Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಬದುಕು ಮತ್ತು ಹಸಿವು ಏನೆಲ್ಲ ಕಲಿಸಿ ಸಾಧಿಸಿಕೊಳ್ಳುತ್ತದಲ್ವಾ?
ವಿಶೇಷ ಲೇಖನ

ಬದುಕು ಮತ್ತು ಹಸಿವು ಏನೆಲ್ಲ ಕಲಿಸಿ ಸಾಧಿಸಿಕೊಳ್ಳುತ್ತದಲ್ವಾ?

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp
  • ಸಿದ್ಧಾಪುರ ಶಿವಕುಮಾರ್

ಈ ಪೋಟೋದ ಮಧ್ಯದಲ್ಲಿ ಇರುವುದು ನಾನೇ.‌
ಆಸರೆಯಾಗಿದ್ದ ಅಪ್ಪ ತೀರಿ ಹೋಗಿದ್ದ ಕಾರಣ ಕೇಶಮಂಡನ ಮಾಡಿಸಿಕೊಂಡ ಸಮಯವದು. ದಿಢೀರನೆ ನಾನು ದಿಕ್ಕು ತಿಳಿಯದೆ ಕಂಗಾಲಾಗಿದ್ದೆ. ಅನಿವಾರ್ಯವಾಗಿ ಬದುಕಿನ ಭಾರ ನನ್ನ ಎಳೆ ಹೆಗಲೇರಿತ್ತು. ಹೀಗಾಗಿ ಬೇರೆ ದಾರಿ ಕಾಣದೆ ವಿದ್ಯಾಭ್ಯಾಸ ಮೊಟುಕುಗೊಳಿಸಿ ಬೋರ್ಡ್ ಬರೆಯುವುದನ್ನು ಕಲಿಯಲು ಮುಂದಾಗಿದ್ದೆ. ಚಿತ್ರಕಲೆ ನನಗೆ ಅತೀವ ಆಸಕ್ತಿ ಮೂಡಿಸಿತ್ತು. ಕಲಿಕೆ ಆದ್ದರಿಂದ ಹಣ ಹೆಚ್ಚಾಗಿ ಸಿಗುತ್ತಿರಲಿಲ್ಲ. ಅದೆಷ್ಟೋ ಹಸಿದ ಹೊಟ್ಟೆ ಭಾದಿಸಿದ ಸಂದರ್ಭಗಳುಂಟು. ಒಟ್ಟಾರೆ ಸ್ವಾಭಿಮಾನದ ಸ್ವಭಾವದವನಾಗಿ ಇಂತಹ ಸಂಕಷ್ಟಗಳಿಂದ ಹೊರಬೇಕಿತ್ತು. ಹೀಗಾಗಿ ಬೋರ್ಡ್ ಒರೆಸುವುದು, ಉಜ್ಜುವುದು, ತೊಳೆಯುವುದು, ಬಣ್ಣ ಬಳಿಯುವುದು. ಬರೆದಿಟ್ಟ ಬ್ರಷ್ ಗಳನ್ನು ಸ್ವಚ್ಚಗೊಳಿಸುವುದು. ಎತ್ತರ ಗೋಡೆಗಳ ಮೇಲೆ ಬೋರ್ಡ್ ಬರೆಯಲು ತೂಕದ ಸರ್ವೆ ಪೋಲ್ಸ್ ಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೆಗಲ ಮೇಲೆ ಹೊತೈದು ಬೋರ್ಡ್ ಬರೆಯಲು ಅನುಕೂಲವಾಗುವಂತೆ ಕಟ್ಟಿಕೊಂಡು ಬಣ್ಣ ಬಳಿಯಬೇಕಾಗಿತ್ತು. ಅನೇಕ ಸಂದರ್ಭಗಳಲ್ಲಿ ಉರಿ ಉರಿ ಬಿಸಿಲಿನಲ್ಲಿ ಈ ಕೆಲಸ ಮಾಡಬೇಕಾಗಿತ್ತು. ದೈಹಿಕ ಶ್ರಮ ಹೆಚ್ಚಾದರೂ ಬೋರ್ಡ್ ಬರೆಯುದನ್ನು ಕಲಿಯಲೇ ಬೇಕೆಂಬ ಹಟದ ಹೆಬ್ಬಯಕೆಯಿಂದ ‌ಜೀವನೋಪಾಯಕ್ಕಾಗಿ ಉತ್ಸಾಹದಿಂದಲೇ ಬೇಗನೇ ಸ್ವತಂತ್ರವಾಗಿ ಬೋರ್ಡ್ ಬರೆಯುವ ಮಟ್ಟದಲ್ಲಿ ಕಲಿತಿದ್ದೇ. ಮುಂದುವರಿದು ಸಾವಿರಾರು ಬೋರ್ಡ್ ಬ್ಯಾನರ್ ಬರೆದೆ. ಸಿನಿಮಾ ಪ್ರಚಾರಕ್ಕಾಗಿ ಚಿತ್ರದುರ್ಗ, ದಾವಣಗೆರೆ, ಹರಿಹರ, ಬಳ್ಳಾರಿ, ಹೊಸಪೇಟೆ ಮೈಸೂರು, ಬೆಂಗಳೂರು, ನಗರದಾದ್ಯಂತ ಗೋಡೆಗಳ ಮೇಲೆ ಜಾಹಿರಾತು ಬೋರ್ಡ್ ಬರೆಯುವ ಕಾಂಟ್ರಾಕ್ಟ್ ಮಾಡಿದೆ.