ಪ್ರೇರಣಾ ಸಂಸ್ಥೆಗೆ ಶಾಸಕರ ಅನುದಾನದಲ್ಲಿ ೧೦ಲಕ್ಷ ರೂ. ನೀಡುವ ಭರವಸೆ
ಸಿಂದಗಿ: ಶಿಕ್ಷಣ ಸಮಾಜಕ್ಕೆ ಉಪಯೋಗವಾಗಬೇಕು ಹಾಗೂ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಪ್ರಸ್ತುತ ಸಮಾಜದ ಏಳಿಗೆಗೆ ಅಭೂತಪೂರ್ವ ಕೊಡುಗೆ ನೀಡುತ್ತಿವೆ ಎಂದು ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಶ್ರೀ ಸಮರ್ಥ ವಿದ್ಯಾ ವಿಕಾಸ ವಿವಿದೋದ್ದೇಶ ಸಂಸ್ಥೆಯ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಲೆಯ ವತಿಯಿಂದ ಹಮ್ಮಿಕೊಂಡ ಶಾಸಕರ ಸನ್ಮಾನ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶುಭ ಕೋರುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾ ಸಂಸ್ಥೆಯನ್ನು ಪ್ರಾರಂಭ ಮಾಡಿ ವಿದ್ಯಾ ಸಂಸ್ಥೆಗಳ ಬೆಳೆಸುವಲ್ಲಿ ಕುಲಕರ್ಣಿ ಸಹೋದರರ ತ್ಯಾಗ ಅಪರಿಮಿತ. ಮನೆತನದ ಏಳಿಗೆಗೆ ಕುಲಕರ್ಣಿ ಸಹೋದರರ ತ್ಯಾಗ ಅವಿಸ್ಮರಣೀಯ ಎಂದು ಶ್ಲಾಘಿಸಿದರು.
ಸಿಂದಗಿ ಕ್ಷೇತ್ರಕ್ಕೆ ಶಿಕ್ಷಣ ಸಂಸ್ಥೆಯ ಕೊಡುಗೆ ಅನನ್ಯವಾಗಿದೆ. ಈ ಪ್ರೇರಣಾ ಸಂಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ ಶಾಸಕರ ಅನುದಾನದಲ್ಲಿ ೧೦ಲಕ್ಷ ರೂ. ಅನುದಾನ ನೀಡುವುದಾಗಿ ಹೇಳಿದರು.
ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ ಅವರು ಶಾಸಕ ಅಶೋಕ ಮನಗೂಳಿ ಒಳಗೊಂಡಂತೆ ಬಸನವ ಬಾಗೇವಾಡಿಯ ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಜಶೇಖರ್ ಪಾಟೀಲ, ಚಿಕ್ಕಮಕ್ಕಳ ತಜ್ಞ ಡಾ.ಇಸ್ಮಾಯಿಲ ಮೊಗಲಾಯಿ ದಂಪತಿ, ಸಿಆರ್ಪಿ ನೀಲಕಂಠ ತಿಳಿಗೂಳ, ಶಾಸಕರ ಭದ್ರತಾ ಸಿಬ್ಬಂದಿ ನಾಸಿರ್ ಯಾಳಗಿ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಈ ವೇಳೆ ಸನ್ಮಾನ ಸ್ವೀಕರಿಸಿದ ರಾಜಶೇಖರ್ ಪಾಟೀಲರು ಮಾತನಾಡಿದರು.
೨೦೨೨-೨೩ರ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಶಾಲೆಯ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ನಿರ್ದೇಶಕ ಪಿ.ಡಿ ಕುಲಕರ್ಣಿ, ಸಿಆರ್ಪಿ ನೀಲಕಂಠ ತಿಳಗೂಳ, ಮುಖ್ಯೋಪಾಧ್ಯಾಯೆ ಎಸ್. ಐ ಅಸ್ಕಿ, ಎಂ.ಪಿ ಬುಕ್ಕಾ, ಸತೀಶ್ ಕುಲಕರ್ಣಿ, ವಿದ್ಯಾ ಅಂಬಲಗಿ ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ, ಬೋಧಕೇತರ ಸಿಬ್ಬಂದಿಗಳು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

