ಮುದ್ದೇಬಿಹಾಳ: ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಮಾ.೯ ರಂದು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಕೌಂಪೌಂಡೇಬಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಭಯ ಪಕ್ಷಗಾರರಿಗೆ ನೊಟೀಸು ಜಾರಿ ಮಾಡಿದ್ದು ಅವುಗಳನ್ನು ಮಾ.೨ ರಂದು ನಿಗದಿಪಡಿಸಲಾಗಿದೆ. ಅಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಪಟ್ಟಣದ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದಲ್ಲಿ ಆರೋಪಿ ಪರ ವಕೀಲರು ಹಾಜರಾಗಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಆಗಿರುವ ಹಿರಿಯ ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀ ನಿಂಗಪ್ಪ ಗರಗ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
