Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

ಆ ನೋಟವು ಪ್ರೀತಿಯ ಮೀರಿಸಿತು

೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಯಮ ಗಾಳಿಗೆ ತೂರಿದ ಶಿಕ್ಷಣ ಇಲಾಖೆ ಅಧಿಕಾರಿಗಳು
(ರಾಜ್ಯ ) ಜಿಲ್ಲೆ

ನಿಯಮ ಗಾಳಿಗೆ ತೂರಿದ ಶಿಕ್ಷಣ ಇಲಾಖೆ ಅಧಿಕಾರಿಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಇಓ ಕಚೇರಿಯಲ್ಲಿ ಅನಾಥವಾಗಿ ಬಿದ್ದಿರುವ ಎಸ್ಸೆಸ್ಸೆಲ್ಸಿ ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು!

*– ಚೇತನ ಶಿವಶಿಂಪಿ*

ಮುದ್ದೇಬಿಹಾಳ: ಪರೀಕ್ಷೆ ಎಂದರೆ ವಿದ್ಯಾರ್ಥಿಗಳಿಗೆ ಎಲ್ಲಿಲ್ಲದ ಭಯ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಂತೂ ಪರೀಕ್ಷೆ ಬರೆದು ಫಲಿತಾಂಶ ಬರೋವರೆಗೂ ಸಮಾಧಾನವಿರಲ್ಲ. ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಕೈ ಸೇರುತ್ತಿದ್ದಂತೆ ಅಬ್ಬಾ! ನನಗೆ ಇಷ್ಟು ಮಾಕ್ಸ್ ಬರುತ್ತೆ ಅಂದುಕೊಂಡಿರ್ತಾರೆ. ಆದರೆ ಫಲಿತಾಂಶ ಬಂದಾಗ ಬೇರೆನೇ ಆಗಿರುತ್ತೆ. ಕಾಣದ ಕೈಗಳ ಕೈಚಳಕದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಅಂಕದಲ್ಲಿ ಏರುಪೇರಾಗಿಬಿಟ್ಟಿರುತ್ತೆ. ಮುಗ್ಧ ಮಕ್ಕಳು ಇಲಾಖೆಯ ಮೇಲೆ ವಿಶ್ವಾಸ ಇಟ್ಟು ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆಗಳನ್ನು ಬರೀತಾರೆ. ಆದರೆ ಕೆಲ ಕರಾಳ ಮುಖಗಳು ತಮ್ಮ ಮಗು ಎಲ್ಲರಿಗಿಂತ ಹೆಚ್ಚಿನ ಅಂಕ ಗಳಿಸಬೇಕು ಅಂತಾ ಏನೇನೋ ಕರಾಮತ್ತನ್ನ ಮಾಡಿರ್ತಾರೆ.
ಇಲಾಖೆಯವರು ಅಧಿಕಾರಿಗಳಿಗೆ ಕೆಲವು ಸುತ್ತೋಲೆಗಳನ್ನು ಕೊಟ್ಟು ಪರೀಕ್ಷೆಗಳನ್ನು ಕಟ್ಟು ನಿಟ್ಟಾಗಿ ನಡೆಸುವಂತೆ ಆದೇಶ ಮಾಡ್ತಾರೆ. ಕೆಲವು ಬಾರಿ ಕಟ್ಟು ನಿಟ್ಟಾಗಿ ಪರೀಕ್ಷೆಗಳು ನಡೆಯದೇ ಎಲ್ಲೋ ಒಂದೆಡೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಇಲಾಖೆಯ ಮರ್ಯಾದೆ ಮೂರು ಪಾಲಾದ್ರೂ ಮೇಲಾಧಿಕಾರಿಗಳು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಲ್ಲಿ ಮೀನಮೇಷ ಎಣಿಸ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರುವಂಥದ್ದೇ.
  ಕೆಲವು ಅಧಿಕಾರಿಗಳಿಗೆ ಪರೀಕ್ಷೆಗಳು ಬಂದ್ರೆ ಸಾಕು ದೊಡ್ಡ ಚೆಲ್ಲಾಟ. ದುಡ್ಡು ಉಳಿಸುವ ಮತ್ತು ಗಳಿಸುವದಕ್ಕಾಗಿಯೇ ಪರೀಕ್ಷೆಗಳನ್ನು ಬಂದಿವೆ ಅನ್ನೋದು ಅವರ ಭಾವನೆಯಾಗಿರುತ್ತೆ. ಕಟ್ಟು ನಿಟ್ಟಾಗಿ ಪರೀಕ್ಷೆ ನಡೆಸೋಕೆ ಇಲಾಖೆ ಸುತ್ತೋಲೆಗಳನ್ನು ಹೊರಡಿಸುತ್ತೆ. ಆದರೆ ಆ ಸುತ್ತೋಲೆಗಳು ಕೇವಲ ಕಾಗದಕ್ಕೆ ಮಾತ್ರ ಸೀಮಿತ ಎಂಬ ಸಾರ್ವಜನಿಕರ ಆರೋಪ ಮತ್ತೊಮ್ಮೆ ಸಾಕ್ಷೀಕರಿಸಿದೆ.
