Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಮಾನಸದಲ್ಲಿ ಶಾಶ್ವತ ನೆಲೆಸಿದ ಕನಕದಾಸರು :ಸಚಿವ ಪಾಟೀಲ
(ರಾಜ್ಯ ) ಜಿಲ್ಲೆ

ಜನಮಾನಸದಲ್ಲಿ ಶಾಶ್ವತ ನೆಲೆಸಿದ ಕನಕದಾಸರು :ಸಚಿವ ಪಾಟೀಲ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾತ್ರಾಳದಲ್ಲಿ ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೂತನ ಪುತ್ಥಳಿಯ ಉದ್ಘಾಟನೆ

ವಿಜಯಪುರ: ಕನಕದಾಸರು ಭಕ್ತಿಯ ಮೂಲಕ ಮತ್ತು ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೂಲಕ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಬಬಲೇಶ್ವರ ತಾಲೂಕಿನ ಕಾತ್ರಾಳ ಗ್ರಾಮದಲ್ಲಿ ಶ್ರೀ ಭಕ್ತ ಕನಕದಾಸ ಮತ್ತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೂತನ ಪುತ್ಥಳಿಯ ಉದ್ಘಾಟನೆ ನೆರವೇರಿಸಿದ ನಂತರ ಧರ್ಮಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬಸವಣ್ಣ, ಕನಕದಾಸ, ರಾಯಣ್ಣ, ಅಂಬೇಡ್ಕರ ಮಹಾಪುರುಷರು ಮತ್ತು ರಾಷ್ಟ್ರ ನಾಯಕರು. ಒಂದು ಸಮಾಜಕ್ಕೆ ಸೀಮಿತರಾದವರಲ್ಲ. ಹಾಲುಮತ ಅಪಾರ ದೈವಭಕ್ತಿ ಹೊಂದಿರುವ ಸಮಾಜವಾಗಿದೆ. ಭಕ್ತ ಕನಕದಾಸರು ಭಕ್ತಿಯಿಂದ ಕೃಷ್ಣನನ್ನು ಒಲಿಸಿಕೊಂಡಿದ್ದರು. ಸಂಗೊಳ್ಳಿ ರಾಯಣ್ಣ ಕಿತ್ತೂರು ಸಂಸ್ಥಾನದ ಉಳಿವಿಗಾಗಿ ರಾಣಿ ಚೆನ್ನಮ್ಮರ ಜೊತೆ ಬ್ರಿಟೀಷರ ವಿರುದ್ಧ ಹೋರಾಡಿ ಹುತಾತ್ಮರಾಗಿದ್ದಾರೆ. ಅವರ ತ್ಯಾಗ ಮತ್ತು ಆದರ್ಶಮಯ ಜೀವನ ನಮಗೆಲ್ಲರಿಗೂ ಮಾದರಿಯಾಗಿದೆ ಎಂದು ಅವರು ಹೇಳಿದರು.
ಕಾತ್ರಾಳ ಗ್ರಾಮಸ್ಥರು ದುಡಿಮೆಗೆ ಸಶಕ್ತರು, ಶ್ರಮಜೀವಿಗಳು. ನೀರಾವರಿಯಿಂದಾಗಿ ಈ ಗ್ರಾಮದ ಜನ ಕೃಷಿ ಚಟುವಟಿಕೆಗಳಲ್ಲಿ ವ್ಯಸ್ಥರಾಗಿದ್ದಾರೆ. 2013 ರಿಂದ 18ರ ಅವಧಿಯಲ್ಲಿ ಸಿಎಂ ಎಸ್. ಸಿದ್ಧರಾಮಯ್ಯ ಅವಧಿಯಲ್ಲಿ ಜಲಸಂಪನ್ಮೂಲ ಸಚಿವನಾಗಿ ಕೈಗೊಂಡಿರುವ ನೀರಾವರಿ ಯೋಜನೆಗಳಿಂದಾಗಿ ಈ ಭಾಗದಲ್ಲಿ ರೈತರು ಆರ್ಥಿಕವಾಗಿ ಸಶಕ್ತರಾಗುತ್ತಿರುವುದು ಸಂತಸ ತಂದಿದೆ. ಈಗ ಕಾತ್ರಾಳ ಗ್ರಾಮದ ಅಗಸಿಯಲ್ಲಿ ಕನಕದಾಸ ಮತ್ತು ಸಂಗೊಳ್ಳಿ ರಾಯಣ್ಣರ ಪ್ರತಿಮೆ ಸ್ಥಾಪನೆಯಿಂದಾಗಿ ಗ್ರಾಮಕ್ಕೆ ಲಕ್ಷಣ ಬಂದಿದೆ. ಈ ಭಾಗದಲ್ಲಿ ಬಾಕಿ ಇರುವ 15ನೇ ವಿತರಣೆ ಕಾಲುವೆ ಮತ್ತು 5ಎ ಮತ್ತು 5ಬಿ ನೀರಾವರಿ ಕಾಮಗಾರಿಗಳಿಗೆ ಕೆಬಿಜೆಎನ್ಎಲ್ ಆಡಳಿತಾತ್ಮಕ ಅನುಮೋದನೆ ದೊರಕಿದ್ದು, ಒಟ್ಟು ರೂ. 