ಸಿಂದಗಿ: ಕವಿ ಸರ್ವಜ್ಞ ತ್ರಿಪದಿಗಳ ಮೂಲಕ ಪದ್ಯವನ್ನು ರಚನೆ ಮಾಡುವುದರ ಮುಖಾಂತರ ತ್ರಪದಿ ಕವಿ ಎಂದು ಕರೆಯಲ್ಪಡುತ್ತಾರೆ ಎಂದು ಗ್ರೇಡ್ ೨ ತಹಶೀಲ್ದಾರ್ ಇಂದ್ರಾಬಾಯಿ ಬಳಗಾನೂರ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡ ತ್ರಿಪದಿ ಕವಿ ಸರ್ವಜ್ಞರ ಜಯಂತಿಯಲ್ಲಿ ಗ್ರೇಡ್೨ ತಹಶೀಲ್ದಾರ್ ಇಂದ್ರಾಬಾಯಿ ಬಳಗಾನೂರ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಸರ್ವಜ್ಞನವರು ಹಲವಾರು ಅಂಶಗಳ ಕುರಿತು ವಚನಗಳನ್ನು ರಚಿಸಿ ಒಬ್ಬ ಮೇಧಾವಿ ವಚನಕಾರರಾಗಿದ್ದಾರೆ. ಸಮಾಜದಲ್ಲಿರುವ ಅಂಕು, ಡೊಂಕು ಮೂಡನಂಬಿಕೆಗಳನ್ನು ತಮ್ಮ ವಚನಗಳಲ್ಲಿ ಪ್ರಸ್ತುತಪಡಿಸಿದ್ದಾರೆ ಎಂದರು.
ಈ ವೇಳೆ ಸಿ.ಎಂ.ಮನಗೂಳಿ ಕಾಲೇಜಿನ ನಿವೃತ್ತ ಗ್ರಂಥಪಾಲಕ ಸಿದ್ದಬಸವ ಕುಂಬಾರ ಮಾತನಾಡಿ, ಸರ್ವಜ್ಞ ಎಂದರೆ ಎಲ್ಲವನು ತಿಳಿದವರು. ಸಮಾಜದ ಜ್ಞಾನವನ್ನು ಅರಿತವರು. ಅವರ ತ್ರಿಪದಿಗಳಲ್ಲಿ ಒಳ ಅರಿವು ಹೆಚ್ಚಾಗಿದ್ದು, ಜನಸಾಮಾನ್ಯರಿಗೆ ಅರ್ಥವಾಗುವಂತೆ ಇರುತ್ತವೆ. ಸರ್ವಜ್ಞರ ತತ್ವಾದರ್ಶಗಳನ್ನು ಎಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಮಾಜಿ ಕಸಾಪ ತಾಲೂಕಾಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ಕಂದಾಯ ನಿರೀಕ್ಷಕ ಐ.ಎ.ಮಕಾಂದಾರ, ಶೀರಸ್ತೇದಾರ ಜಿ.ಎಸ್.ರೋಡಗಿ, ಚೇತನ ಭಾಸಗಿ, ಕುಂಬಾರ ಸಮಾಜದ ತಾಲೂಕು ಗೌರವಾಧ್ಯಕ್ಷ ಸಿದ್ದಪ್ಪ ಕುಂಬಾರ, ನಿಖಿಲ ಖಾನಾಪೂರ ಸೇರಿದಂತೆ ಇತರೆ ಅಧಿಕಾರಿಗಳು, ಸಮಾಜದ ಮುಖಂಡರು ಇದ್ದರು.
ತಾಲೂಕು ಸಾರ್ವಜನಿಕ ಆಸ್ಪತ್ರೆ: ತಾಲೂಕ ಸಾರ್ವಜನಿಕ ಆಸ್ಪತ್ರೆ ಸಿಂದಗಿಯಲ್ಲಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಈ ವೇಳೆ ಡಾ.ರಮೇಶ್ ರಾಠೋಡ, ಡಾ.ಮಹಾಂತೇಶ ಹಿರೇಮಠ, ಡಾ.ಮೌನೇಶ ಬಡಿಗೇರ, ಆಪ್ತಸಮಾಲೋಚಕ ಎಂ.ಪಿ.ಸಾಗರ್, ರಾಜಶೇಖರ್ ನರಗೋದಿ, ವಿದ್ಯಾ ಹಿರೇಪಟ್, ದೇವಮ್ಮ ಕೊಣ್ಣೂರ್, ಭೀಮಾಶಂಕರ, ರಾಯಣ್ಣ ಸೊನ್ನಳ್ಳಿ, ಡಿ.ಡಿ ಮಾಳಸಿದ್ದ, ಸುರೇಶ್ ಪಾಟೀಲ್, ಸಾಯಬಣ್ಣ ಗಣಜಲಿ, ಕ್ಷಯ ರೋಗ ವಿಭಾಗದ ಶಶಿದರ ಕೊಡತ್ತಗಿರಿ, ಅಶೋಕ್ ಕಡಲಗೊಂಡ್, ದುಂಡಪ್ಪ ಕುಂಬಾರ, ಶಂಕರಲಿಂಗ ಮಾನೇಗರ, ಸುನೀಲ ನೇಮಶೆಟ್ಟಿ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ಪಟ್ಟಣದ ಎಪಿಎಂಸಿ ಯಾರ್ಡ್ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಈ ವೇಳೆ ಸಿಡಿಪಿಓ ಶಂಭುಲಿಗ ಹಿರೇಮಠ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಯಂತಿಯಲ್ಲಿ ಎಸಿಡಿಪಿಒ ಎಸ್.ಎನ್.ಕೋರವಾರ, ವಿಜಯಕುಮಾರ, ಸುನಿತಾ ಕಪ್ಪೆಣ್ಣನವರ ಸೇರಿದಂತೆ ಮೇಲ್ವೀಚಾರಕಿಯರು ಇದ್ದರು.
ತಾಪಂ ಕಾರ್ಯಾಲಯ: ಪಟ್ಟಣದ ತಾಲೂಕು ಪಂಚಾಯತ್ ಕಛೇರಿಯಲ್ಲಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಈ ವೇಳೆ ತಾಪಂ ಕಾರ್ಯನಿರ್ವಾಹಕ ರಾಮು ಅಗ್ನಿ ಅವರು ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಎ.ಎಚ್.ಯಾಳಗಿ, ಮಲ್ಲು ಗಿಜಾ, ಶಿವು ಕಡಿಮನಿ, ಉಸ್ಮಾನ್ ಸಿಂದಗಿಕರ್, ಶಿವಶರಣ ವಂದಗನೂರ್, ಜಗು ವಡಗೇರಿ, ಭೀಮರಾಯ ಚೌಧರಿ, ಸಾಗರ್ ಶೆಟ್ಟಿ, ಆನಂದ ವಾಲಿಕಾರ, ಆರಿಫ್ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

