ಬಸವನಬಾಗೇವಾಡಿ: ತಾಲೂಕಿನ ಕಾನ್ನಾಳ ಗ್ರಾಮದ ಬಾಂದಾರಕ್ಕೆ ಭಾನುವಾರ ಸಂಜೆ ಮುಳವಾಡ ಏತನೀರಾವರಿ ಯೋಜನೆಯ ಸಂಕನಾಳ ಮುಖ್ಯ ಕಾಲುವೆಯಿಂದ ನೀರು ಬಿಡಲು ಅಽಕಾರಿಗಳು ನೀಡಿದ ಭರವಸೆಯಂತೆ ಅಧಿಕಾರಿಗಳ ಸಮ್ಮುಖದಲ್ಲಿ ಫೈಪ್ ಹಾಕುವ ಕಾರ್ಯ ನಡೆಯಿತು.
ಗ್ರಾಮಸ್ಥರು ಶನಿವಾರ ಕುಡಿಯುವ ನೀರಿನ ತಾಪತ್ರಯ, ಜಾನುವಾರುಗಳಿಗೆ ನೀರು ಇಲ್ಲದಂತಾಗಿದೆ. ಗ್ರಾಮದಿಂದ ಕೇವಲ ಎರಡು ಕಿಲೋ ಮೀಟರ್ ಅಂತರದಲ್ಲಿರುವ ಈ ಕಾಲುವೆಯಿಂದ ಗ್ರಾಮದ ಬಾಂದಾರಕ್ಕೆ ನೀರು ಬಿಟ್ಟರೆ ಗ್ರಾಮದಲ್ಲಿ ಅಂತರ್ಜಲ ಮಟ್ಟಕ್ಕೆ ಪೂರಕವಾಗುತ್ತದೆ. ಕಾಲುವೆಯಿಂದ ನೀರು ಬಿಡಬೇಕೆಂದು ಆಗ್ರಹಿಸಿ ರಾಜ್ಯ ಬಿಜ್ಜಳ ಹೆದ್ದಾರಿಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಿದ್ದರು. ಈ ಕಾಲುವೆಯಿಂದ ೧೦ ಇಂಚು -ಪ್ ಮೂಲಕ ನೀರು ಬಿಡುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ್ದರಿಂದ ಗ್ರಾಮಸ್ಥರು ತಮ್ಮ ಪ್ರತಿಭಟನೆ ಹಿಂಪಡೆದುಕೊಂಡಿದ್ದರು.
ತಹಸೀಲ್ದಾರ ವೈ.ಎಸ್. ಸೋಮನಕಟ್ಟಿ, ಕೆಬಿಜೆಎನ್ಎಲ್ ಅಧಿಕಾರಿಗಳಾದ ಜಗದೀಶ ಹೊನ್ನಕಸ್ತೂರಿ, ಎನ್.ಎಸ್.ನರಸನಗೌಡರ, ಬಿ.ಟಿ.ದೊಡಮನಿ, ಪಿಐ ವಿಜಯಕುಮಾರ ಮರಗುಂಡಗಿ ಸಮ್ಮುಖದಲ್ಲಿ ಗ್ರಾಮಸ್ಥರು ತಮ್ಮ ಸ್ವಂತ ಖರ್ಚಿನಲ್ಲಿ ಈ ಕಾಲುವೆಯಿಂದ ಗ್ರಾಮದ ಬಾಂದಾರದವರೆಗೂ ತೆಗ್ಗು ಅಗೆದು ಫೈಪ್ ಅಳವಡಿಸುವ ಕಾರ್ಯ ಭಾನುವಾರ ಸಂಜೆ ಮಾಡಿದರು. ತಹಸೀಲ್ದಾರ ರಾತ್ರಿ 9 ಗಂಟೆಯವರೆಗೆ ಇದ್ದು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮಾಡಳಿತಾಧಿಕಾರಿಗಳಾದ ಸಂತೋಷ ಕುಂಟೋಜಿ, ರಮಾನಂದ ಚಕ್ಕಡಿ, ಪೊಲೀಸ್ ಸಿಬ್ಬಂದಿ ಇತರರು ಇದ್ದರು.
ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ , ಬಾಂದಾರಕ್ಕೆ ನೀರು ಬಿಡುವ ಕುರಿತು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಅಧಿಕಾರಿಗಳಿಗೆ ಬಗೆಹರಿಸುವಂತೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕೊನೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ ನಂತರ ಬಾಂದಾರಕ್ಕೆ ನೀರು ಬಿಡುವ ಕ್ರಮ ತೆಗೆದುಕೊಂಡಿದ್ದರಿಂದಾಗಿ ಗ್ರಾಮಸ್ಥರ ಪ್ರತಿಭಟನೆಗೆ ಫಲ ಸಿಕ್ಕಂತಾಗಿದೆ. ಕಾಲುವೆಯಿಂದ ನೀರು ಸೋಮವಾರ ಬಾಂದಾರಕ್ಕೆ ಬಂದು ತಲುಪಿದ್ದರಿಂದಾಗಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

