ಚಿಮ್ಮಡ: ಗ್ರಾಮದ ದೇವಾಂಗ ಸಮಾಜದ ಆರಾದ್ಯ ದೇವತೆ ಶ್ರೀ ಬನಶಂಕರಿದೇವಿ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮ ಶನಿವಾರದಂದು ವಿಜ್ರಂಭಣೆಯಿಂದ ಜರುಗಲಿದೆ.
ಬೆಳಿಗ್ಗೆ ೬ ಘಂಟೆಗೆ ನಡೆಯುವ ಅಭಿಷೇಕ, ವಿಶೇಷ ಪೂಜೆಯೊಂದಿಗೆ ಪ್ರಾರಂಭಗೊಳ್ಳಲಿರುವ ಜಾತ್ರಾ ಮಹೋತ್ಸವದಲ್ಲಿ ಮದ್ಯಾಹ್ನ ಶ್ರೀ ದೇವಿಯ ಉಡಿತುಂಬುವ ಕಾರ್ಯಕ್ರಮದೊಂದಿಗೆ ಮಹಾಪ್ರಸಾದ ವಿನಿಯೋಗ ನಡೆಯಲಿದ್ದು ಮಹಾಪ್ರಸಾದದಲ್ಲಿ ಮುಂಬೈ ಮಾದೇಲಿ ಹಾಗೂ ಚಿಮ್ಮಡದ ವಿಶೇಷ ಕಿಚಡಿ ಪ್ರಸಾದ ಇರಲಿದೆ, ಸಂಜೆ ೫ ಘಂಟೆಗೆ ಜರುಗಲಿರುವ ರಥೋತ್ಸವ ಕಾರ್ಯಕ್ರಮದಲ್ಲಿ ಈ ಭಾಗದ ಜನಪದ ವಾದ್ಯವೃಂದಗಳಾದ ಕರಡಿ ಮಜಲು, ಡೊಳ್ಳು ಕುಣಿತ, ಬಾಜಾ ಬಜಂತ್ರಿ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ.
ಜನಪದೋತ್ಸವ ಕಾರ್ಯಕ್ರಮ; ರಾತ್ರಿ ೧೦ ಗಂಟೆಗೆ ಶ್ರೀ ಬನಶಂಕರಿದೇವಿ ಸಾಂಸ್ಕೃತಿಕ ವೇದಿಕೆ ಹಾಗೂ ಶ್ರೀ ಬನಶಂಕರಿದೇವಿ ದೇವಸ್ಥಾನ ಸಮೀತಿ ಚಿಮ್ಮಡ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಖ್ಯಾತ ಜನಪದ ಗಾಯಕ ವೀರಣ್ಣ ಅಂಗಡಿ ಹಾಗೂ ಶ್ರೀ ಸಿದ್ದಲಿಂಗೇಶ್ವರ ಹಾಸ್ಯ ಮತ್ತು ಜನಪದ ಕಲಾಸಂಘ ಅಡವಿಸೋಮಾಪೂರ ಇವರ ಜಂಟಿ ನೇತ್ರತ್ವದಲ್ಲಿ “ಜನಪದೋತ್ಸವ” ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದ ಸಾನಿಧ್ಯವನ್ನು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು, ಶ್ರೀ ಜನಾರ್ಧನ ಮಹಾರಾಜರು ವಹಿಸಲಿದ್ದಾರೆ, ಅಧ್ಯಕ್ಷತೆಯನ್ನು ಚಂದ್ರಕಾಂತ ಜಾಡಗೌಡರ ವಹಿಸುವರು. ಉದ್ಘಾಟನೆಯನ್ನು ಶಾಸಕ ಸಿದ್ದು ಸವದಿ ನೆರವೇರಿಸಲಿದ್ದಾರೆ, ಮುಖ್ಯ ಅಥಿತಿಗಳಾಗಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಕಾಂಗ್ರೇಸ್ ಮುಖಂಡ ಸಿದ್ದು ಕೊಣ್ಣೂರ, ಜಿ.ಪಂ. ಮಾಜಿ ಸದಸ್ಯ ಬಾಬಾಗೌಡ ಪಾಟೀಲ, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಾಲಾ ಅಶೋಕ ಮೋಟಗಿ, ಉಪಾಧ್ಯಕ್ಷೆ ಶ್ರೀಮತಿ ಪ್ರೇಮಾ ಗೋವಿಂದಗೋಳ, ಪರಶುರಾಮ ಬಸವ್ವಗೋಳ, ಗಿರಮಲ್ಲಪ್ಪ ಹಟ್ಟಿ, ಅಶೋಕ ಧಡೂತಿ, ಸಂಕಪ್ಪಾ ಮುನ್ನೋಳಿ, ರಾಮಣ್ಣ ಮುಗಳಖೋಡ, ಬಾಳಪ್ಪಾ ಹಳಿಂಗಳಿ, ಪುಂಡಲಿಕಪ್ಪಾ ಪೂಜಾರಿ, ರಾಮಣ್ಣ ಬಗನಾಳ, ಕೆಪಿಟಿಸಿಎಲ್ ಸ, ಕಾರ್ಯನಿರ್ವಾಹಕ ಅಧಿಕಾರಿ ಮಹಾಲಿಂಗಪ್ಪ ಧಡೂತಿ, ಪ್ರಭು ಮುಧೋಳ, ಪಿಕೆಪಿಎಸ್ ಅಧ್ಯಕ್ಷ ಶಂಕರ ಬಟಕುರ್ಕಿ, ಪರಪ್ಪ ಪಾಲಭಾವಿ, ಬೀರಪ್ಪಾ ಹಳೆಮನಿ, ವಿಜಯ ಪೂಜಾರಿ, ಮನೋಜ ಹಟ್ಟಿ, ಬಸವರಾಜ ಕುಂಚನೂರ ಸೇರಿದಂತೆ ಹಲವಾರು ಜನ ಪ್ರಮುಖರು ಆಗಮಿಸಲಿದ್ದು ಇದೇ ಸಂಧರ್ಬದಲ್ಲಿ ಹಲವಾರು ಸಾಧಕರನ್ನು ಸತ್ಕರಿಸುವ ಕಾರ್ಯಕ್ರಮ ನಡೆಯಲಿವೆಯಂದು ಶ್ರೀ ಬನಶಂಕರಿದೇವಿ ಸಾಂಸ್ಖೃತಿಕ ವೇದಿಕೆಯ ಅಧ್ಯಕ್ಷರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

