ಬಸವನಬಾಗೇವಾಡಿ: ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಜೊತೆಗೆ ಉತ್ತಮ ಸಂಸ್ಕಾರ ಕೊಡುವ ಜೊತೆಗೆ ನಮ್ಮ ಮಾತೃಭಾಷೆಯನ್ನು ಇಂದಿನ ಕಾಲಘಟ್ಟದಲ್ಲಿ ಅಗತ್ಯವಾಗಿ ಕಲಿಸಿಕೊಡಬೇಕಿದೆ. ಈ ನಿಟ್ಟಿನಲ್ಲಿ ಹಿರಿಯರು ತಮ್ಮ ಮನೆಗಳಲ್ಲಿರುವ ಮಕ್ಕಳಿಗೆ ದೇಶೀಯ ಭಾಷೆಯನ್ನು ಹೇಳಿಕೊಡಬೇಕೆಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಗೌರಿ-ಶಂಕರ ದೇವಸ್ಥಾನದ ಆವರಣದಲ್ಲಿ ಸೋಮವಾರ ಸಂಜೆ ನೂತನ ದೇವರ ಮೂರ್ತಿಗಳ ಪ್ರತಿಷ್ಠಾಪನೆಯಂಗವಾಗಿ ಐದು ದಿನಗಳ ಕಾಲ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಆಧ್ಯಾತ್ಮಿಕ ಕಾರ್ಯಕ್ರಮಗಳಿಂದ ನೆಮ್ಮದಿ ದೊರೆಯುತ್ತದೆ. ಇಂತಹ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಭಾಗವಹಿಸುವಂತೆ ಹಿರಿಯರು, ಪಾಲಕರು ನೋಡಿಕೊಳ್ಳಬೇಕು. ಇಂದಿನ ಮಕ್ಕಳು ಸಂಪ್ರದಾಯ, ಸಂಸ್ಕಾರ, ಸಂಸ್ಕ್ರತಿಗೆ ಸಂಬಂಧಿಸಿದ ವಿಷಯಗಳನ್ನು ಅರಿತುಕೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ತಾಯಂದಿರು ತಮ್ಮ ಮಕ್ಕಳನ್ನು ಬುದ್ದಿವಂತರನ್ನಾಗಿ ಮಾಡುವ ಪ್ರತಿಜ್ಞೆ ಮಾಡಬೇಕೆಂದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಉಪನ್ಯಾಸಕ ಪ್ರಕಾಶ ಮಸಬಿನಾಳ ಮಾತನಾಡಿದರು.
ವ್ಹಿಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಉಪನ್ಯಾಸ ನೀಡಿದರು.
ಸಾನಿಧ್ಯ ವಹಿಸಿದ್ದ ಮಸಬಿನಾಳದ ಸಿದ್ದರಾಮ ಸ್ವಾಮೀಜಿ, ಅಧ್ಯಕ್ಷತೆ ವಹಿಸಿದ್ದ ಶ್ರೀಕಾಂತ ಬಸವರಾಜ ಪಟ್ಟಣಶೆಟ್ಟಿ, ಹಿರಿಯರಾದ ಬಸವರಾಜ ಹಾರಿವಾಳ ಮಾತನಾಡಿದರು.
ವೇದಿಕೆಯಲ್ಲಿ ಮುದಕಣ್ಣ ಕುಳಗೇರಿ, ಮಹಾದೇವ ಅಗಸರ, ಬಸವರಾಜ ನಂದಿಹಾಳ ಇದ್ದರು.
ಶ್ರೀಕಾಂತ ಯಲ್ಲಪ್ಪ ಪಟ್ಟಣಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಕೊಟ್ರೇಶಿ ಹೆಗಡ್ಯಾಳ ಸ್ವಾಗತಿಸಿದರು. ಪಿ.ಎಸ್.ಬಾಗೇವಾಡಿ ನಿರೂಪಿಸಿದರು. ಚಂದ್ರಶೇಖರ ಹದಿಮೂರ ವಂದಿಸಿದರು.
ಇದೇ ಸಂದರ್ಭದಲ್ಲಿ ನೂತನ ಮೂರ್ತಿಗಳ ಪ್ರತಿಷ್ಠಾಪನೆಗೆ ಶ್ರಮಿಸಿದ ಪಟ್ಟಣಶೆಟ್ಟಿ ಪರಿವಾರದವರನ್ನು, ಸಂಗೀತ ಸೇವೆ ಸಲ್ಲಿಸಿದ ಕಲಾವಿರರನ್ನು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದವರನ್ನು ಸನ್ಮಾನಿಸಲಾಯಿತು. ನಂತರ ರಸಮಂಜರಿ ಕಾರ್ಯಕ್ರಮ ಜರುಗಿತು.
Subscribe to Updates
Get the latest creative news from FooBar about art, design and business.
ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಅಗತ್ಯ :ಶಿವಪ್ರಕಾಶ ಶ್ರೀ
Related Posts
Add A Comment

