ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ ಪಾಟೀಲ ಅವರು ಫೆ.೨೪ ರಿಂದ ಫೆ.೨೫ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಫೆ.೨೪ರಂದು ಬೆಳಗ್ಗೆ ೧೧.೩೦ ಗಂಟೆಗೆ ಜಿಲ್ಲೆಯ ಇಂಡಿ ತಾಲೂಕು ಕ್ರೀಡಾಂಗಣದ ಹತ್ತಿರ ನಡೆಯುವ ಜಿಲ್ಲಾ ಗಾಣಿಗ ಸಮಾವೇಶದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ ೧.೩೦ ಗಂಟೆಗೆ ಇಂಡಿಯಿಂದ ಹೊರಟು, ವಿಜಯಪುರಕ್ಕೆ ಆಗಮಿಸುವರು. ಮಧ್ಯಾಹ್ನ ೪ ಗಂಟೆಗೆ ಸಚಿವರ ನಿವಾಸದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸುವರು. ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡುವರು.
ಫೆ.೨೫ರಂದು ಬೆಳಗೆ ೧೧.೧೫ಕ್ಕೆ ಜಿಲ್ಲೆಯ ಕಾತ್ರಾಳದಲ್ಲಿ ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೂತನ ಪುತ್ಥಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ೨ ಗಂಟೆಗೆ ಕಾತ್ರಾಳದಿಂದ ನರಗುಂದಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
