾಲೋಚನೆ ಮಾಡಿದರು ಹಾಗೂ ತಾಜಬಾವಡಿ ಸ್ಮಾರಕದ ಸುತ್ತಮುತ್ತಲಿರುವ ಶಿಥಿಲಾವಸ್ಥೆಯಲ್ಲಿರುವ ಗೋಡೆಗಳನ್ನು ಸಂರಕ್ಷಿಸಲು, ಸ್ಮಾರಕ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಜರುಗಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಶಾಲೂ, ಬದ್ರೋದೀನ ಸೌದಾಗರ, ಆಯುಕ್ತರು ಮಹಾನಗರಪಾಲಿಕೆ, ಮಲ್ಲಿಕಾರ್ಜುನ ಬಜಂತ್ರಿ ಉಪನಿರ್ದೇಶಕರು ಪ್ರವಾಸೋದ್ಯಮ ಇಲಾಖೆ, ತಬಸುಮ್.ಎಮ್ ಜಿಲ್ಲಾ ವಕ್ಪ ಅಧಿಕಾರಿ, +ಮೋಹಸಿನ ಜಮಖಂಡಿ ನೀರಿಕ್ಷಕರು, ವಕ್ಫ ಬೋರ್ಡ, ಶ್ರೀ ಹಿರೆಮಠ ಅಧೀಕ್ಷಕ ಅಭಿಯಂತರರು ಮಹಾನಗರ ಪಾಲಿಕೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮಹಾನಗರ ಪಾಲಿಕೆ, ಪ್ರಕಾಶ ಪಾಟೀಲ ಸಿಟಿ ಸರ್ವೆ ಇಲಾಖೆ, ಅನಿಲಕುಮಾರ ಬಣಜಿಗೇರ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರು ಹಾಗೂ, ವಲ್ಡ್ ಮೊನುಮೆಂಟ್ ಫಂಡ್ಸ್ ಇಂಡಿಯಾ ಅಶೋಷಿಯನ್ನ್ಸ ಮುಂಬೈ ಸಂಸ್ಥೆಯ (World Monument Funds India Associations, Mumbai) ಸಂಸ್ಥೆಯ ಅನಾಬೇಲ್ ಲೋಪೆಜ್ ಯೋಜನಾ ನಿರ್ದೇಶಕರು ಹಾಗೂ ಸಂಸ್ಥೆಯ ಪಧಾದಿಕಾರಿಗಳಾದ ಶ್ರೀ ಬಿ.ಶರತಚಂದ್ರ ಆರ್ಕಿಟೆಕ್ಟ, ಅಖಿಲಾ ಉದಯಶಂಕರ ಆರ್ಕಿಟೆಕ್ಟ, ಸಿಂದುಜಾ, ದೇವಿ ಕಲ್ಯಾಣಿ, ಪೀಟರ್ ಅಲೆಕ್ಸಾಂಡರ್, ೨೭ನೇ ವಾರ್ಡನ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

