ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ೧೦ ತಿಂಗಳುಗಳ ಕಾಲ ತೋಟಗಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ರೈತರ ಮಕ್ಕಳಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲೆಯಿಂದ ಒಟ್ಟು ೧೭ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿಯ ಹಿಡಕಲ್ ಡ್ಯಾಂ ತೋಟಗಾರಿಕೆ ಇಲಾಖೆಯಲ್ಲಿ ತರಬೇತಿ ನೀಡಲಾಗುತ್ತದೆ.
ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಅಥವಾ ಇಲಾಖೆ ವೆಬ್ ಸೈಟ್ www://horticulturedir.kar.gov.in ನಲ್ಲಿ ಪಡೆದುಕೊಳ್ಳಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೧೫ ಸಾಮಾನ್ಯ ವರ್ಗದವರಿಗೆ ೩೦ರೂ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸಲು ದಿನಾಂಕ : ೦೧-೦೪-೨೦೨೪ ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಎಪ್ರಿಲ್ ೬ ರಂದು ನಡೆಯಲಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ೧೭೫೦ರೂ ಶಿಷ್ಯವೇತನ ನೀಡಲಾಗುತ್ತದೆ. ತರಬೇತಿಯ ಅವಧಿಯಲ್ಲಿ ಇಲಾಖೆಯ ವಸತಿಗೃಹದಲ್ಲಿ ತಂಗುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಎಸೆಸೆಲ್ಸಿ ಪಾಸ್ ಆಗಿರಬೇಕು. ತಂದೆ ಅಥವಾ ತಾಯಿ ಅಥವ ಸ್ವತಹ ತಮ್ಮ ಹೆಸರಿನಲ್ಲಿ ಜಮಿನು ಇರುವ ದಾಖಲೆ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ತೋಟಗಾರಿಕೆ ನಿರ್ದೇಶಕರು ವಿಜಯಪುರ (೮೯೭೧೮೫೧೫೧೮, ), ಸಹಾಯಕ ತೋಟಗಾರಿಕೆ ನಿರ್ದೇಶಕರು(೯೯೭೨೭೮೪೬೯೬) ಸಹಾಯಕ ತೋಟಗಾರಿಕೆ ನಿರ್ದೇಶಕರು(೭೦೧೯೨೯೫೫೪೨) ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
