ವಿಜಯಪುರ: ನಗರದ ಲೇಖಕಿ ಹಾಗೂ ಸಮಾಜ ಸೇವಕಿ ಡಾ.ಸುರೇಖಾ ರಾಠೋಡ ಅವರಿಗೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ೨೦೨೨ ನೇ ಸಾಲಿನ ಪುಸ್ತಕ ದತ್ತಿ ಪ್ರಶಸ್ತಿ ನೀಡಿ ಗೌರವಿಸಿದೆ.
ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಮಂದಿರದಲ್ಲಿ ನಡೆದ ವಿವಿಧ ಪುಸ್ತಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ಸುರೇಖಾ ರಾಠೋಡ ಅವರಿಗೆ ಕರ್ನಾಟಕ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಹಾಗೂ ಕಸಾಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಮಾನವೀಯ ಕಳಕಳಿಯ ಡಾ.ಸುರೇಖಾ ರಾಠೋಡ ಅವರಿಗೆ ’ಉದಯರಶ್ಮಿ” ಪತ್ರಿಕಾ ಬಳಗ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