319 ಕೋ. ವೆಚ್ಚದ ಕಾಮಗಾರಿಗಳಿಗೆ ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅಲ್ಲದೇ, ಕಾತ್ರಾಳ ಕೆರೆ ತುಂಬಿಸಲೂ ಕೂಡ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಈಗ ಕೈಗಾರಿಕೆ ಸಚಿವನಾಗಿ ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಕಾರ್ಯೋನ್ಮುಖನಾಗಿದ್ದು, ಈಗಾಗಲೇ ಎರಡು ಕಂಪನಿಗಳು ಉದ್ಯಮ ಸ್ಥಾಪನೆಗೆ ಮುಂದಾಗಿವೆ. ಜೆ.ಎಸ್.ಡಬ್ಲ್ಯೂ ಜೊತೆಗೂ ಈ ನಿಟ್ಟಿನಲ್ಲಿ ಮಾತುಕತೆ ಪ್ರಗತಿಯಲ್ಲಿದೆ ಎಂದು ಎಂ. ಬಿ. ಪಾಟೀಲ ತಿಳಿಸಿದರು.
ಸರೂರ ಅಗತೀರ್ಥ ಹಾಲುಮತ ಗುರುಪೀಠದ ಶ್ರೀ ರೇವಣಸಿದ್ಧೇಶ್ವರ ಶಾಂತಮಯ ಮಹಾಸ್ವಾಮಿಗಳು ಮಾತನಾಡಿ, ಸಚಿವ ಎಂ. ಬಿ. ಪಾಟೀಲ ಅವರು ಬಿಸಿಲ ನಾಡಿನಲ್ಲಿ ಭೂಮಿತಾಯಿಗೆ ಅಗತ್ಯವಾಗಿರುವ ನೀರನ್ನು ನೀಡುವ ಮೂಲಕ ಪ್ರಕೃತಿಯಲ್ಲಿ ಹಸಿರು ಸಮೃದ್ಧಿಯಾಗಿರುವಂತೆ ಮಾಡಿ ಜನರ ನೆಮ್ಮದಿಯಿಂದ ಉಸಿರಾಡುವಂತೆ ಮಾಡಿದ್ದಾರೆ. ಭೂಮಿತಾಯಿ ನೀರಾವರಿ ಯೋಜನೆಗಳ ಮೂಲಕ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಇದರಿಂದಾಗಿ ಈಗ ಬರಡು ನೆಲದಲ್ಲಿ ಲಕ್ಷಾಂತರ ಟನ್ ಕಬ್ಬು ಬೆಳೆಯಲಾಗುತ್ತದೆ. ಈ ಮೂಲಕ ಸಚಿವರು ನಿಜವಾದ ಜನಸೇವಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಂಗೊಳ್ಳಿ ರಾಯಣ್ಣ ಮನುಕುಲoದ ಒಳಿತಿಗಾಗಿ ಹೋರಾಡಿದ್ದಾರೆ. ನಾಡು ಮತ್ತು ದೇಶಕ್ಕಾಗಿ ಜೀವತ್ಯಾಗ ಮಾಡಿ ಕ್ರಾಂತಿ ಮಾಡಿದ್ದಾರೆ. ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮಾನತೆಗಾಗಿ ಶ್ರಮಿಸಿದ್ದಾರೆ. ಅವರ ನಂತರ ಕನಕದಾಸರು ಸಮಾನತೆಯ ಹೋರಾಟ ಮುಂದುವರೆಸಿದ್ದರು. ಕನಕದಾಸರ ಕಾಲದಲ್ಲಿ ಕನಕರನ್ನು ಕೆಣಕಬೇಡಿ. ಕೆಣಕಿ ತಿಣುಕಬೇಡಿ ಎಂಬುದು ಅಂದಿನ ಕಾಲದಲ್ಲಿ ಜನಜನಿತವಾಗಿತ್ತು. ಇಂದಿನ ಯುವಕರು ಮೂಢ ನಂಬಿಕೆಗಳಿಂದ ಹೊರ ಬರಬೇಕು. ದುಶ್ಚಟಗಳಿಂದ ದೂರವಿರಬೇಕು. ಆಚರಣೆ ಹೆಸರಿನಲ್ಲಿ ದುಂದುವೆಚ್ಚ ಮಾಡಿ ಆರ್ಥಿಕವಾಗಿ ತೊಂದರೆಗೆ ಸಿಲುಕುವ ಬದಲು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸುಶೀಕ್ಷಿತರನ್ನಾಗಿ ಮಾಡಿ ಎಂದು ಸಮಾಜದ ಜನತೆಗೆ ಕಿವಿಮಾತು ಹೇಳಿದರು.
