ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಿಜಯಪುರದಲ್ಲಿ ಬಿಜೆಪಿ ಪ್ರತಿಭಟನೆ
ವಿಜಯಪುರ: ರಾಜ್ಯ ಕಾಂಗ್ರೆಸ್ ಸರಕಾರ ಎಸ್.ಸಿ./ಎಸ್.ಟಿ. ಸಮುದಾಯಕ್ಕೆ ಮೀಸಲಾದ ಎಸ್.ಇ.ಪಿ. ಟಿ.ಇ.ಪಿ. ಯೋಜನೆಯಲ್ಲಿನ ಅಂದಾಜು ೧೧,೬೦೦ ಕೋಟಿ ಅನುದಾನವನ್ನು ಕಡಿತ ಮಾಡಿ ಬೇರೆ ಯೋಜನೆಗಳಿಗೆ ಉಪಯೋಗಿಸಿ ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಎಸ್.ಸಿ. ಮತ್ತು ಎಸ್.ಟಿ. ಮೋರ್ಚಾ ವತಿಯಿಂದ ಪ್ರತಿಭಟನೆ ಶುಕ್ರವಾರ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ನಗರದ ಗಾಂಧಿ ಸರ್ಕಲ್ನಿಂದ ಪ್ರತಿಭಟನೆ ಹೊರಟು ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ರಾಜ್ಯ ಕಾಂಗ್ರೆಸ್ ಸರಕಾರದ ಬಿಟ್ಟಿ ಭಾಗ್ಯ ಯೋಜನೆಗಳಿಂದ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದಿಂದ ಪ್ರತಿ ವರ್ಷ ೬ ಸಾವಿರ ರೂ. ರಾಜ್ಯ ಸರಕಾರದಿಂದ ೪ ಸಾವಿರ ರೂ. ಸೇರಿ ಒಟ್ಟು ೧೦ ಸಾವಿರ ದೊರೆಯುತ್ತಿತ್ತು. ಅದೇ ರೀತಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಜಾರಿಯಲ್ಲಿತ್ತು. ಇಂತಹ ಅನೇಕ ಜನಪರ ಯೋಜನೆಗಳನ್ನು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ನಿಲ್ಲಿಸಿದೆ. ಈ ಸರಕಾರ ಬಂದು ೯ ತಿಂಗಳು ಗತಿಸುತ್ತ ಬಂದರೂ ಈ ವರೆಗೆ ಹೊಸ ಯೋಜನೆಗಳ ಜಾರಿಗೆ ಮುಂದಾಗಿಲ್ಲ. ಅಭಿವೃದ್ಧಿ ಶೂನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಮಾತನಾಡಿದರು.
ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಮಂಜುನಾಥ್ ಮೀಸೆ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ರವಿಕಾಂತ ವಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಮುಖಂಡ ವಿಜುಗೌಡ ಪಾಟೀಲ, ಅರುಣ ಶಹಾಪುರ, ಸಂಗಣ್ಣ ಬೆಳ್ಳುಬ್ಬಿ, ಸಂಜೀವ ಐಹೊಳ್ಳೆ, ಪ್ರಕಾಶ ಅಕ್ಕಲಕೋಟ, ಅನೀಲ ಜಮಾದಾರ, ಚಂದ್ರಶೇಖರ ಕವಟಗಿ, ಕಾಸುಗೌಡ ಬಿರಾದಾರ, ಭರತ ಕೋಳಿ, ಶೀತಲಕುಮಾರ ಓಗಿ, ಪ್ರವೀಣ ನಾಟಿಕಾರ, ರಾಜು ಮಗಿಮಠ, ಶಿವಾನಂದ ಮಖಣಾಪೂರ, ಶ್ರೀನಿವಾಸ ಕಂದಗಲ್, ಗೋಪಾಲ ಘಟಕಾಂಬಳೆ, ಚಿದಾನಂದ ಚಲವಾದಿ, ಸ್ವಪ್ನಿ ಕಣಮುಚನಾಳ, ಹಣಮಂತ ಬಿರಾದಾರ, ಗೀತಾ ಕುಗನೂರ, ಸ್ವಾಮಿ ಮಾಶ್ಯಾಳ, ಮಳನಗೌಡ ಪಾಟೀಲ, ಈರಣ್ಣ ರಾವೂರ, ಎಸ್.ಎ. ಪಾಟೀಲ, ಕೃಷ್ಣಾ ಗುನ್ಹಾಳಕರ, ವಿಜಯ ಜೋಶಿ, ರಾಜೇಶ ತವಸೆ, ಶಿವರುದ್ರ ಬಾಗಲಕೋಟ, ಜವಾಹರ ಗೋಸಾವಿ, ಪ್ರೇಮಾನಂದ ಬಿರಾದಾರ, ವಿಠ್ಠಲ ಹೊಸಪೇಟ, ಮಹೇಶ ಒಡೆಯರ್, ರಾಜು ಕುರಿಯವರ್, ಭೀಮಾಶಂಕರ ಹದನೂರ, ವಿನಾಯಕ ದಹಿಂಡೆ, ವಿಕ್ರಂ ಗಾಯಕವಾಡ, ಶ್ರೀಕಾಂತ ಶಿಂಧೆ, ಸಂದೀಪ ಪಾಟೀಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

