Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್‌ ಶಾಸಕರಿಗೆ ಎಚ್‌ಡಿಕೆ ಆಫರ್ :ಡಿಕೆಶಿ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್‌ ಶಾಸಕರಿಗೆ ಎಚ್‌ಡಿಕೆ ಆಫರ್ :ಡಿಕೆಶಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರಿಗೆ ತಮ್ಮ ಮತಗಳನ್ನು ಖರೀದಿಸಲು ಆಫರ್ ನೀಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಚುನಾವಣೆಗೆ ಹೋಗಲಿರುವ ನಾಲ್ಕು ಸ್ಥಾನಗಳಲ್ಲಿ ಒಂದನ್ನು ಮಾತ್ರ ಗೆಲ್ಲುವ ಶಕ್ತಿ ಮೈತ್ರಿಕೂಟಕ್ಕಿದೆಯಾದರೂ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ತನ್ನ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರಿಂಗ ರಾಜ್ಯದಲ್ಲಿ ರಾಜ್ಯಸಭಾ ಚುನಾವಣಾ ಕಣ ಬಿಸಿಯಾಗಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥ ಶಿವಕುಮಾರ್, “ಎಚ್‌ಡಿ ಕುಮಾರಸ್ವಾಮಿ ಯಾರಿಗೆ ಫೋನ್ ಮಾಡುತ್ತಿದ್ದಾರೆ. ಏನು ಮಾತನಾಡುತ್ತಿದ್ದಾರೆ ಮತ್ತು ಏನು ಆಫರ್ ನೀಡುತ್ತಿದ್ದಾರೆ ಎಂಬುದು ನಮಗೆ ತಿಳಿದಿದೆ. ನಮ್ಮ ಶಾಸಕರು ನಮಗೆ ಎಲ್ಲ ಮಾಹಿತಿ ನೀಡಿದ್ದಾರೆ. ಬಿಜೆಪಿಯ ತಂತ್ರಗಾರಿಕೆ ನಮಗೆ ತಿಳಿದಿದೆ” ಎಂದು ಹೇಳಿದ್ದಾರೆ.
ವಿರೋಧ ಪಕ್ಷಗಳು ಅಡ್ಡ ಮತದಾನಕ್ಕೆ ಯತ್ನಿಸುತ್ತಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, “ಯಾವುದೇ ಕಾರಣವಿಲ್ಲದೆ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರಾ..? ತಮ್ಮ ಪ್ರಯತ್ನ ಮಾಡಲು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ಫೆಬ್ರವರಿ 27 ರಂದು (ಮತದಾನದ ದಿನ) ಯಾರು ಯಾರಿಗೆ ಮತ ಹಾಕುತ್ತಾರೆ ಎಂದು ನೋಡೋಣ” ಎಂದಿದ್ದಾರೆ.
“ಕುಮಾರಸ್ವಾಮಿ ಯಾರೊಂದಿಗೆ ಮಾತನಾಡಿದ್ದಾರೆ. ಯಾರಿಗೆ ಎಷ್ಟು ಆಫರ್ ನೀಡಿದ್ದಾರೆ ಎಂಬುದನ್ನು ಶಾಸಕರು ಬಂದು ನನಗೆ ಹೇಳಿದ್ದಾರೆ. ಶಾಸಕರಿಗೆ ಬೆದರಿಕೆ ಹಾಕಿದ್ದಾರೆ. ಅದು ನನಗೆ ತಿಳಿದಿದೆ. ನಾನು ಈಗ ಅದರ ಬಗ್ಗೆ ಮಾತನಾಡುವುದಿಲ್ಲ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಕಳೆದ ವರ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಿದೆ.
224 ಸದಸ್ಯರ ವಿಧಾನಸಭೆಯಲ್ಲಿ 135 ಶಾಸಕರನ್ನು ಹೊಂದಿರುವ ಆಡಳಿತಾರೂಢ ಕಾಂಗ್ರೆಸ್, ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಪುಟ್ಟಣ್ಣಯ್ಯ ಮತ್ತು ಇಬ್ಬರು ಪಕ್ಷೇತರರ ಬೆಂಬಲದೊಂದಿಗೆ ರಾಜ್ಯ ಸಭಾ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದೆ.
ಬಿಜೆಪಿ ಮತ್ತು ಜೆಡಿಎಸ್ ಅನುಕ್ರಮವಾಗಿ 66 ಮತ್ತು 19 ಸದಸ್ಯರನ್ನು ಹೊಂದಿದ್ದು, ಚುನಾವಣೆಯಲ್ಲಿ ಒಂದು ಸ್ಥಾನವನ್ನು ಜಂಟಿಯಾಗಿ ಗೆಲ್ಲುವ ಸ್ಥಿತಿಯಲ್ಲಿದೆ. ಈ ಚುನಾವಣೆಯಲ್ಲಿ ಶಾಸಕರು ಮತ ಚಲಾಯಿಸುತ್ತಾರೆ. ಕಾಂಗ್ರೆಸ್ ಅಜಯ್ ಮಾಕನ್, ಸೈಯದ್ ನಾಸೀರ್ ಹುಸೇನ್ ಮತ್ತು ಜಿ ಸಿ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಿದೆ.
ಮಾಜಿ ಎಂಎಲ್‌ಸಿ ನಾರಾಯಣಸಾ ಬಾಂಡಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅಚ್ಚರಿಯ ನಡೆಯಲ್ಲಿ, ಜೆಡಿಎಸ್ ನಾಯಕ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಡಿ ಕುಪೇಂದ್ರ ರೆಡ್ಡಿ ಕೂಡ ಕಳೆದ ವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ, ಕೇವಲ ನಾಲ್ವರು ಅಭ್ಯರ್ಥಿಗಳು ಕಣದಲ್ಲಿದ್ದರೆ ಪ್ರತಿ ಅಭ್ಯರ್ಥಿ ಗೆಲ್ಲಲು 45 ಮತಗಳನ್ನು ಪಡೆಯಬೇಕು.
ಚುನಾವಣೆಗೆ ಪ್ರತಿಪಕ್ಷಗಳ ಮತಗಳನ್ನು ಪಡೆಯಲು ಕಾಂಗ್ರೆಸ್ ಪ್ರತಿತಂತ್ರವನ್ನು ರೂಪಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಡಿಕೆ ಶಿವಕುಮಾರ್, “ನಮಗೆ ಅದು ಅಗತ್ಯವಿಲ್ಲ. ನಾವು 136 ಸ್ಥಾನಗಳನ್ನು ಗೆದ್ದಿದ್ದೇವೆ ಮತ್ತು ಇಬ್ಬರು ಸ್ವತಂತ್ರ ಶಾಸಕರು ನಮ್ಮೊಂದಿಗೆ ಗುರುತಿಸಿಕೊಂಡಿದ್ದಾರೆ. ನಮ್ಮೊಂದಿಗೆ ಇರುವ ಇತರರ ಬಗ್ಗೆ ನಾನು ಮಾತನಾಡುವುದಿಲ್ಲ. ನಾವು ಅದನ್ನು ತೋರಿಸುತ್ತೇವೆ” ಎಂದು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.