ಮಹಾರಾಷ್ಟ್ರದ ಸುಕ್ಷೇತ್ರ ಹುಲಜಂತಿ ಪಟ್ಟದ ಪೂಜ್ಯರಾದ ಶ್ರೀ ಮಾಳಿಂಗರಾಯ ಮಹಾರಾಯರು ಮಾತನಾಡಿದರು.
ಖ್ಯಾತ ವಾಗ್ಮಿ ಮತ್ತು ಯುವ ಮುಖಂಡ ಮೋಹನ ಮೇಟಿ ಮಾತನಾಡಿದರು.
ಈ ಸಂದರ್ಭದಲ್ಲಿ ಸುಕ್ಷೇತ್ರ ಗೊಳಸಾರದ ಶ್ರೀ ಅಭಿನವ ಪುಂಡಲಿಂಗೇಶ್ವರ ಮಹಾರಾಜರು, ಹಂದಿಗುಂದ ಶ್ರೀ ಹಾಲಸಿದ್ಧನಾಥನ ಮಠದ ಶ್ರೀ ಶ್ರೀಮಂತ ಶಿವಯೋಗಿ ಅಜ್ಜನವರು, ಸುಕ್ಷೇತ್ರ ಬಳಗಾನೂರಿನ ಶ್ರೀ ಸೋಮರಾಯ ಮುತ್ಯಾ, ಕಾತ್ರಾಳ ಗದ್ದುಗೆ ಪೂಜಾರಿ ಶ್ರೀ ಮಲಕಾರಿಸಿದ್ಧ ಸೋ. ಒಡೆಯರ, ಮಲ್ಲಯ್ಯ ಕಾ. ಮಠ, ಕಾತ್ರಾಳ ಶ್ರೀ ಕನಕದಾಸ ಸಂಘದ ಅಧ್ಯಕ್ಷ ವಿಠ್ಠಲ ಯಂ. ಪಡಸಲಗಿ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ರಾಜು ಕಂಬಾಗಿ, ಸಾಬು ಮಾಶ್ಯಾಳ, ಮಲ್ಲಿಕಾರ್ಜುನ ಪರಸಣ್ಣವರ, ಮಲ್ಲು ಬಿದರಿ, ವಿಠ್ಠಲ ಪಡಸಲಗಿ, ಕಲ್ಲಪ್ಪಗೌಡ ನ್ಯಾಮಗೌಡ, ವಿಠ್ಠಲ ಯಂಕಪ್ಪ ಪಡಸಲಗಿ, ಎಂ. ಡಿ. ಪಡಸಲಗಿ, ಬಾಳೇಶ ಸೋ. ಪಡಸಲಗಿ, ಮಾಸಿದ್ದಸಾ. ಪಡಸಲಗಿ, ತುಕಾರಾಮ ಭೀ. ಪಡಸಲಗಿ, ಅಮ್ಮೋಗಿ ಸಿ. ಗಲಗಲಿ, ಲಕ್ಷ್ಮಣ ಜಿರಲಿ ಮುಂತಾದರುವ ಉಪಸ್ಥಿತರಿದ್ದರು.
ಇದಕ್ಕೂ ಮುಂಚೆ ಕಾರ್ಯಕ್ರಮದ ಅಂಗವಾಗಿ ಶ್ರೀ ಭಕ್ತ ಕನಕದಾಸ ಮತ್ತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಭಾವಚಿತ್ರಗಳ ಮೆರವಣಿಗೆ ಮತ್ತು ಕುಂಭಮೇಳ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.