ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಕೆ.ಆಲಗೂರ ಇವರು ಕಾಯಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಂಡಿ ತಾಲೂಕಿನ ಹರಳಯ್ಯನಹಟ್ಟಿ (ಬೆನಕನಹಳ್ಳಿ) ಗ್ರಾಮದ ಅಪ್ಪ ಅವ್ವ ಪ್ರತಿಷ್ಠಾನ ವತಿಯಿಂದ ಇದೇ ಮಾ.೬ರಂದು ಪರಮಪೂಜ್ಯ ಶ್ರೀ ಸಿದ್ಧೇಶ್ವರ ಅಪ್ಪಾಜಿ ರವರ ನುಡಿನಮನ ಮತ್ತು ದಿ.ಚಂದ್ರಾಮ (ಮಾಸ್ತರ) ಹೊನಕಟ್ಟಿ ಇವರ ೨೨ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮದ ಜರುಗಲಿದ್ದು, ಕಲೆ, ಸಾಹಿತ್ಯ, ಸಂಗೀತ, ಜನಪದ ಸೇರಿದಂತೆ ಇತರೆ ಸಾಧಕರಿಗೆ ಕಾಯಕ ಪ್ರಶಸ್ತಿ ಪ್ರದಾನ ಮಾಡಲಿದ್ದು, ಇದೇ ವೇಳೆ ಸಾಹಿತ್ಯ ಸೇವೆಯನ್ನು ಗುರುತಿಸಿ ಮೌಲಾಲಿ ಕೆ. ಆಲಗೂರ ಇವರಿಗೆ ಕಾಯಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಜ್ಯೋತಿರ್ಲಿಂಗ ಹೊನ್ನಕಟ್ಟಿ (ಸಿಪಿಐ ಬೆಂಗಳೂರು) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