ಹೌದು, ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದ ಘಟನೆಯೊಂದು ಅಧಿಕಾರಿಗಳ ನಿರ್ಲಕ್ಷ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಪೂರ್ವಭಾವಿ ಪರೀಕ್ಷೆಗಳು ಅಂತಿಮ ಪರೀಕ್ಷೆಗಳಂತೆಯೇ ನಡೆಯಬೇಕು ಎಂದು ಸುತ್ತೋಲೆ ಇದೆ. ಪ್ರಶ್ನೆ ಪತ್ರಿಕೆ, ಸ್ಟ್ರಾಂಗ್ ರೂಮ್ ಸೇರಿದಂತೆ ಎಲ್ಲ ನಿಯಮಗಳನ್ನು ಪಾಲಿಸಲೇಬೇಕು. ಅದರೆ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಕಾರ್ಯಾಲಯಕ್ಕೆ ಬಂದು ಪಡೆದುಕೊಳ್ಳುವಂತೆ ತಿಳಿಸಿ ನಿಯಮಗಳನ್ನು ಗಾಳಿಗೆ ತೂರಿ ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತೊಮ್ಮೆ ಎಡವಟ್ಟು ಮಾಡಿಕೊಂಡಿದೆ.
ಕಳೆದ ೨೦೨೨ ನೇ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಡೆದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಶಿಕ್ಷಣ ಇಲಾಖೆ ಹಿಂದೇಟು ಹಾಕಿದೆ ಎಂಬ ಆರೋಪ ಬಿಸಿಯಾಗಿರುವಾಗಲೇ ಮತ್ತೊಮ್ಮೆ ನಿಯಮಗಳ ಉಲ್ಲಂಘನೆಯ ಆರೋಪ ಹೊತ್ತಿದೆ.
ತಾಲೂಕಿನ ಬಸರಕೋಡ, ಬಳಬಟ್ಟಿ, ಯಲಗೂರ, ರೂಡಗಿ ಸೇರಿದಂತೆ ಪಟ್ಟಣದ ಎಲ್ಲ ಶಾಲೆಯವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿಯೇ ಪ್ರಶ್ನೆ ಪತ್ರಿಕೆ ಸಾಗಿಸುವ ಕಾರ್ಯ ಫೆ.೨೭ ರಂದು ಭರದಿಂದ ಸಾಗಿತ್ತು. ಜೊತೆಗೆ ಕೆಲವಷ್ಟು ಪ್ರಶ್ನೆ ಪತ್ರಿಕೆಗಳ ಬಂಡಲ್‌ಗಳು ಅನಾಥವಾಗಿ ಬಿದ್ದಿದ್ದ ವಿಡಿಯೋ ತುಣುಕುಗಳು ’ಉದಯರಶ್ಮಿ’ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸ್ಥಳದಲ್ಲಿ ಯಾವ ಅಧಿಕಾರಿಗಳೂ ಇಲ್ಲದಿರುವುದು ನಿಯಮಗಳು ಕಾಗದಕ್ಕೆ ಮಾತ್ರ ಸೀಮಿತ ಎಂಬುದನ್ನು ಸಾರಿ ಹೇಳುತ್ತಿವೆ.
ಪ್ರಶ್ನೆ ಪತ್ರಿಕೆಗಳನ್ನು ಆಯಾ ಶಾಲೆಗಳಿಗೆ ಖುದ್ದಾಗಿ ಇಲಾಖೆ ತಲುಪಿಸಬೇಕು ಎಂದು ನಿಯಮ ಇದೆ. ಆದರೆ ಆ ನಿಯಮ ಮಾತ್ರ ಇಲ್ಲಿ ಅನ್ವಯಿಸಿಲ್ಲ. ಸಂಬಂಧಿಸಿದ ಅಧಿಕಾರಿಗಳು ಯಾವುದೇ ಜವಾಬ್ದಾರಿಯುತ ಉತ್ತರ ನೀಡಿಲ್ಲ ಹಾಗಾಗಿ ಜಿಲ್ಲಾಧಿಕಾರಿಗಳು, ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ಈ ವಿಷಯ ಮುಟ್ಟಿಸೋ ಪ್ರಯತ್ನ ಮಾಡುತ್ತಿದ್ದೇವೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

ಆ ನೋಟವು ಪ್ರೀತಿಯ ಮೀರಿಸಿತು

೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ
    In (ರಾಜ್ಯ ) ಜಿಲ್ಲೆ
  • ಆ ನೋಟವು ಪ್ರೀತಿಯ ಮೀರಿಸಿತು
    In ವಿಶೇಷ ಲೇಖನ
  • ೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ
    In (ರಾಜ್ಯ ) ಜಿಲ್ಲೆ
  • ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ
    In (ರಾಜ್ಯ ) ಜಿಲ್ಲೆ
  • ಚನ್ನಬಸವಶ್ರೀಗಳ ವಚನಶಿಲಾ ಮಂಟಪ ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಸಾರಿಗೆ ನಿಗಮದಿಂದಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದತ್ತು ಪಡೆಯಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ
    In (ರಾಜ್ಯ ) ಜಿಲ್ಲೆ
  • ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.