ವಿಜಯಪುರ: ಪಾಕ್ ಪರ ಘೋಷಣೆ ಕೂಗಿದ ತಮ್ಮ ಬೆಂಬಲಿಗರ ಮೇಲೆ ಕ್ರಮ ಕೈಗೊಳ್ಳಿ ಎಂದು ಹೇಳುವುದನ್ನು ಬಿಟ್ಟು ಈ ವಿದ್ಯಮಾನದ ಕುರಿತು ಪ್ರಶ್ನೆ ಮಾಡಿದ ಪತ್ರಕರ್ತರ ಮೇಲೆ ಹರಿಹಾಯ್ದಿರುವ ರಾಜ್ಯ ಸಭಾ ಸದಸ್ಯ ನಾಸಿರ ಹುಸೇನ್ ಅವರ ಸದಸ್ಯತ್ವವನ್ನು ಅನುರ್ಜಿತಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ವಿಜಯ ಜೋಶಿ ಒತ್ತಾಯಿಸಿದ್ದಾರೆ.
ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಾಕ್ ಪರ ಘೋಷಣೆ ಮೊಳಗಿರುವುದೇ ದೊಡ್ಡ ದುರಂತ, ಇದನ್ನು ಖಂಡಿಸಬೇಕಾದ ಸಂಸದರು ಮಾಧ್ಯಮಗಳ ಮೇಲೆ ಏಕವಚನ ಪದ ಪ್ರಯೋಗಿಸಿ ನಿಂದಿಸಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದೊಡ್ಡ ಅಪಮಾನ, ಕೂಡಲೇ ಅವರು ದೇಶದಜನತೆ ಹಾಗೂ ಮಾಧ್ಯಮ ವರ್ಗದ ಕ್ಷಮೆ ಕೋರಬೇಕು. ಈ ರೀತಿ ಒಬ್ಬ ಸಂಸದ ಬೇಜವಾಬ್ದಾರಿಯಿಂದ ವರ್ತನೆ ಮಾಡಿರುವುದು ಖಂಡನೀಯ. ಕೂಡಲೇ ಅವರನ್ನು ರಾಜ್ಯ ಸಭಾ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

