ಯಡ್ರಾಮಿ: ಪಟ್ಟಣಕ್ಕೆ ಸಂವಿಧಾನ ರಥ ಯಾತ್ರೆ ಫೆ.22 ರಂದು ಆಗಮಿಸುತ್ತಿದ್ದು ತಾಲೂಕಾಡಳಿತವು ಸರ್ವ ಸಿದ್ಧತೆಯಿಂದ ಭವ್ಯ ಸ್ವಾಗತ ಮಾಡುವುದರ ಮೂಲಕ ಈ ಜನ ಜಾಗೃತಿ ಕಾರ್ಯಕ್ರಮಕ್ಕೆ ಸರ್ವರೂ ಕೈಜೋಡಿಸಬೇಕೆಂದು ದಲಿತ ಸೇನೆ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಸಂಗಮೇಶ ಗಂಗಾಕರ್ ಹಾಗೂ ಕಾರ್ಯದರ್ಶಿ ರಾಜು ಎಸ್.ಗೆಜ್ಜಿ ಮನವಿ ಮಾಡಿದ್ದಾರೆ.
ಸಂವಿಧಾನದ ಪೀಠಿಕೆ ಹಾಗೂ ಸಂವಿಧಾನ ಕುರಿತು ಜನಜಾಗೃತಿ ಮೂಡಿಸುವ ಸದುದ್ದೇಶದಿಂದ ಈ ರಥ ಯಾತ್ರೆ ಕಾರ್ಯಕ್ರಮ ಸರ್ಕಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಯಡ್ರಾಮಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿಯೂ ರಥ ಯಾತ್ರೆ ಕಾರ್ಯಕ್ರಮ ನಡೆಯಲಿದ್ದು ಎಲ್ಲರೂ ಸೇರಿ ಸಂವಿಧಾನಕ್ಕೆ ಗೌರವ ನೀಡುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
