ಸಿಂದಗಿ: ತಾಲೂಕಿನ ರಾಂಪೂರ ಪಿಎ ಗ್ರಾಮದ ಕೃಷ್ಣಾ ಭಾಗ್ಯ ಜಲ ನಿಗಮ ಕ್ಯಾಂಪ್ನಲ್ಲಿ ಮಾ.೦೫ರಂದು ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ತಿಳಿಸಿದ್ದಾರೆ.
ಹಾಲಿ ಶಾಸಕರು ಗಂಗಾ ಕಲ್ಯಾಣ ಯೋಜನೆಯಲ್ಲಿ ಅರ್ಹರಾದ ರೈತ ಫಲಾನುಭವಿಗಳನ್ನು ರದ್ದುಗೊಳಿಸಿ ಹೊಸ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಲಸಂಪನ್ಮೂಲ ಅಚಿವರಿಗೆ ಶಿಫಾರಸ್ಸು ಮಾಡಿದ್ದಾರೆಂದು ಪ್ರತಿಭಟನೆಗೆ ತಾಲೂಕು ಬಿಜೆಪಿ ಮಂಡಲ ಮುಂದಾಗಿದೆ. ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕರು, ಮೋರ್ಚಾಗಳ ಅಧ್ಯಕ್ಷರು, ರೈತರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
Subscribe to Updates
Get the latest creative news from FooBar about art, design and business.
Related Posts
Add A Comment