‌ ಈ ನಡುವೆ ನಿಷ್ಠೆ ಶ್ರಮ ಪ್ರಾಮಾಣಿಕತೆಗೆ ತಕ್ಕಂತೆ ಹಣ ಕೊಡದೆ ಸತಾಯಿಸುವವರು ನಯವಾಗಿ ವಂಚಿಸುವರು ಬಂದು ಪಾಠ ಕಲಿಸಿ ಹೋದರು! ಇದರೊಂದಿಗೆ ಆರೋಗ್ಯ ಇಲಾಖೆಯ ಜನ ಜಾಗೃತಿಯ ಬೋರ್ಡ್ ಬರೆಯುವ ಕಾಂಟ್ರಾಕ್ಟ್ ಮಾಡಿಕೊಂಡು ತಂಡದೊಂದಿಗೆ ಹಳ್ಳಿ ಹಳ್ಳಿಗೂ ಹೋಗಿ ಬರೆದೆ. ಹಾಗೆ ಶಿಕ್ಷಣ ಇಲಾಖೆಯ ಬಿಸಿಯೂಟ ಯೋಜನೆಯ ಬೋರ್ಡ್ ಗಳನ್ನು ಬರೆಯುವ ಕಾಂಟ್ರಾಕ್ಟ್ ಯಿಂದಾಗಿ ಜಿಲ್ಲೆಯಾದ್ಯಂತ ಕೆಲಸ ಮಾಡಿದೆ. ಅನೇಕ ಸ್ಥಳಿಯ ತಾಲ್ಲೂಕಿನ ಶಾಲೆಯ ಜೊತೆಗೆ ದಾವಣಗೆರೆ, ಬೆಂಗಳೂರು, ಬೇಲೂರು,ಸಾಗರ, ಭದ್ರಾವತಿ ಶಾಲೆಗಳಲ್ಲಿ ಬೋರ್ಡ್ ಮತ್ತು ಚಿತ್ರಕಲೆ ಕೆಲಸ ಮಾಡಿದೆ. ನಾನು ವಿದ್ಯ ಕಲಿತ ನನ್ನೂರಿನ ಶಾಲೆಗಾಗಿ 45 ದಿನಗಳ ಕಾಲದಲ್ಲಿ ಶ್ರಮಿಸಿ ಅನೇಕ ರಾಷ್ಟ ನಾಯಕರ ಭಾವ ಚಿತ್ರ, ನೂರಾರು ನುಡಿ ಮುತ್ತುಗಳನ್ನು ಬರೆಯಲಾಗಿತ್ತು.‌ ಇದರಿಂದಾಗಿ ಇಡೀ ಶಾಲೆ ಆಕರ್ಷಕವಾಗಿ ಜನರ ಮೆಚ್ಚುಗೆ ಪಡಿದಿದ್ದಲ್ಲದೆ “ತಾಲ್ಲೂಕು ಮಟ್ಟದ ಉತ್ತಮ ಶಾಲೆ” ಎಂಬ ಪ್ರಶಸ್ತಿಗೂ ಪಾತ್ರವಾಯಿತು. ಇದರಿಂದಾಗಿ ಖುಷಿಗೊಂಡ ಶಾಲಾ ಸಿಬ್ಬಂದಿ ಮತ್ತು ಆಗಿನ‌ ಎಸ್.ಡಿ.ಎಂ.ಸಿ.ಯ ಅಧ್ಯಕ್ಷರಾಗಿದ್ದ ಎಸ್.ಟಿ.ಪಾತಲಿಂಗಪ್ಪ ಮತ್ತು ಸದಸ್ಯರು ಹಾಗು ತಾ.ಪ. ಅಧ್ಯಕ್ಷರಾಗಿದ್ದ ಗದ್ಧಿಗೆ ತಿಪ್ಪೇಸ್ವಾಮಿ ಕಾರ್ಯಕ್ರಮ ಏರ್ಪಡಿಸಿದ್ದರು. ಕಾರ್ಯಕ್ರಮದಲ್ಲಿ ನನ್ನನ್ನು ಸನ್ಮಾನಿಸಿ ಖುಷಿಗೊಂಡು ಖುಷಿ ಪಡಿಸಿದ್ದರು. ಇಷ್ಟೆಲ್ಲ ಬರೆದು ಹೇಳಿದ್ದು ಬದುಕು ತನಗೆ ತಾನೇ ಹೇಗೆಲ್ಲ ಅನುಭವಗಳನ್ನು ಧಾರೆಯರೆಯ ಬಲ್ಲದು ಎಂದೇ ವಿನಃ ಮತ್ಯಾವ ಬೀಗುವ ಭ್ರಮೆಗಳಿಲ್ಲ.
ಬದುಕೊಂದು ಅನುಭವಗಳ ಗಣಿ.
ಅದಕ್ಕೆಂದೂ‌ ನಾನು ಋಣಿ.

  • – ಸಿದ್ಧಾಪುರ ಶಿವಕುಮಾರ್
BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.