ಚಿಮ್ಮಡ: ಗ್ರಾಮದಲ್ಲಿ ಹರಿಯುವ ಘಟಪ್ರಭಾ ಎಡದಂಡೆ ಕಾಲುವೆಯ ನಿಯಂತ್ರಣ ಕಛೇರಿಗೆ ಹಿರಿಯ ಅಧಿಕಾರಿಗಳು ಶುಕ್ರವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಲ್ಲಿನ ಜಿಎಲ್ಬಿಸಿ ಕಾಲುವೆಗೆ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ದೇಶಕ್ಕಾಗಿ ಹತ್ತು ದಿನಗಳ ಕಾಲ ನೀರು ಹರಿಸಲಾಗುತ್ತಿದೆ. ಅದರಲ್ಲಿ ಈಗಾಗಲೇ ಐದು ದಿನ ಮುಕ್ತಾಯಗೊಂಡಿದೆ. ಆದರೆ ಇದುವರೆಗೆ ಬೀಳಗಿ ಭಾಗದ ಬಹುತೇಕ ಗ್ರಾಮಗಳಿಗೆ ನೀರು ತಲುಪುತ್ತಿಲ್ಲ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಗ್ರಾಮದ ನಿಯಂತ್ರಣ ಕಛೇರಿಗೆ ಖುದ್ದು ಭೇಟಿ ನೀಡಿ ರಾತ್ರಿ ೧೧-೩೦ ರ ವರೆಗೆ ಸ್ಥಳದಲ್ಲಿದ್ದು ಪರಿಶೀಲನೆ ನಡೆಸಲಾಗಿ ಮಧುರಖಂಡಿ ಭಾಗದ ಹಲವು ರೈತರು ಜಮಖಂಡಿ ಕಾಲುವೆಗೆ ಹೆಚ್ಚುವರಿ ನೀರು ಹರಿಸುವಂತೆ ಸ್ಥಳಿಯ ನಿಯಂತ್ರಕರಿಗೆ ಒತ್ತಡಹಾಕಿ ನೀರು ಹರಿಸುತ್ತಿದ್ದರು. ಹಾಗೂ ಮುಧೋಳ ಭಾಗದ ರೈತರು ಉಪ ಕಾಲುವೆಗಳ ಗೇಟ್ಗಳನ್ನು ಒಡೆದು ನೀರನ್ನು ತಮ್ಮ ಜಮೀನುಗಳಿಗೆ ಹರಿಸುತ್ತಿರುವುದರಿಂದ ಬೀಳಗಿ ಭಾಗಕ್ಕೆ ನೀರು ಪೂರೈಕೆಯಾಗುತ್ತಿಲ್ಲ ಎಂದು ಮುಧೋಳ ಪ್ರಭಾರಿ ಕಾರ್ಯ ನಿರ್ವಾಹಕ ಅಭಿಯಂತರ ಎಚ್.ಆರ್. ಮಹಾರಡ್ಡಿ ಮಾಹಿತಿ ನೀಡಿದರು.
ಕುಡಿಯುವ ಉದ್ದೇಶಕ್ಕೆ ಅವಶ್ಯವಿರುವಷ್ಟು ನೀರನ್ನು ಮಾತ್ರ ಮುಧೋಳ ಹಾಗೂ ಜಮಖಂಡಿ ಕಾಲುವೆಗೆ ಹರಿಸುವಂತೆ ಆದೇಶಿಸಿದರು. ಹಾಗೂ ಗೇಟಗಳನ್ನು ಒಡೆದು ಇಲಾಖೆಯ ಆಸ್ತಿಗಳಿಗೆ ಹಾನಿಮಾಡುವವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಮೊಕದ್ದಮೆ ದಾಖಲಿಸುವಂತೆ ಜಮಖಂಡಿ, ಮುಧೋಳ ಕಾರ್ಯ ನಿರ್ವಾಹಕ ಅಭಿಯಂತರರಿಗೆ ಆದೇಶಿಸಿದರು.
ಸ್ಥಳದಲ್ಲಿ ಜಮಖಂಡಿ ಕಾರ್ಯ ನಿರ್ವಾಹಕ ಅಭಿಯಂತರ ಶ್ರೀಶೈಲ ಕಲ್ಯಾಣಿ, ಮುಧೋಳ ಪ್ರಭಾರಿ ಕಾರ್ಯ ನಿರ್ವಾಹಕ ಅಭಿಯಂತರ ಎಚ್.ಆರ್. ಮಹಾರಡ್ಡಿ, ಸಹಾಯಕ ಕಾರ್ಯಪಾಲಕ ಚೇತನ ಅಬ್ಬಿಗೇರಿ, ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ ನೀಲನ್ನವರ, ಸದಾಶಿವ ಕುಂಬಾರ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳದಲ್ಲಿಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

